Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...