HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...