Homeಮುಖಪುಟಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

- Advertisement -
- Advertisement -

ಕದನ ವಿರಾಮ ಕೊನೆಗೊಂಡ ಬೆನ್ನಲ್ಲೇ ಇಸ್ರೇಲ್‌ ಗಾಝಾ ಮೇಲೆ ಮತ್ತೆ ದಾಳಿ ಪ್ರಾರಂಭಿಸಿತ್ತು. ಕಳೆದ ಶುಕ್ರವಾರದ ಬಳಿಕ ಗಾಝಾದಲ್ಲಿ 700ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಗಾಝಾ ಮೇಲಿನ ಹೊಸ ದಾಳಿಯನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ಇಸ್ರೇಲ್‌ ಮಿಲಿಟರಿಯ ಪ್ರಧಾನ ಕಛೇರಿಯ ಹೊರಗೆ ಶನಿವಾರ ರಾತ್ರಿ ಡಜನ್ಗಟ್ಟಲೆ ಜನರು ಪ್ರತಿಭಟನೆ ನಡೆಸಿದ್ದಾರೆ.

ಗಾಝಾ ಮೇಲಿನ ದಾಳಿಯು ಹಮಾಸ್‌ ಒತ್ತೆಯಾಳುಗಳನ್ನಾಗಿಸಿದ 130 ಒತ್ತೆಯಾಳುಗಳ ಬಿಡುಗಡೆ ತಡೆಗೆ  ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ರೇಲ್ ರಕ್ಷಣಾ ಪಡೆಯ ಕಿರಿಯಾ ಮಿಲಿಟರಿ ನೆಲೆಯ ಸುತ್ತಲೂ ರ್ಯಾಲಿಯನ್ನು ನಡೆಸಲಾಗಿದೆ. ತುರ್ತ ಕ್ಯಾಬಿನೆಟ್‌ ಸಭೆ ಕರೆದು ಯುದ್ಧ ವಿರಾಮಕ್ಕೆ ಆಗ್ರಹಿಸಲಾಗಿದೆ.

ಪ್ರತಿಭಟನೆಯ ಭಾಗವಾಗಿದ್ದ ಹಾಸ್ಯನಟ ನೋಮ್ ಶುಸ್ಟರ್ ಎಲಿಯಾಸ್ಸಿ ಮಾತನಾಡುತ್ತಾ, ಶುಕ್ರವಾರ ಆರಂಭಿಸಿದ ಯುದ್ಧ ಪುನರಾರಂಭಿಸುವ ನಿರ್ಧಾರವು ಒತ್ತೆಯಾಳುಗಳ ಕುಟುಂಬಸ್ಥರನ್ನು ಮತ್ತಷ್ಟು ದುಃಖಕ್ಕೆ ತಳ್ಳುವಂತಿದೆ. ಅವರ ತಂತ್ರ ಏನು? ಗಾಝಾದ ಮೇಲೆ ನಿರಂತವಾಗಿ ಬಾಂಬ್‌ ದಾಳಿಯನ್ನು ನಡೆಸುವುದಾ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ಅನೇಕರು ಯುದ್ಧ ವಿರೋಧಿಗಳು, ಈ ಕ್ರಿಮಿನಲ್ ಸರ್ಕಾರವನ್ನು ತಡೆಯಲು ನಾವು ಎಲ್ಲವನ್ನೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ರಾಜಕೀಯ ಪ್ರಯತ್ನಗಳು ಮತ್ತು ರಾಜತಾಂತ್ರಿಕ ಒಪ್ಪಂದಗಳು ಮಾತ್ರ ಜನರನ್ನು ಜೀವಂತವಾಗಿರಿಸಬಹುದು ಎಂದು ಶಸ್ಟರ್-ಎಲಿಯಾಸ್ಸಿ ಹೇಳಿದ್ದಾರೆ.

ಅಪಹರಣಕ್ಕೊಳಗಾದ ಕೆಲ ಒತ್ತೆಯಾಳುಗಳ ಕುಟುಂಬಸ್ಥರು ಇದೇ ಮೊದಲ ಬಾರಿಗೆ ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಯೆಲ್ ಅಡಾರ್ ಎಂಬವರು ಭಾಗವಹಿಸಿದ್ದರು. ಅವರ ಮಗ ತಮೀರ್ ಈಗಲೂ ಹಮಾಸ್‌ ವಶದಲ್ಲಿದ್ದಾರೆ. 85 ವರ್ಷದ ಅತ್ತೆ ಯಾಫಾ ಅವರನ್ನು ಒಂದು ವಾರದ ಹಿಂದೆ ಹಮಾಸ್‌ ಬಿಡುಗಡೆ ಮಾಡಿತ್ತು.

