Homeಕರ್ನಾಟಕಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ...

ಹಿಂದಿ ಹೇರಿಕೆ ಸಹಿಸುವುದಿಲ್ಲ; ಹಿಂದಿ ಭಾಷಾ ದಿನಾಚರಣೆಗೆ ಆಸ್ಪದವಿಲ್ಲ. ಹಿಂದಿ ದಿನದ ವಿರುದ್ಧ ಕರಾಳ ದಿನ ಆಚರಣೆಗೆ ಕನ್ನಡಿಗರ ಸಜ್ಜು

ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ

- Advertisement -
- Advertisement -

ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿನವನ್ನು ಒಕ್ಕೂಟದ ಸರ್ಕಾರ ಆಚರಿಸುತ್ತಾ ಬಂದಿದೆ. ಈ ಹಿಂದಿ ದಿನದ ಆಚರಣೆಯನ್ನು ರದ್ದುಗೊಳಿಸುವಂತೆ ಹಲವಾರು ಹೋರಾಟಗಳು ನಡೆಯುತ್ತಿವೆ. ಆದರೂ ತನ್ನ ನಿಲುವನ್ನು ಬದಲಾಯಿಸಿಕೊಳ್ಳದ ಸರ್ಕಾರದ ಧೋರಣೆಯನ್ನು ವಿರೋಧಿಸಿ ಹಿಂದಿ ದಿನವನ್ನು ರದ್ದು ಮಾಡುವಂತೆ ಆಗ್ರಹಿಸಿ ಕನ್ನಡಿಗರು ಕರಾಳ ದಿನಾಚರಣೆಗೆ ಮುಂದಾಗಿದ್ದಾರೆ. ನಾಳೆ ಬೆಂಗಳೂರಿನಲ್ಲಿರುವ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲು ಸಿದ್ದತೆ ನಡೆಸಿದ್ದಾರೆ. ಕೇವಲ ಹಿಂದಿ ಭಾಷಾ ದಿನದ ಬದಲಿಗೆ ಭಾರತ ಭಾಷಾ ದಿನವನ್ನು ಆಚರಿಸಬೇಕೆಂದು ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಿದ್ದು, ಹೋರಾಟಗಾರರ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಆಗ್ರಹ ಪತ್ರವನ್ನು ನೀಡಲಿದ್ದಾರೆ.

ಭಾರತ ಒಂದು ವೈವಿದ್ಯತೆಯಿಂದ ಕೂಡಿದ ಒಕ್ಕೂಟ ರಾಷ್ಟ್ರ. ಬಹುತ್ವದಿಂದ ಕೂಡಿರುವ ಈ ದೇಶದಲ್ಲಿ ಎಲ್ಲಾ ಸಂಸ್ಕøತಿ, ಭಾಷೆ, ಜನಾಂಗ, ಆಚಾರ-ವಿಚಾರಗಳನ್ನೂ ಸಮಾನ ಗೌರವದಿಂದ ಆಚರಿಸುವ ಸ್ವಾತಂತ್ರ್ಯವನ್ನು ಎಲ್ಲಾ ವರ್ಗಗಳಿಗೂ ಸಂವಿಧಾನಿಕವಾಗಿ ನೀಡಲಾಗಿದೆ. ಆದರೆ ಹಲವಾರು ವರ್ಷಗಳಿಂದ ಉತ್ತರ ಭಾರತದ ಸಂಸ್ಕøತಿಯನ್ನು ದಕ್ಷಿಣ ಭಾರತೀಯರ ಮೇಲೆ ಬಲವಂತವಾಗಿ ಹೇರುವ ಧೋರಣೆಯನ್ನು ಒಕ್ಕೂಟ ವ್ಯವಸ್ಥೆಯ ಸರ್ಕಾರ ತೋರುತ್ತಾ ಬಂದಿದೆ. ಅದರಲ್ಲಿ ಹಿಂದಿ ಭಾಷೆಯ ಹೇರಿಕೆಯೂ ಪ್ರಮುಖವಾದದ್ದು. ಭಾರತದಲ್ಲಿ ಹಿಂದಿ ಭಾಷೆಯನ್ನು ಉತ್ತೇಜಿಸುವ ಸಲುವಾಗಿ 1953ರಿಂದ ಸೆಪ್ಟೆಂಬರ್ 14 ರಂದು ಹಿಂದಿ ಭಾಷಾ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಆರಂಭಿಸಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತೀಯರ ಮೇಲೆ ಹಿಂದಿ ಹೇರುವ ಕೆಲಸಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕುಮ್ಮಕ್ಕು ನೀಡುತ್ತಾ ಬಂದಿದೆ.

