Homeಚಳವಳಿಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. - ಇಸ್ಮತ್ ಪಜೀರ್

ಸ್ವಾಮಿ ನಾರಾಯಣ ಗುರುಗಳು ಮತ್ತು ಮುಸ್ಲಿಮರು.. – ಇಸ್ಮತ್ ಪಜೀರ್

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಳೆದೆರಡು ದಶಕಗಳ ಕೋಮು ಸಂಘರ್ಷದ ಇತಿಹಾಸ ತೆಗೆದು ನೋಡಿದರೆ‌ ಇಲ್ಲಿ ಕೋಮು ಬೆಂಕಿಗೆ ಅತೀ ಹೆಚ್ಚು ಉರುವಲಾಗಿ ಬಳಕೆಯಾದವರು ಬಿಲ್ಲವರು ಎಂಬ ಸತ್ಯ ನಮಗೆ ಮನವರಿಕೆಯಾಗುತ್ತದೆ.‌ ಅದಾಗ್ಯೂ ಆ ಸಮುದಾಯಕ್ಕೆ ವಸ್ತುಸ್ಥಿತಿ ಯಾಕೆ ಅರ್ಥವಾಗುತ್ತಿಲ್ಲ ಎನ್ನುವುದೇ ನಮ್ಮ ಮುಂದಿರುವ ಉತ್ತರವಿಲ್ಲದ ಪ್ರಶ್ನೆ.

ಹಾಗೆ ನೋಡ ಹೋದರೆ ಬಿಲ್ಲವರು ಮತ್ತು ಮುಸ್ಲಿಮರೇನೂ ಆ ಜನ್ಮ ವೈರಿಗಳಲ್ಲ. ಇಲ್ಲಿನ ಮುಸ್ಲಿಮರಲ್ಲಿ ದೊಡ್ಡ ಸಂಖ್ಯೆಯವರು ಒಂದು ಕಾಲದ ಬಿಲ್ಲವರೋ, ದಲಿತರೋ ಆಗಿದ್ದವರು. ಸ್ವಯಂ ಘೋಷಿತ ಉಚ್ಚ ಕುಲದವರ ಶೋಷಣೆ, ದೌರ್ಜನ್ಯ ತಾಳಲಾರದೇ ಇಸ್ಲಾಂ ಧರ್ಮ ಸ್ವೀಕರಿಸಿದವರು.

ಇದನ್ನೇ ಮಲಯಾಳಂ ಮಹಾಕವಿ ಕುಮಾರನಾಶಾನ್ ತನ್ನ ಕವಿತೆಯಲ್ಲಿ ಹೀಗೆ ಬರೆದಿದ್ದಾರೆ.
“ಆಟ್ಟುಂ ವಿಲಕ್ಕುಂ ವಯಿಯಾಟ್ಟುಂ
ಮಟ್ಟುಮೀ ಕೂಟರ್ ಸಹಿಚ್ಚು
ಪೊರುದಿಮುಟ್ಟಿ ವಿಟ್ಟದಾಂ ಹಿಂದು ಮದಂ
ಜಾದಿಯಿಲ್ ತಾನ್ನ, ಕೆಟ್ಟು ಕಯಿಂಞ ನಂಬೂದಿರಿ ಮದಂ…

ಕೇರಳತ್ತಿಂಗಳ್ ಮುಸಲ್ಮಾನ್‌ಮಾರ್
ಪಶ್ಚಿಮ ಪಾರಂಙಳಿಲ್ ನಿನ್ನೋ..
ವನ್‌ಕಡಲ್ ಚೀರುಂ ತಿರಗಳ್ ಕಡನ್ನೋ…
ಹಿಮಾಲಯಮೇರಿ ವನ್ನವರೇರೆಯಿಲ್ಲ…
ರೇರೆಚ್ಚೆರುಮನ್ ಪೋಯಿ ತೊಪ್ಪಿಯಿಟ್ಟಾಲ್ ಚಿತ್ರಯವನೆತ್ತಿ ಚಾರುತ್ತರುತ್ತಿಡಾಂ..
ಚೆಟ್ಟುಂ  ತಂಬುರಾರೇ…..”

