Homeಅಂತರಾಷ್ಟ್ರೀಯಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

ಗಾಝಾದಲ್ಲಿ ಮತ್ತೆ 700ಕ್ಕೂ ಹೆಚ್ಚು ನಾಗರಿಕರ ಹತ್ಯೆ: ಪ್ರಾದೇಶಿಕ ಸಂಘರ್ಷದ ಅಪಾಯ

- Advertisement -
- Advertisement -

4 ದಿನಗಳ ಕದನ ವಿರಾಮದ ಬಳಿಕ ಇಸ್ರೇಲ್‌ ಮತ್ತೆ ಪ್ಯಾಲೆಸ್ತೀನ್‌ ಮೇಲೆ ದಾಳಿಯನ್ನು ಮುಂದುವರಿಸಿದೆ. ಕಳೆದ 24 ಗಂಟೆಗಳಲ್ಲಿ ಗಾಝಾದಲ್ಲಿ 700ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಎಂದು ಗಾಝಾದಲ್ಲಿನ ಸರ್ಕಾರಿ ಮಾಧ್ಯಮ ಕಚೇರಿಯ ಮಹಾನಿರ್ದೇಶಕರು ಅಲ್ ಜಝೀರಾಗೆ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್‌ ದಾಳಿಯನ್ನು ಇರಾನ್‌ ಖಂಡಿಸಿದ್ದು, ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ಇಸ್ರೇಲ್‌ ಹತ್ಯಾಕಾಂಡ ಮುಂದುವರಿದಂತೆ ಗಾಝಾದ ಮೇಲೆ ಇಸ್ರೇಲ್‌ ದಾಳಿ ಕೊನೆಗೊಳ್ಳುವವರೆಗೆ ಬಂಧಿತ ಕೈದಿಗಳ ವಿನಿಮಯದ ಕುರಿತು ಮಾತುಕತೆ ಪುನರಾರಂಭಗೊಳ್ಳುವುದಿಲ್ಲ ಎಂದು ಹಮಾಸ್ ಹೇಳಿದೆ.

ಕದನ ವಿರಾಮ ಕೊನೆಗೊಳ್ಳುತ್ತಿದ್ದಂತೆ ಇಸ್ರೇಲ್‌ ಸೈನ್ಯವು ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿರುವ ನಿವಾಸಿಗಳಿಗೆ ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿದೆ. ವೆಸ್ಟ್‌ ಬ್ಯಾಂಕ್‌ ಮೇಲೆ ಇಂದು ಬೆಳಗ್ಗೆ ಇಸ್ರೇಲ್‌ ಪಡೆಗಳು ನಡೆಸಿದ ದಾಳಿಯಲ್ಲಿ 21 ವರ್ಷದ ಪ್ಯಾಲೆಸ್ತೀನ್‌ ಯುವಕನ ಹತ್ಯೆ ನಡೆದಿದೆ. ಪ್ಯಾಲೆಸ್ತೀನ್‌ನ ಪ್ರಿಸನರ್ಸ್ ಸೊಸೈಟಿಯ ಪ್ರಕಾರ, ವೆಸ್ಟ್‌ ಬ್ಯಾಂಕ್‌ ಮೇಲೆ ರಾತ್ರಿ ಇಸ್ರೇಲ್‌ ಸೇನೆ ದಾಳಿ ನಡೆಸಿ ಕನಿಷ್ಠ 60 ಪ್ಯಾಲೆಸ್ತೀನಿಯನ್ನರನ್ನು ಬಂಧಿಸಿದೆ.

