Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...