Homeಕರ್ನಾಟಕಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಕಾರು ಬೈಕ್ ಢಿಕ್ಕಿ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

- Advertisement -
- Advertisement -

ಶಾಸಕ ಹೆಚ್‌ಡಿ ರೇವಣ್ಣ ಅವರ ಪತ್ನಿ, ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಸಾಲಿಗ್ರಾಮದ ಬಳಿ ಬೈಕೊಂದು ಢಿಕ್ಕಿ ಹೊಡೆದಿದೆ. ಘಟನೆ ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದು, ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ KA-03-NK-5 ನಂಬರಿನ ಕಾರಿಗೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಶಿವಣ್ಣ ಎಂಬಾತನ ಬೈಕ್‌ ಢಿಕ್ಕಿ ಹೊಡೆದಿದೆ. ಘಟನೆ ಆಕಸ್ಮಿಕವಾಗಿದೆ ಆದರೆ ಬೈಕ್ ಸವಾರನ ವಿರುದ್ಧ ಭವಾನಿ ರೇವಣ್ಣ ಅವಾಚ್ಯವಾಗಿ ನಿಂದಿಸಿದ್ದಾರೆ.

ಬೋರ್ಡ್‌ ಎಲ್ಲಾ ಸಖತ್ ಡ್ಯಾಮೇಜ್‌ ಆಗಿದೆ, ಎಲ್ಲಿಗೆ ನುಗ್ಗಿಸ್ತೀಯಾ ಸುಟ್ಟ ಹಾಕ್ರೋ…. ಈ ಗಾಡಿ ಎಷ್ಟು ಡ್ಯಾಮೇಜ್‌ ಆಗಿದೆ, ಹೆಂಗೆ ರೆಡಿ ಮಾಡ್ಸೋದು? ಎಲ್ಲಾ ಹೋಗಿದೆ, ನೀನ್ ಫೋನ್ ತಗೋಬೇಡ, ನಡಿ ಆಚೆಗೆ ಯಾವನು ಸೀಝ್ ಮಾಡಿ ಗಾಡಿ. ಅವನಿಗೆ ಬೈಕ್ ಮುಟ್ಟಬೇಡ ಅಂತ ಹೇಳು. ಸಾಲಿಗ್ರಾಮ ಎಸ್‌ಐ ಬರಲು ಹೇಳು. ಒಂದುವರೆ ಕೋಟಿ ರೂಪಾಯಿ ಗಾಡಿ ಅದು, ಅದನ್ನು ಡ್ಯಾಮೇಜ್ ಮಾಡಿ ಬಿಟ್ಟಿದ್ದಾನೆ. ಏನ್ ಅರ್ಜೆಂಟ್ ಇತ್ತು? ಏನ್ ದೇಶ ಮುಳುಗಿ ಹೋಗಿತ್ತಾ ಎಂದೆಲ್ಲಾ ಹಿಗ್ಗಾ ಮುಗ್ಗ ನಿಂದಿಸಿದ್ದಾರೆ.

ಈ ವೇಳೆ ಅಕ್ಕ ಗಾಡಿ ತೆಗೀರಿ, ಹೋಗೋಣ ಎಂದು ಸ್ಥಳದಲ್ಲಿ ಇದ್ದವರು ಹೇಳಿದ್ದು, ಅದಕ್ಕೆ ಗಾಡಿ ತಗಂಡು ಏನ್ ಮಾಡೋಣ? ಕೊಡ್ತಿಯಾ 50 ಲಕ್ಷ ರಿಪೇರಿ ಮಾಡ್ಲಿಕೆ ಎಂದು ಅವರನ್ನೇ ಪ್ರಶ್ನಿಸಿದ್ದಾರೆ. ನಿಂತಿದ್ದವರು ದುಡ್ಡು ಕೊಡುವ ಹಾಗಿದ್ದರೆ ನ್ಯಾಯ ಮಾತನಾಡಲು ಬನ್ನಿ ಎಂದು ಬೈದಾಡಿದ್ದಾರೆ.

ಒಂದುವರೆ ಕೋಟಿ ರೂಪಾಯಿ ಗಾಡಿ, ಬೋರ್ಡ್ ಎಲ್ಲಾ ಏನು ಇಲ್ಲ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್‌ಗೆ ಸಿಗಾಕಂಡು, ನನ್ನ ಕಾರು ಡ್ಯಾಮೇಜ್ ಮಾಡಕೆ ನೀನ್ ಯಾವನು? ಒಂದುವರೆ ಕೋಟಿ ರೂಪಾಯಿ ಡ್ಯಾಮೇಜ್ ಯಾವನ್ ಕಟ್ಟೋನು? ಎಂದು ರಸ್ತೆಗಿಳಿದು ಬೈಕ್ ಸವಾರನನ್ನು ಭವಾನಿ ರೇವಣ್ಣ ನಿಂದಿಸಿದ್ದಾರೆ.

