Homeಮುಖಪುಟ3 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು: ಪಕ್ಷ ಬಲವರ್ಧನೆಯ ಸಂಕಲ್ಪ ಮಾಡಿದ ಎಐಸಿಸಿ ಅಧ್ಯಕ್ಷ ಖರ್ಗೆ

3 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು: ಪಕ್ಷ ಬಲವರ್ಧನೆಯ ಸಂಕಲ್ಪ ಮಾಡಿದ ಎಐಸಿಸಿ ಅಧ್ಯಕ್ಷ ಖರ್ಗೆ

- Advertisement -
- Advertisement -

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‌ ತೆಲಂಗಾಣದಲ್ಲಿ ಮಾತ್ರ ಸರಕಾರ ರಚಿಸುವಲ್ಲಿ ಬಹುಮತವನ್ನು ಪಡೆದುಕೊಂಡಿದೆ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ನಿರೀಕ್ಷೆಗಿಂತ ಹೆಚ್ಚಿನ ಹಿನ್ನೆಡೆಯಾಗಿದ್ದು, ಕಾಂಗ್ರೆಸ್‌ಗೆ ಅವಲೋಕನ ಮಾಡುವಂತೆ ಮಾಡಿದೆ.

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,  ಎಲ್ಲಾ 4 ರಾಜ್ಯಗಳ ಜನತೆಗೆ ಧನ್ಯವಾದಗಳು. ನಾವು ತಾತ್ಕಾಲಿಕ ಹಿನ್ನಡೆಯನ್ನು ನಿವಾರಿಸುತ್ತೇವೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮಧ್ಯಪ್ರದೇಶದಲ್ಲಿ ಗೆಲುವನ್ನು ಸಾಧಿಸಲು ಮತ್ತು ಛತ್ತೀಸ್‌ಗಢ ಮತ್ತು ರಾಜಸ್ಥಾನವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಆಶಿಸುತ್ತಿತ್ತು. ಆದರೆ ಫಲಿತಾಂಶವು ಉಲ್ಟಾ ಹೊಡೆದಿದೆ. ತೆಲಂಗಾಣದಲ್ಲಿ ಒಂದು ದಶಕದಿಂದ ಅಧಿಕಾರದಲ್ಲಿದ್ದ ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿಯನ್ನು ಅಧಿಕಾರದಿಂದ ಕೆಳಗಿಳಿಸುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.

ನಾವು ಅವರಿಂದ ಪಡೆದ ಜನಾದೇಶಕ್ಕಾಗಿ ತೆಲಂಗಾಣ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಮಗೆ ಮತ ಹಾಕಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು  ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಮೂರು ರಾಜ್ಯಗಳಲ್ಲಿ ನಮ್ಮ ಸಾಧನೆ ನಿರಾಶಾದಾಯಕವಾಗಿರುವುದರಲ್ಲಿ ಸಂಶಯವಿಲ್ಲ, ಆದರೆ  ಮೂರು ರಾಜ್ಯಗಳಲ್ಲಿ ನಮ್ಮ ಪಕ್ಷವನ್ನು ಬಲಪಡಿಸಲು ಬಲವಾದ ಸಂಕಲ್ಪವನ್ನು ನಾವು ಪುನರುಚ್ಚರಿಸುತ್ತೇವೆ. ನಾವು ತಾತ್ಕಾಲಿಕ ಹಿನ್ನಡೆಗಳನ್ನು ನಿವಾರಿಸುತ್ತೇವೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ನಮ್ಮನ್ನು ಸಂಪೂರ್ಣವಾಗಿ ಸಿದ್ಧಪಡಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ  INDIA ಮೈತ್ರಿ ಪಕ್ಷಗಳು ಕಾಂಗ್ರೆಸ್‌ನ್ನು ಟೀಕಿಸಿದ್ದು, ಟಿಎಂಸಿ ಪಕ್ಷವು ಕಾಂಗ್ರೆಸ್‌  ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದೆ. ಇದು ಬಿಜೆಪಿಯ ಯಶಸ್ಸಲ್ಲ, ಇದು ಕಾಂಗ್ರೆಸ್‌ನ ಸಂಪೂರ್ಣ ವೈಫಲ್ಯ ಎಂದು ತೃಣಮೂಲ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಜಮೀನ್‌ದಾರಿ ಮನಸ್ಥಿತಿಯಿಂದ ಹೊರಬರಬೇಕು ಮತ್ತು ಮಮತಾ ಬ್ಯಾನರ್ಜಿಯಂತಹ ಇತರ ಹಿರಿಯ ನಾಯಕರ ಅನುಭವವನ್ನು ಕೇಳಿಕೊಂಡು ಕಾರ್ಯಗತಗೊಳಿಸಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್‌ಗೆ ಬಿಜೆಪಿಯೊಂದಿಗೆ ಸ್ಪರ್ಧೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಕಾಂಗ್ರೆಸ್ ಈ ಸಿಂಡ್ರೋಮ್‌ನಿಂದ ಹೊರಬರಬೇಕಾಗಿದೆ ಎಂದು ಜನತಾದಳ ಯುನೈಟೆಡ್‌ನ ಹಿರಿಯ ನಾಯಕ ಕೆ.ಸಿ.ತ್ಯಾಗಿ ಹೇಳಿದ್ದಾರೆ. ಕಾಂಗ್ರೆಸ್ ಈಗಾಗಲೇ ಇಂಡಿಯಾ ಮೈತ್ರಿಕೂಟದ ಘಟಕ ಪಕ್ಷಗಳಿಂದ ಸಾಕಷ್ಟು ದೂರ ಸರಿದಿದೆ. ಕಾಂಗ್ರೆಸ್ ಪಕ್ಷವು ಡಿ.6ರಂದು ಕರೆದಿರುವ ಮೈತ್ರಿಕೂಟದ ಸಭೆಯನ್ನು ವ್ಯಂಗ್ಯವಾಡಿದ ಕೆ.ಸಿ.ತ್ಯಾಗಿ , ಬೆಳೆಗಳು ಒಣಗಿರುವಾಗ ಮಳೆ ಬಂದರೇನು ಉಪಯೋಗ ಎಂದು ಕೇಳಿದ್ದಾರೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...