ಸಾರಾಂಶ : ಅಟಕಾಯಿಸುವುದನ್ನು, ಹೊಡೆಯುವುದನ್ನು, ದಾರಿಯಲ್ಲಿ ಕಂಡರೆ ಬಡಿಯುವುದನ್ನು… ಸಹಿಸಿ ತಾಳ್ಮೆ ಕಳಕೊಂಡ ಆ ಜನರು ಜಾತಿ ಪದ್ಧತಿಯಲ್ಲಿ ಕೆಟ್ಟು ಕೆರ ಹಿಡಿದು ಹೋದ ನಂಬೂದಿರಿಗಳ ಅಧಿಪತ್ಯದ (ಬ್ರಾಹ್ಮಣ) ಮತವನ್ನು ತ್ಯಜಿಸಿದರು.
ಕೇರಳದ ಮುಸ್ಲಿಮರಲ್ಲಿ ಪಶ್ಚಿಮ ಘಟ್ಟಗಳ ದಾಟಿಯೋ, ಕಡಲ ತೆರೆಗಳ ದಾಟಿಯೋ, ಹಿಮಾಲಯವೇರಿ ಬಂದವರು ಹೆಚ್ಚಿಲ್ಲ. ಅವರು ಹೋಗಿ ಟೊಪ್ಪಿಯಿಟ್ಟಾಗ (ಇಸ್ಲಾಂ ಸ್ವೀಕರಿಸಿದಾಗ) ಅವರ ಮೇಲಿನ ಶೋಷಣೆ ಕೊನೆಗೊಂಡಿತು.
ಈ ಕವಿತೆ ಬರೆದ ಕುಮಾರನಾಶಾನ್ ಬೇರೆ ಯಾರೂ ಅಲ್ಲ. ಬ್ರಹ್ಮಶ್ರೀ ನಾರಾಯಣ ಗುರುಗಳ ಖಾಸಾ ಶಿಷ್ಯ ಮತ್ತು ಸಂಗಡಿಗ.

ಕೇರಳದಲ್ಲಿ ಈಳವ (ಬಿಲ್ಲವ) ಸಮುದಾಯ ಮತ್ತಿತರ ಕೆಳವರ್ಗದ ಮೇಲೆ ತಿರುವಾಂಕೂರು ಅರಸರು ಮೇಲ್ವರ್ಗದವರ ಚಿತಾವಣೆಯ ಮೇರೆಗೆ ಹೇರಿದ್ದ ದುಷ್ಟ ಮತ್ತು ಅಮಾನವೀಯ ತೆರಿಗೆಯೊಂದಿತ್ತು. ಅದೇ ಮುಲಕ್ಕರ ಅರ್ಥಾತ್ ಸ್ತನ ತೆರಿಗೆ. ಕೆಳವರ್ಗದ ಮಹಿಳೆಯರು ತಮ್ಮ ಸ್ತನಗಳನ್ನು ಮುಚ್ಚುವಂತಿರಲಿಲ್ಲ. ಒಂದು ವೇಳೆ ಮುಚ್ಚಿದರೆ ಅದಕ್ಕೆ ಬಾರೀ ತೆರಿಗೆ ಕಟ್ಟಬೇಕಿತ್ತು. ಮಲಬಾರ್ ಪ್ರದೇಶವು‌ ಟಿಪ್ಪು ಸುಲ್ತಾನರ ಅಧೀನಕ್ಕೆ ಬಂದಾಗ ಟಿಪ್ಪು ಅಂತಹ ಅಮಾನವೀಯ ತೆರಿಗೆಯನ್ನು ತೆಗೆದು ಹಾಕಿದರು ಮಾತ್ರವಲ್ಲದೇ ಅಂತಹ ನೀಚ ಪದ್ಧತಿಯನ್ನು ಹೇರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟು ಅದನ್ನು ಕೊನೆಗೊಳಿಸಿದರು. ಟಿಪ್ಪು ಸುಲ್ತಾನರ ಮರಣಾನಂತರ ಮತ್ತೆ ಅದೇ ಅಮಾನವೀಯ ಪದ್ಧತಿ ಜಾರಿಗೆ ಬಂತು.‌ ಆ ಬಳಿಕ ಅದರ ವಿರುದ್ಧ ಹೋರಾಟ ಮಾಡಿ ಅದಕ್ಕೆ ಕೊನೆ ಹಾಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು.