ಬೈಕ್ ಸವಾರನ ವಿರುದ್ಧ ದೂರು

ಭವಾನಿ ರೇವಣ್ಣ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ದೂರು ದಾಖಲಾಗಿದೆ. ಬೈಕ್ ಸವಾರ ಶಿವಣ್ಣ ಎಂಬಾತನ ಮೇಲೆ ಭವಾನಿ ಕಾರು ಚಾಲಕ ಮಂಜುನಾಥ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಬೈಕ್ ಸವಾರನ ಮೇಲೆ ಸಿಆರ್‌ಪಿಸಿ ಸೆಕ್ಷನ್ 157 ರಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಭವಾನಿ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ಭವಾನಿ ರೇವಣ್ಣ ಬೈಕ್‌ ಚಾಲಕನಿಗೆ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಬಳಕೆದಾರರು ಭವಾನಿ ರೇವಣ್ಣ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕ ಬೈಕ್‌ ಸವಾರನ ಆರೋಗ್ಯ ವಿಚಾರಿಸದೆ ಭವಾನಿ ತಮ್ಮ ಕಾರಿನ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಇದು ದುರಹಂಕಾರ ಎಂದು  ಕೆಲವರು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್‌ ಮಾಡಿದ್ದು, ಆಕಸ್ಮಿಕವಾಗಿ ನಡೆಯುವ ಘಟನೆಗೆ ಈ ರೀತಿಯ ವರ್ತನೆ ಸರಿಯಲ್ಲ. ನಿಮ್ಮ ವಾಹನಕ್ಕೆ ವಿಮೆ ಕ್ಲೈಮ್‌ ಮಾಡಬಹುದು. ಬೈಕ್‌ ಸವಾರನ ಪ್ರಾಣಕ್ಕೆ ಏನಾದರೂ ಆದರೆ ಯಾರು ಹೊಣೆ? ಅಹಂಕಾರದ ಮಾತುಗಳನ್ನು ಸ್ವಲ್ಲ ಕಡಿಮೆ ಮಾಡಿ ಎಂದು ಬರೆದುಕೊಂಡಿದ್ದಾರೆ.

ಅವ್ಯಾಚ ಪದಗಳನ್ನು ಬಳಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಕೆಲವರು, ಬಡವ ಸತ್ರೂ ಇವರಿಗೆ ಚಿಂತೆ ಇಲ್ಲ. ಆದರೆ ಇವರ ಒಂದೂವರೆ ಕೋಟಿ ಕಾರಿಗೆ ಏನು ಆಗಬಾರದು, ದೊಡ್ಡ ಗೌಡರ ಮನೆಗೆ ದೊಡ್ಡತನ ನೋಡಿ,  ಅಕ್ಕೋ ಸಮಾಧಾನ ಮಾಡ್ಕೊಳಿ ಎಂದೆಲ್ಲಾ ನೆಟ್ಟಿಗರು ಬರೆದುಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ರಾ.ಚಿಂತನ್‌, ಸಾಲಿಗ್ರಾಮದ ಬಳಿ ಬಡ ಬೈಕ್ ಸವಾರ ತಮ್ಮ ಕಾರಿಗೆ ಆಕಸ್ಮಿಕವಾಗಿ ಗುದ್ದಿದ್ದಕ್ಕೆ ಭವಾನಿ ರೇವಣ್ಣ ಅವರ ಪ್ರತಿಕ್ರಿಯೆ ಇದು. ಬಡವ ನೀನು ಬೇಕಾದ್ರೆ ಸಾಯಿ, ನನ್ನ ಕಾರು ಡ್ಯಾಮೇಜ್ ಆಗಿದ್ದು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶ ಸಾರಿದ ಇವರು ರೈತ ನಾಯಕ, ಮಣ್ಣಿನ ಮಗ ದೇವೇಗೌಡರ ಸೊಸೆ. ಶಾಸಕ ರೇವಣ್ಣ ಅವರ ಪತ್ನಿ, ಸಂಸದ ಪ್ರಜ್ವಲ್ ಅವರ ತಾಯಿ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅತ್ತಿಗೆ!