ಕೇಂದ್ರದ ಹಿಂದಿ ಹೇರಿಕೆಯ ಧೋರಣೆ ಹೆಚ್ಚಾದಂತೆ, ಕನ್ನಡಿಗರು ಹಿಂದಿ ಹೇರಿಕೆಯನ್ನು ಕಠುವಾಗಿ ವಿರೋಧಿಸುತ್ತಾ ಬಂದಿದ್ದಾರೆ. ನಮ್ಮದು ಹಿಂದಿ ಒಕ್ಕೂಟ ರಾಷ್ಟ್ರವಲ್ಲ. ಎಲ್ಲಾ ಭಾಷೆಗಳಿಗೂ ತಮ್ಮದೇ ಆದ ಮಹತ್ವವಿದೆ. ಹಾಗಾಗಿ ನಮ್ಮೆಲ್ಲರ ತೆರಿಗೆ ಹಣದಿಂದ ಕೇವಲ ಒಂದು ಭಾಷೆಯ ಪ್ರಚಾರ ಮತ್ತು ಹೇರಿಕೆ ಮಾಡುವುದನ್ನು ನಾವು ಒಪ್ಪುವುದಿಲ್ಲ ಎಂದಿರುವ ಕನ್ನಡಿಗರು, ಹಿಂದಿ ಬಿಟ್ಟು ಉಳಿದ ಭಾಷೆಗಳ ಪ್ರಚಾರಕ್ಕೆ ಕೇಂದ್ರ ಸರ್ಕಾರವೇಕೆ ಮುಂದಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಿಂದಿ ದಿನವನ್ನು ಭಾರತೀಯ ಭಾಷಾ ದಿನವನ್ನಾ ಆಚರಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 5 ರಂದು ಟ್ವಿಟರ್ ಅಭಿಯಾನ ಕೂಡ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಕೊಂಡಿಲ್ಲ. ಹಾಗಾಗಿ ಆಕ್ರೋಶಗೊಂಡಿರುವ ಕನ್ನಡಿಗರು ಮತ್ತು ಕನ್ನಡಪರ ಸಂಘಟನೆಗಳು ಹಿಂದಿ ಭಾಷಾ ದಿನವಾದ ಸೆಪ್ಟೆಂಬರ್ 14ನ್ನು ಕನ್ನಡಿಗರ ಕರಾಳ ದಿನವನ್ನಾಗಿ ಆಚರಿಸಲು ಮುಂದಾಗಿವೆ. ಹೋರಾಟದ ಸಮಾವೇಶವನ್ನು ಕರ್ನಾಟಕ ರಕ್ಷಣಾ ಸೇನೆ, ಕರುನಾಡ ಸೇವಕರು ಸಂಘಟನೆ, ಕರುನಾಡ ಯುವಕರು ಸಂಘಟನೆ ಮತ್ತು ರಣಧೀರ ಪಡೆ ಸಂಘಟನೆಗಳು ಜೊತೆಗೂಡಿ ಆಯೋಜಿಸುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಹಿಂದಿ ಭಾಷೆ ಬಳಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಮಟ್ಟದ ವಿರೋಧ ವ್ಯಕ್ತವಾದ ಬಳಿಕ ಮೆಟ್ರೋದಲ್ಲಿ ಹಿಂದಿ ಭಾಷೆಯನ್ನು ಹಿಂಪಡೆಯಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

“ನಾವು ಎಲ್ಲಾ ಭಾಷೆಯನ್ನು ಸಮಾನವಾಗಿ ಕಾಣುತ್ತೇವೆ. ಅಂತೆಯೇ ಹಿಂದಿಯನ್ನು ಒಂದು ಭಾಷೆಯಾಗಿ ಗೌರವಿಸುತ್ತೇವೆ. ಆದರೆ ನಮ್ಮ ಭಾಷೆಯ ಮೇಲೆ ಸವಾರಿ ಮಾಡಲು ಬಂದರೆ ನಾವು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಿಗರೇ ಇದರ ರುವಾರಿಗಳು” ಎಂದು ಕನ್ನಡಪರ ಹೋರಾಟಗಾರ ಹರೀಶ್‍ಕುಮಾರ್ ಬಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...