Homeಮುಖಪುಟರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

- Advertisement -
- Advertisement -

ಜೈಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೂವರು ಮುಸ್ಲಿಮರು ಸೇರಿ ನಾಲ್ವರನ್ನು ಹತ್ಯೆಗೈದ ಭಯಾನಕ ಕೃತ್ಯದ ಆರೋಪಿ ಆರ್‌ಪಿಎಫ್ ಪೇದೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಧನ ಸಹಾಯ ನೀಡಲು ಬಯಸಿದ್ದಾನೆ ಎಂದು ವರದಿಯಾಗಿದೆ.

ನಾಲ್ವರನ್ನು ಹತ್ಯೆಗೈದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಚೇತನ್ ಸಿಂಗ್ ತಮ್ಮ ಬ್ಯಾಂಕ್ ಖಾತೆಯನ್ನು ಡಿ-ಫ್ರೀಜ್ ಮಾಡಲು ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಲು ಬಯಸಿದ್ದಾನೆ ಎಂದು ಮಿಡ್‌ಡೇ ನ್ಯೂಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಇದಲ್ಲದೆ ಆತ ತನಗೆ ಉದ್ಯೋಗ ನೀಡಿದ್ದ ಸಂಸ್ಥೆಗೆ ಪತ್ರ ಬರೆದು ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಮ್ಮ ಕುಟುಂಬಕ್ಕೆ ಸಹಾಯ ಮಾಡಲು ತಮ್ಮ ಸಂಬಳ ಮುಂದುವರಿಸಬೇಕೆಂದು ಕೇಳಿಕೊಂಡಿದ್ದಾನೆ.

ವರದಿ ಪ್ರಕಾರ, ಸಿಂಗ್ ಈಗ ನಾನು ಯಾವುದೇ ಕೊಲೆಗಳನ್ನು ಮಾಡಿಲ್ಲ ಮತ್ತು ಕಳೆದ ಕೆಲವು ವರ್ಷಗಳಿಂದ ಕೋಪವನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾನೆ. ಅವನು ನನ್ನನ್ನು ಇನ್ನೊಂದು ಆತ್ಮ ವಶಪಡಿಸಿಕೊಂಡಿದೆ ಎಂದು ಭಾಸವಾಗುತ್ತದೆ ಎಂದು ಹೇಳುತ್ತಿದ್ದಾನೆ.

ಜು.31 ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಚೇತನ್‌ ಸಿಂಗ್‌ ಗುಂಡಿಟ್ಟು ಹತ್ಯೆ ಮಾಡಿದ್ದು, ಆರೋಪಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಆಘಾತಕಾರಿ ಘಟನೆಯನ್ನು ಇತರ ಪ್ರಯಾಣಿಕರು ವಿಡಿಯೋ ಮಾಡಿದ್ದರು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾಧ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು.

ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಇತ್ತೀಚೆಗೆ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ ಬಂಧಿಸಿದ್ದರು.

ಈತನ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸಿದಾಗ ಈ ಮೊದಲು ಕೂಡ ಈತ ಮುಸ್ಲಿಂ ದ್ವೇಷದ ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಎನ್ನುವುದು ಬಯಲಾಗಿದೆ. ಆರ್ ಪಿಎಫ್ ಪೇದೆ ಚೇತನ್‌ ಸಿಂಗ್‌ ಅದೇ ರೈಲಿನಲ್ಲಿ ಕೃತ್ಯ ನಡೆಸಿದ ದಿನ ಬುರ್ಖಾಧಾರಿ ಮಹಿಳೆಗೆ ಜೈ ಮಾತಾ ದಿ ಎಂದು ಘೋಷಣೆ ಕೂಗುವಂತೆ ಆಗ್ರಹಿಸಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ. ಪ್ರಕರಣದಲ್ಲಿ ಮಹಿಳೆಯನ್ನು ನಿರ್ಣಾಯಕ ಸಾಕ್ಷಿಯನ್ನಾಗಿ ಮಾಡಲಾಗಿದೆ. ವರದಿಗಳ ಪ್ರಕಾರ ರೈಲಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ.

ಹತ್ಯೆ ಆರೋಪಿ ಚೌಧರಿ ಮೊದಲು B-3 ಕೋಚ್‌ನಲ್ಲಿ ಬುರ್ಖಾ ಧರಿಸಿದ್ದ ಪ್ರಯಾಣಿಕ ಮಹಿಳೆಯನ್ನು ಗುರಿಯಾಗಿಸಿಕೊಂಡಿದ್ದ ಮತ್ತು ಗನ್‌ನ್ನು ತೋರಿಸಿ ಎರಡೆರಡು ಬಾರಿ ಜೈ ಮಾತಾ ದಿ ಎಂದು ಕೂಗುವಂತೆ ಒತ್ತಾಯಿಸಿದ್ದಾನೆ ಎಂದು ತನಿಖೆಯ ವೇಳೆ ಬಹಿರಂಗವಾಗಿತ್ತು.

ಇದನ್ನು ಓದಿ: ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...