ಯುನಿಸೆಫ್‌ನ ಜಾಗತಿಕ ವಕ್ತಾರರಾದ ಜೇಮ್ಸ್ ಎಲ್ಡರ್ ಅವರು ಗಾಝಾದ ದಕ್ಷಿಣದಲ್ಲಿರುವ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯೊಳಗಿನ ದೃಶ್ಯಗಳ ಬಗ್ಗೆ ವಿವರಿಸಿದ್ದಾರೆ. ಆಸ್ಪತ್ರೆಯಲ್ಲಿ ಜನರು ಸುಟ್ಟಗಾಯಗಳು, ತಲೆಗೆ ಗಂಭೀರ ಗಾಯಗಳಾಗಿ ಬಳಲುತ್ತಿದ್ದಾರೆ. ಮಕ್ಕಳು ಮೂಳೆಗಳನ್ನು ಮುರಿದುಕೊಂಡು ನರಳಾಡುತ್ತಿದ್ದಾರೆ. ಸಾವು- ಬದುಕಿನ ನಡುವೆ ಹೋರಾಡುತ್ತಿರುವ ಮಕ್ಕಳನ್ನು ನೋಡಿ ತಾಯಂದಿರು ಅಳುತ್ತಿದ್ದಾರೆ. ಇಸ್ರೇಲ್‌ ವೈಮಾನಿಕ ದಾಳಿಯಲ್ಲಿ ಒಂದು ಕಡೆ ಸಾವು ಸಂಭವಿಸಿದೆರೆ, ಇನ್ನೊಂದು ಕಡೆ ಸಾವು- ಬದುಕಿನ ನಡುವೆ ಮಕ್ಕಳ ನರಳಾಟವು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಇರಾನ್‌ನ ವಿದೇಶಾಂಗ ಸಚಿವರು ಪ್ಯಾಲೇಸ್ತೀನಿಯನ್ನರ ವಿರುದ್ಧ ಇಸ್ರೇಲ್ ತನ್ನ ಯುದ್ಧ ಅಪರಾಧಗಳನ್ನು ನಿಲ್ಲಿಸದಿದ್ದರೆ ಆಳವಾದ ಪ್ರಾದೇಶಿಕ ಸಂಘರ್ಷದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಗಾಝಾ ಮತ್ತು ವೆಸ್ಟ್‌ ಬ್ಯಾಂಕ್‌ ಮೇಲೆ ಇಸ್ರೇಲ್‌ ದಾಳಿಯನ್ನು ನಿಲ್ಲಿಸದಿದ್ದರೆ ಈ ಪ್ರದೇಶದಲ್ಲಿ ಯುದ್ಧದ ವ್ಯಾಪ್ತಿ ಆಳವಾಗಿ ವಿಸ್ತರಿಸುವ ಸಾಧ್ಯತೆಯಿದೆ ಎಂದು ಹೊಸೆನ್ ಅಮೀರ್ ಅಬ್ದುಲ್ಲಾಹಿಯಾನ್ ಹೇಳಿದ್ದಾರೆ.

ಪ್ಯಾಲೆಸ್ತೀನಿಯರನ್ನು ತಮ್ಮ ಭೂಮಿಯನ್ನು ಬಿಟ್ಟು ತೆರಳುವಂತೆ ಇಸ್ರೇಲ್‌ ಬಲವಂತ ಪಡಿಸುತ್ತಿರುವುದನ್ನು ಖಂಡಿಸಿದ ಅಬ್ಡೊಲ್ಲಾಹಿಯಾನ್ ಇಸ್ರೇಲ್ ಮಿಲಿಟರಿ ದಾಳಿಯನ್ನು ತಕ್ಷಣಕ್ಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಅ.7ರಂದು ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾದಲ್ಲಿ 15,000ಕ್ಕೂ ಅಧಿಕ ಜನರನ್ನು ಹತ್ಯೆ ಮಾಡಿದೆ. ಇದರಲ್ಲಿ 6,000ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. 30,000ಕ್ಕೂ ಅಧಿಕ ಮಂದಿ ಇಸ್ರೇಲ್‌ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಝಾದ ಆಸ್ಪತ್ರೆಗಳು ನಿರಾಶ್ರಿತರ ಶಿಬಿರಗಳಲ್ಲಿ ಜನರು ತುಂಬಿ ತುಳುಕುತ್ತಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಕತಾರ್‌ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ 4 ದಿನಗಳ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಈ ವೇಳೆ ಇಸ್ರೇಲ್- ಹಮಾಸ್‌ ಒತ್ತೆಯಾಳುಗಳ ಬಿಡುಗಡೆ, ಪ್ಯಾಲೆಸ್ತೀನ್‌ಗೆ ಮಾನವೀಯ ನೆರವಿಗೆ ಒಪ್ಪಂದ ಮಾಡಲಾಗಿತ್ತು. ಆದರೆ ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್‌ ಮತ್ತೆ ಯುದ್ಧವನ್ನು ಘೋಷಿಸಿತ್ತು.

 ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...