Homeಮುಖಪುಟಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

ಬಿಹಾರ: ಕೋಮು ವಿವಾದವನ್ನು ಹುಟ್ಟು ಹಾಕಿದ ಶಾಲಾ ಕ್ಯಾಲೆಂಡರ್‌

- Advertisement -
- Advertisement -

ಬಿಹಾರದ ಶಿಕ್ಷಣ ಇಲಾಖೆಯು ಸಾಮಾನ್ಯ ಶಾಲೆಗಳಿಗೆ ಮತ್ತು ಉರ್ದು ಶಾಲೆಗಳಿಗೆ 2024ರ ಪ್ರತ್ಯೇಕ ರಜಾದಿನದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದೆ. ಈ ಕ್ರಮವು ಬಿಹಾರದಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಕ್ಯಾಲೆಂಡರ್‌ ಬಗ್ಗೆ ವ್ಯಾಪಕವಾಗಿ ಸುಳ್ಳು ಮಾಹಿತಿಗಳನ್ನು ಹರಡಲಾಗಿದೆ.

ಬಿಹಾರದ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ ಕ್ಯಾಲೆಂಡರ್‌ನ್ನು ಹಿಂದುತ್ವ ಗುಂಪುಗಳು ವಿರೋಧಿಸಿದ್ದು, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ಅನುಗುಣವಾಗಿ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಾಮ ನವಮಿ, ಮಹಾವೀರ ಜಯಂತಿ, ಸಾಮ್ರಾಟ್ ಅಶೋಕ್ ಜಯಂತಿ, ಮತ್ತು ವೀರ್ ಕುನ್ವರ್ ಸಿಂಗ್ ಜಯಂತಿಯಂತಹ ಹಬ್ಬಗಳು ಬೇಸಿಗೆ ರಜೆಯ ಸಮಯದಲ್ಲಿ ಅಂದರೆ ಏಪ್ರಿಲ್ 15 ರಿಂದ ಮೇ 15ರ ನಡುವೆ ಇರುತ್ತದೆ. ಈ ಹಬ್ಬಗಳನ್ನು ಕ್ಯಾಲೆಂಡರ್‌ನಲ್ಲಿ ಸೇರಿಸಲಾಗಿಲ್ಲ.

ಎ.10, 11, 12 ರಂದು ಈದ್-ಉಲ್-ಫಿತರ್, ಜೂ.18,19,20ರಂದು ಈದ್-ಉಲ್-ಝೋಹಾ ಮತ್ತು ಮುಹರ್ರಂ ಹಬ್ಬಗಳಿಗೆ ರಜೆಯನ್ನು ಕ್ಯಾಲೆಂಡರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಿಕ್ಷಣ ಇಲಾಖೆಯು ರಜೆಯ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿದ ನಂತರ ಸಾಮಾಜಿಕ ಮಾದ್ಯಮಗಳಲ್ಲಿ ವಿಶೇಷವಾಗಿ ಫೇಸ್‌ಬುಕ್‌ನಲ್ಲಿ ಸರ್ಕಾರವು ಹಿಂದೂ ಹಬ್ಬಗಳಿಗೆ ಸಂಬಂಧಿಸಿದ ರಜಾದಿನಗಳನ್ನು ಕಡಿಮೆಗೊಳಿಸಿ ಮುಸ್ಲಿಮರಿಗೆ ರಜಾದಿನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹಲವರು ಸುಳ್ಳು ಪೋಸ್ಟ್‌ಗಳನ್ನು ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುಸ್ಲಿಮರನ್ನು ಸಮಾಧಾನಗೊಳಿಸಲು ಇದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರ ತಂತ್ರವಾಗಿದೆ ಎಂದು ಹಲವಾರು ಸಾಮಾಜಿಕ ಮಾದ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಪಾಟ್ನಾ ಮೂಲದ ಹಿಂದಿ ಪತ್ರಿಕೆಗಳು ಸಹ ಇದೇ  ರೀತಿ ವರದಿಯನ್ನು ಮಾಡಿದ್ದು, ಮುಸ್ಲಿಮರ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಮತ್ತು ಹಿಂದೂಗಳಿಗೆ ರಜೆಯನ್ನು ಕಡಿಮೆ ಮಾಡಲಾಗಿದೆ ಎಂದು ವರದಿ ಮಾಡಿದೆ. ಪತ್ರಿಕೆಯೊಂದು ಒಂದು ತನ್ನ ವರದಿಯಲ್ಲಿ ಶಿವರಾತ್ರಿ, ರಾಮ ನವಮಿ, ಜನ್ಮಾಷ್ಠಮಿಗೆ ರಜೆಗಳಿಲ್ಲ. ಈದ್, ಮೊಹರಂಗೆ ಹೆಚ್ಚಿನ ರಜಾದಿನಗಳನ್ನು ನೀಡಲಾಗಿದೆ ಎಂದು ವರದಿ ಮಾಡಿದೆ.