ಇಂದು ಅದೇ ಟಿಪ್ಪುವಿನ ಸಮುದಾಯವಾದ ಮುಸ್ಲಿಮರ ವಿರುದ್ಧ ಅದೇ ಬ್ರಾಹ್ಮಣಶಾಹಿ ಶಕ್ತಿಗಳು ಬಿಲ್ಲವರನ್ನು ಎತ್ತಿ ಕಟ್ಟಿ ತಮಾಷೆ ನೋಡುತ್ತಿದೆ. ಈ ವಾಸ್ತವ ಎಲ್ಲಿಯವರೆಗೆ ಬಿಲ್ಲವರಿಗೆ ಅರ್ಥವಾಗುವುದಿಲ್ಲವೋ ಅಲ್ಲಿಯವರೆಗೆ ಅವರು ಬಲಿಪಶುವಾಗುವುದನ್ನು ತಡೆಯಲು ಯಾರಿಂದಲೂ‌ ಸಾಧ್ಯವಿಲ್ಲ.

ಸ್ವಾಮಿ ನಾರಾಯಣ ಗುರುಗಳು ಪ್ರವಾದಿ (ಸ) ಮತ್ತು ಇಸ್ಲಾಂ ಧರ್ಮದ ಬಗ್ಗೆ ಅತೀವ ಗೌರವವನ್ನೂ ಹೊಂದಿದ್ದರು.
ಅದಕ್ಕೆ ಅವರ ಒಂದು ಕವನವೇ ಸಾಕ್ಷಿ‌ಯೊದಗಿಸುತ್ತದೆ.

“ಪುರುಷಾಕೃತಿ ಪೂಂಡ ದೈವಮೋ…
ನರವಿಭ್ಯಾಕೃತಿ ಪೂಂಡ ಧರ್ಮಮೋ…
ಪರಮೇಶ ಪವಿತ್ರ ಪುತ್ರನೋ…
ಕರುಣಾಮಾನ್ ನೆಬಿ ಮುತ್ತು ರತ್ನಮೋ…..”
ಸಾರಾಂಶ : ಪುರುಷ ರೂಪ ತಾಳಿ ಬಂದ ದೇವನೋ…
ಮನುಷ್ಯ ರೂಪದಲ್ಲವತರಿಸಿದ ಧರ್ಮವೋ…
ಪರಮೇಶ್ವರ‌ನ ಪವಿತ್ರ ಪುತ್ರನೋ…
ಕರುಣಾಳು ಪ್ರವಾದಿ ಮುತ್ತು ರತ್ನವೋ…..

ಇಂದು ಅದೇ ಗುರುಗಳ ಹೆಸರಲ್ಲಿ ಹುಟ್ಟು ಹಾಕಲಾದ SNDP ಸ್ವಾಮಿ ನಾರಾಯಣಗುರು ಧರ್ಮ ಪರಿಪಾಲನಾ ಸಂಸ್ಥೆಯು ಇತಿಹಾಸವನ್ನು ಮರೆತು ಮತ್ತೆ ಅದೇ ಮನುವಾದಿಗಳ ತೆಕ್ಕೆಗೆ ಸರಿಯುತ್ತಿರುವುದನ್ನು ವರ್ತಮಾನದ ಕ್ರೂರ ವ್ಯಂಗ್ಯವೆನ್ನದೇ ವಿಧಿಯಿಲ್ಲ.

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಒಂದು ಜಾತಿ, ಒಂದು ಮತ, ಒಂದೇ ದೇವರು ಎಂಬ ಸಂದೇಶ ಸಾರಿದ ಸಂತ ನಾರಾಯಣ ಗುರುಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...