ಅಂದಹಾಗೆ, ಈ ದುಬಾರಿ ಕಾರಿನ ಸ್ಕ್ರಾಚ್ ರಿಪೇರಿಗೆ ಒಂದೆರಡು ಲಕ್ಷ ಖರ್ಚುಗಬಹುದೇನೋ… ಆ ಹಣ ಗೌಡರ ಕುಟುಂಬಕ್ಕೆ ಒಂದು ದಿನದ ಟೀ ಖರ್ಚಿಗಿಂತ ಕಡಿಮೆ. ಆದರೆ ಆ ಬಡ ರೈತ ತನ್ನ ಬೈಕ್ ರಿಪೇರಿ ಮಾಡಿಸಲು ಸಾಲ ಮಾಡಬೇಕು. ಅವನು ಸತ್ತಿದ್ದರೆ ಕುಟುಂಬ ಬೀದಿಗೆ ಬೀಳಬೇಕಿತ್ತು!

“ಬಡವ ನೀನು ಸತ್ತರೆ ಸಾಯಿ, ನನ್ನ ಕಾರು ನನಗೆ ಮುಖ್ಯ…” ಎಂಬ ಅಮೂಲ್ಯವಾದ ಸಂದೇಶ ಸಾರಿದ… ಭವಾನಿ ರೇವಣ್ಣ ಅವ್ರೇ.. So beautiful, so elegant, just looking like a wow’

ಅದೆಲ್ಲಾ ಇರ್ಲಿ… ನಿಮ್ಮ ಕಾರಿಗೆ ನಂಬರ್ ಪ್ಲೇಟ್ ಯಾಕಿಲ್ಲ ಮೇಡಂ? tinted glass ಬೇರೆ Heavy Dark ಇದೆ! ಅಲ್ಲಿಗೆ ಬಂದ ಪೊಲೀಸರು ಕೇಸ್ ಏನಾದ್ರೂ ಹಾಕಿದ್ರಾ? ಇಲ್ವಾ? ಎಂದು ಪೋಸ್ಟ್‌ ಮಾಡಿದ್ದಾರೆ.

ಇನ್ನೋರ್ವ ಫೇಸ್ಬುಕ್‌ ಬಳಕೆದಾರರಾದ ಮಂಜುನಾಥ ಗೌಡ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಬಡವ ಬೇಕಿದ್ದರೆ ಸತ್ತರೆ ಸಾಯಬಹುದು ಆದರೆ ಭವಾನಿ ರೇವಣ್ಣ ಅವರ ಒಂದೂವರೆ ಕೋಟಿಯ ಕಾರಿಗೆ ಮಾತ್ರ ಯಾವುದೇ ಡ್ಯಾಮೇಜ್ ಆಗಬಾರದು ಅಷ್ಟೇ….

