Homeಮುಖಪುಟರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

- Advertisement -
- Advertisement -

ಜೈಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೂವರು ಮುಸ್ಲಿಮರು ಸೇರಿ ನಾಲ್ವರನ್ನು ಹತ್ಯೆಗೈದ ಭಯಾನಕ ಕೃತ್ಯದ ಆರೋಪಿ ಆರ್‌ಪಿಎಫ್ ಪೇದೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಧನ ಸಹಾಯ ನೀಡಲು ಬಯಸಿದ್ದಾನೆ ಎಂದು ವರದಿಯಾಗಿದೆ.

ನಾಲ್ವರನ್ನು ಹತ್ಯೆಗೈದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಚೇತನ್ ಸಿಂಗ್ ತಮ್ಮ ಬ್ಯಾಂಕ್ ಖಾತೆಯನ್ನು ಡಿ-ಫ್ರೀಜ್ ಮಾಡಲು ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಲು ಬಯಸಿದ್ದಾನೆ ಎಂದು ಮಿಡ್‌ಡೇ ನ್ಯೂಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಇದಲ್ಲದೆ ಆತ ತನಗೆ ಉದ್ಯೋಗ ನೀಡಿದ್ದ ಸಂಸ್ಥೆಗೆ ಪತ್ರ ಬರೆದು ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಮ್ಮ ಕುಟುಂಬಕ್ಕೆ ಸಹಾಯ ಮಾಡಲು ತಮ್ಮ ಸಂಬಳ ಮುಂದುವರಿಸಬೇಕೆಂದು ಕೇಳಿಕೊಂಡಿದ್ದಾನೆ.

ವರದಿ ಪ್ರಕಾರ, ಸಿಂಗ್ ಈಗ ನಾನು ಯಾವುದೇ ಕೊಲೆಗಳನ್ನು ಮಾಡಿಲ್ಲ ಮತ್ತು ಕಳೆದ ಕೆಲವು ವರ್ಷಗಳಿಂದ ಕೋಪವನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾನೆ. ಅವನು ನನ್ನನ್ನು ಇನ್ನೊಂದು ಆತ್ಮ ವಶಪಡಿಸಿಕೊಂಡಿದೆ ಎಂದು ಭಾಸವಾಗುತ್ತದೆ ಎಂದು ಹೇಳುತ್ತಿದ್ದಾನೆ.

ಜು.31 ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಚೇತನ್‌ ಸಿಂಗ್‌ ಗುಂಡಿಟ್ಟು ಹತ್ಯೆ ಮಾಡಿದ್ದು, ಆರೋಪಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಆಘಾತಕಾರಿ ಘಟನೆಯನ್ನು ಇತರ ಪ್ರಯಾಣಿಕರು ವಿಡಿಯೋ ಮಾಡಿದ್ದರು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾಧ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು.

ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಇತ್ತೀಚೆಗೆ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ ಬಂಧಿಸಿದ್ದರು.

ಈತನ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸಿದಾಗ ಈ ಮೊದಲು ಕೂಡ ಈತ ಮುಸ್ಲಿಂ ದ್ವೇಷದ ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಎನ್ನುವುದು ಬಯಲಾಗಿದೆ. ಆರ್ ಪಿಎಫ್ ಪೇದೆ ಚೇತನ್‌ ಸಿಂಗ್‌ ಅದೇ ರೈಲಿನಲ್ಲಿ ಕೃತ್ಯ ನಡೆಸಿದ ದಿನ ಬುರ್ಖಾಧಾರಿ ಮಹಿಳೆಗೆ ಜೈ ಮಾತಾ ದಿ ಎಂದು ಘೋಷಣೆ ಕೂಗುವಂತೆ ಆಗ್ರಹಿಸಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ. ಪ್ರಕರಣದಲ್ಲಿ ಮಹಿಳೆಯನ್ನು ನಿರ್ಣಾಯಕ ಸಾಕ್ಷಿಯನ್ನಾಗಿ ಮಾಡಲಾಗಿದೆ. ವರದಿಗಳ ಪ್ರಕಾರ ರೈಲಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ.

ಹತ್ಯೆ ಆರೋಪಿ ಚೌಧರಿ ಮೊದಲು B-3 ಕೋಚ್‌ನಲ್ಲಿ ಬುರ್ಖಾ ಧರಿಸಿದ್ದ ಪ್ರಯಾಣಿಕ ಮಹಿಳೆಯನ್ನು ಗುರಿಯಾಗಿಸಿಕೊಂಡಿದ್ದ ಮತ್ತು ಗನ್‌ನ್ನು ತೋರಿಸಿ ಎರಡೆರಡು ಬಾರಿ ಜೈ ಮಾತಾ ದಿ ಎಂದು ಕೂಗುವಂತೆ ಒತ್ತಾಯಿಸಿದ್ದಾನೆ ಎಂದು ತನಿಖೆಯ ವೇಳೆ ಬಹಿರಂಗವಾಗಿತ್ತು.

ಇದನ್ನು ಓದಿ: ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...