HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...