ಬಡವರ ಬಗ್ಗೆ ಉದ್ದುದ್ದ ಬೊಗಳೆ ಬಿಡುವ H D Kumaraswamy ಅವರು ತಮ್ಮ ಅತ್ತಿಗೆಯವರ ಈ ಮುತ್ತಿನಂಥ ಮಾತುಗಳ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ದಿನೇಶ್‌ ದೊಡ್ಡಮನೆ ಎಂಬವರು ಈ ಕುರಿತು ಪೋಸ್ಟ್‌ ಮಾಡಿದ್ದು, ಒಂದೂವರೆ ಕೋಟಿ ಕಾರು, ಮೈ ತುಂಬಾ ಬಂಗಾರ, ಹತ್ತು ತಲೆ ಮಾರು ಕೂತು ತಿಂದರೂ ಕರಗದ ಆಸ್ತಿ, ಮಾವ ಮಾಜಿ ಪ್ರಧಾನಿ, ಮೈದುನ ಮಾಜಿ ಸಿಎಂ, ಗಂಡ ಮಾಜಿ ಸಚಿವ, ನಾದಿನಿ ಮಾಜಿ ಶಾಸಕಿ, ಒಬ್ಬ ಮಗ ಎಂಪಿ, ಇನ್ನೊಬ್ಬ ಮಗ ಎಂಎಲ್ಸಿ, ಇನ್ನೂ ನೀವು ಜಿಪಂ ಮಾಜಿ ಅಧ್ಯಕ್ಷರು ಇಷ್ಟೆಲ್ಲಾ ಇರುವ ನಿಮಗೆ ಅಹಂಕಾರ, ದುರಹಂಕಾರ ಸರ್ವೇ ಸಾಮಾನ್ಯ ಬಿಡಿ…
ಒಬ್ಬ ವ್ಯಕ್ತಿಯ ಜೀವಕ್ಕಿಂತ ನಿನ್ನ ಒಂದೂವರೆ ಕೋಟಿ ಕಾರಿನ 150 ರೂಪಾಯಿ ನಂಬರ್ ಪ್ಲೇಟ್ ಹೆಚ್ಚಾಯಿತಲ್ಲ ತಾಯಿ. ಸಾಯಂಗಿದ್ರೆ ನೀನು ಸಾಯಬೇಕಿತ್ತು ಬಸ್ಸಿಗೆ ಏನಾದ್ರೂ ಸಿಕ್ಕಾಕೊಂಡು, ನನ್ನ ಕಾರ್ ಬೇಕಿತ್ತಾ, ನನ್ನ 1.5 ಕೋಟಿ ರೂಪಾಯಿ ಕಾರಿನ ನಂಬರ್ ಪ್ಲೇಟ್ ಹಾಳು ಮಾಡಿ ಬಿಟ್ಟಲ್ಲ,  ಇದು ದರ್ಪದ, ದುರಹಂಕಾರದ ಮಾತು ಮಾತ್ರವಲ್ಲ ಶ್ರೀಮಂತಿಕೆಯ ಮದ ಕೂಡ ತಲೆಗೆ ಹತ್ತಿದೆ ಎಂದರೆ ತಪ್ಪಾಗಲಾರದು, ಬಡವರನ್ನು ಜನ ಸಾಮಾನ್ಯರನ್ನು ನೀವುಗಳು ಕಾಣುವ ಪರಿ ಇದು. ನಿಮ್ಮಂತವರನ್ನು ನೋಡ್ತಾ ಇದ್ರೆ ಫ್ರಾನ್ಸಿನ ಲೂಯಿ ದೊರೆಗಳು ನೆನಪಾಗಗಾದೇ ಇರರು. ಬಹುಶಃ ಅಪಘಾತದಲ್ಲಿ ಭಾಗಿಯಾದ ವ್ಯಕ್ತಿ ಕೂಡ ಆಕೆಯ ಹಿಂಬಾಲಕ ಆಗಿದ್ದರು ಆಗಿರಬಹುದು ಮತ್ತೆ ಚುನಾವಣೆ ಬಂದಾಗ ಅದೇ ವ್ಯಕ್ತಿಗೆ ಇಂದಿನ ಅವಮಾನ ಮರೆತು ವೋಟ್ ಹಾಕುವುದರಲ್ಲಿ ಅನುಮಾನ ಕೂಡ ಇಲ್ಲ ಅಥವಾ ನಾಳೆ ಮಾದ್ಯಮದ ಮುಂದೆ ಅಮ್ಮವರು ಹಾಗೆ ಹೇಳಿಲ್ಲ ನನ್ನದೇ ತಪ್ಪು ಎನ್ನುವ ಹೇಳಿಕೆ ನೀಡಲೂಬಹುದು. ಆದ್ರೆ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ..?
ಜನ ಸಾಮಾನ್ಯರಾದ ನಾವುಗಳು ವಿಚಾರ ಮಾಡುವುದು ಬಹಳಷ್ಟಿದೆ ನನ್ನದು ಆ ಪಕ್ಷ ನನ್ನದು ಈ ಪಕ್ಷ ಅಂತ ಕಿತ್ತಾಡ್ತಾ ಇರುತ್ತೇವೆ ಹೊರತು ಇಂಥ ವಿಚಾರಗಳನ್ನು ಧೈರ್ಯವಾಗಿ ಖಂಡಿಸುವುದು ಇಲ್ಲ, ಇಂಥವರ ವಿರುದ್ಧ ಯೋಗ್ಯರನ್ನು ಆಯ್ಕೆ ಮಾಡುವುದು ಇಲ್ಲ ಎಂದು ಬರೆದುಕೊಂಡಿದ್ದಾರೆ.

https://m.facebook.com/story.php?story_fbid=pfbid02rriCzFnZ2TUQAuPfb2SFTJTDp5eRCP1rWV5UkDqhT5ZGtdcAuFLjAgUKZUVuDq8vl&id=100011214451587&mibextid=RtaFA8

 

https://m.facebook.com/story.php?story_fbid=pfbid021eiv9wJDwgYiK5PwRB9p6J3UPsC5DNpE23wf3dW2Xmsh58yPgMVbU2nKpCL2vUF9l&id=100002096847608&mibextid=RtaFA8

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...