ಪ್ರತಿಭಟನೆಯ ವೇಳೆ ಟೆಲ್ ಅವಿವ್ ಪ್ರದೇಶವನ್ನು ಗುರಿಯಾಗಿಟ್ಟುಕೊಂಡು ಗಾಝಾದಿಂದ ರಾಕೆಟ್ ದಾಳಿ ನಡೆಯುತ್ತದೆ ಎಂದು ಇಸ್ರೇಲ್‌ ಸೇನೆ ಸೈರನ್‌ನಲ್ಲಿ ಎಚ್ಚರಿಕೆ ನೀಡಿದ್ದು, ಈ ವೇಳೆ ಪ್ರತಿಭಟನೆಯನ್ನು ಕೈಬಿಡಲಾಗಿದೆ.

ಬೆಂಜಮಿನ್ ನೆತನ್ಯಾಹು ಅವರ ಎಸ್ಟೇಟ್ ಇರುವ ಸಿಸೇರಿಯಾದಲ್ಲಿ ಮತ್ತೊಂದು ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯಿತು. ನೋವಾ ಸಂಗೀತೋತ್ಸವದಲ್ಲಿ ಹತ್ಯೆಗೀಡಾದ ಒರಿಯಾಳ ತಂದೆ ಎರಾನ್ ಲಿಟ್‌ಮ್ಯಾನ್, ನೆತನ್ಯಾಹುಗೆ  ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಇಸ್ರೇಲ್‌ನಲ್ಲಿ 1,200 ಜನರ ಸಾವಿಗೆ ಕಾರಣವಾದ ಅ.7ರ ಹಮಾಸ್‌ ದಾಳಿಗೆ ಇಸ್ರೇಲ್‌ ಮಿಲಿಟರಿಯನ್ನು  ಲಿಟ್‌ಮ್ಯಾನ್ ಟೀಕಿಸಿದ್ದಾರೆ. ಇಸ್ರೇಲ್‌ ಸರ್ಕಾರ ಮತ್ತು ನೆತನ್ಯಾಹು ಕೈಗಳು ರಕ್ತದಿಂದ ಆವೃತವಾಗಿವೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮೊದಲು ಟೆಲ್ ಅವಿವ್‌ನ ಮ್ಯೂಸಿಯಂ ಆಫ್ ಆರ್ಟ್‌ನ ಹೊರಗೆ ಸಾವಿರಾರು ಜನರು ಭಾಗವಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಯುದ್ಧದ ಪುನರಾರಂಭವು ಮತ್ತಷ್ಟು ಒತ್ತೆಯಾಳುಗಳ ಬಿಡುಗಡೆಗಳ ನಿರೀಕ್ಷೆಯನ್ನು  ಹುಸಿಗೊಳಿಸಿದೆ. 7 ದಿನಗಳ ಕದನವಿರಾಮವು ಇಸ್ರೇಲ್‌ನ ಮಹಿಳೆಯರು ಮತ್ತು ಮಕ್ಕಳು ಸೇರಿ 81 ಮಂದಿಯನ್ನು ಮತ್ತು 24 ವಿದೇಶಿ ಪ್ರಜೆಗಳನ್ನು ಹಮಾಸ್‌ ಬಿಡುಗಡೆ ಮಾಡಲು ಸಾಧ್ಯವಾಗಿದೆ.

ಕಾಲ್ಡೆರಾನ್ ಎಂಬವರ ಎರಡು ಮಕ್ಕಳನ್ನು ಇತ್ತೀಚೆಗೆ ಹಮಾಸ್‌ ಬಿಡುಗಡೆ ಮಾಡಿತ್ತು. ಈ ಬಗ್ಗೆ ಮಾತನಾಡಿದ ಕಾಲ್ಡೆರಾನ್, ಒಂದು ಪವಾಡ ಸಂಭವಿಸಿದೆ ಮತ್ತು ಎಲ್ಲರಿಗೂ ಪವಾಡ ಸಂಭವಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಒತ್ತೆಯಾಳುಗಳು ಬಿಡುಗಡೆಗೊಳ್ಳುವವರೆಗೂ ಪೋಷಕರು ಜೀವಂತವಾಗಿರುತ್ತಾರೆ ಎಂದು ಅವರಿಗೆ ತಿಳಿದಿರಲಿಲ್ಲ ಎಂದು  ಹೇಳಿದ್ದಾರೆ.

ಕದನ ವಿರಾಮದ ಬಳಿಕ ಇಸ್ರೇಲ್‌ ಯುದ್ಧ ಮರು ಪ್ರಾರಂಭಿಸಿದ್ದರಿಂದ ಇಸ್ರೇಲ್‌ನಲ್ಲಿ ಆಂತರಿಕವಾಗಿ ಪ್ರತಿಭಟನೆ ಭುಗಿಲೆದ್ದಿದೆ. ಇಸ್ರೇಲ್‌ ಕ್ಯಾಬಿನೆಟ್‌ ಸಭೆ ನಡೆಸಿ ತುರ್ತು ಕದನ ವಿರಾಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ರಾಮಮಂದಿರಕ್ಕೆ ಧನಸಹಾಯ ನೀಡಲು ಬಯಸಿದ ನಾಲ್ವರ ಹಂತಕ ಪೇದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...