ರಾಜ್ಯ ಸರ್ಕಾರವು ಹಿಂದೂಗಳಿಗಿಂತ ಮುಸ್ಲಿಮರಿಗೆ ಆದ್ಯತೆ ನೀಡುವ ಮೂಲಕ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಈ ಬಗ್ಗೆ ಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಮಾತನಾಡಿದ್ದು, ರಜಾದಿನದ ಕ್ಯಾಲೆಂಡರ್ ಮುಸ್ಲಿಂ ಸಮುದಾಯದ ಮತಗಳನ್ನು ಗಳಿಸಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಪ್ರಯತ್ನವಾಗಿದೆ. ಸರಕಾರ ಇಂತಹ ಕೋಮುವಾದಿ ಉದ್ದೇಶದಿಂದ ಕೆಲಸ ಮಾಡಬಾರದು. ಈ ಕೋಮುವಾದಿ ಉದ್ದೇಶವನ್ನು ಸಹಿಸಲಾಗುವುದಿಲ್ಲ. ಇದು ಪಕ್ಷಕ್ಕೆ ಯಾವುದೇ ಚುನಾವಣಾ ಲಾಭವನ್ನು ತರುವುದಿಲ್ಲ ಎಂದು ಹೇಳಿದ್ದಾರೆ.

ಇದರ ಜೊತೆಗೆ ಹಿಂದೂ ರಜಾದಿನಗಳ ಕಡಿತಗೊಳಿಸಲಾಗಿದೆ ಮತ್ತು ಮುಸ್ಲಿಂ ರಜಾದಿನಗಳ ಸಂಖ್ಯೆಯಲ್ಲಿನ ಹೆಚ್ಚಳವನ್ನು ಮಾಡಲಾಗಿದೆ ಎಂದು ಲೇಖನಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಲೆಕ್ಕವಿಲ್ಲದಷ್ಟು ಕಂಡು ಬಂದಿದೆ.

ಕೆಲ ಶಾಲಾ ಶಿಕ್ಷಕರು ಈ ಬಗ್ಗೆ ಮಾತನಾಡಿದ್ದು, ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಕೆ. ಪಾಠಕ್ ಅವರು ಕ್ಯಾಂಪಸ್‌ಗಳಲ್ಲಿ ಕಠಿಣ ನೀತಿಗಳನ್ನು ಜಾರಿಗೊಳಿಸಿದ್ದಾರೆ. ಅವರು ಶಾಲೆಯಲ್ಲಿ ಶಿಕ್ಷಕರ ಇರುವಿಕೆಯ ಅವಧಿಯನ್ನು ಸಂಜೆ 5ರವರೆಗೆ ವಿಸ್ತರಿಸಿದ್ದಾರೆ. ಸಾಫ್ಟ್‌ವೇರ್ ಮೂಲಕ ಅವರು ಶಿಕ್ಷಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದಲ್ಲದೆ ಅವರು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಅವರ ಕಟ್ಟುನಿಟ್ಟಿನ ನೀತಿಗಳು ಹಲವಾರು ಶಿಕ್ಷಕರ ಅಮಾನತು ಮತ್ತು ಅವರ ಸಂಬಳದಲ್ಲಿ ಕಡಿತಕ್ಕೆ ಕಾರಣವಾಗಿವೆ. ಇದರಿಂದ ಪಾಠಕ್ ವಿರುದ್ಧ ಹಲವಾರು ಶಿಕ್ಷಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಹಾರದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಂಜಯ್ ಝಾ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದು,  ಹಿಂದೂ ಮತ್ತು ಮುಸ್ಲಿಂ ಹಬ್ಬಗಳ ರಜಾದಿನಗಳ ಸಂಖ್ಯೆಯಲ್ಲಿ ಬದಲಾಗಿಲ್ಲ.  2023ರ ರಜಾದಿನದ ಕ್ಯಾಲೆಂಡರ್ 60 ರಜಾದಿನಗಳನ್ನು ಹೊಂದಿತ್ತು. 2024ರಲ್ಲಿ 60 ರಜೆಗಳಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...