Homeಮುಖಪುಟಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

ಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ರಚಿಸುವಂತೆ ಕಾಲೇಜುಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ನಿರ್ದೇಶನ ನೀಡಿತ್ತು. ಇದೀಗ ವ್ಯಾಪಕ ವಿರೋಧದ ಬೆನ್ನಲ್ಲೇ ಯುಜಿಸಿ ಸೂಚಿಸಿದ ಡಿಸೈನ್‌ಗಳನ್ನು ವಾಪಾಸ್ಸು ಪಡೆಯಲಾಗಿದೆ.

ಯುಜಿಸಿ ನಿರ್ದೇಶನವನ್ನು ಆರಾಧಾನ ಸಂಸ್ಕೃತಿ ಎಂದು ಹಲವರು ಹೇಳಿದರೆ,  2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಮೋದಿಯ ಪ್ರಚಾರ ತಂತ್ರ ಇದು ಎಂದು ಕೆಲವರು ಟೀಕಿಸಿದ್ದರು. ಸೆಲ್ಫಿ ಪಾಯಿಂಟ್‌ಗಳ ಸ್ಥಾಪನೆ ಕುರಿತ ನಿರ್ದೇಶನ ಜಾರಿಯಲ್ಲಿರುವಾಗ ನಿರ್ದೇಶನಗಳಲ್ಲಿ ಡಿಸೈನ್‌ಗಳನ್ನು ಏಕೆ ಹಿಂತೆಗೆದುಕೊಳ್ಳಲಾಗುತ್ತಿದೆ ಎಂಬುದನ್ನು ಯುಜಿಸಿ ಸ್ಪಷ್ಟಪಡಿಸಿಲ್ಲ.

ಯುಜಿಸಿಯ ಹಿಂದಿನ ನಿರ್ದೇಶನವು ಪ್ರತಿ ಸೆಲ್ಫಿ ಪಾಯಿಂಟ್‌ಗಳನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು ಎಂದು ಹೇಳಿದೆ. ಇದು ಶಿಕ್ಷಣದ ಅಂತರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಭಾರತೀಯ ಜ್ಞಾನ ವ್ಯವಸ್ಥೆ, ಬಹುಭಾಷಾತೆ ಮತ್ತು ಸಂಶೋಧನೆ ವಿಷಯಗಳನ್ನು ಶಿಫಾರಸು ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಲವಾರು ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳಿಗೆ ತಮಗೆ ಸಂಬಂಧವಿಲ್ಲದ ವ್ಯಕ್ತಿನಿಷ್ಠೆ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ ಎಂದು ಹೇಳಿದ್ದರು.

ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿತ್ತು.

ಇದರ ಬೆನ್ನಲ್ಲೇ ಯಾವುದೇ ಶಿಕ್ಷಣ ಸಂಸ್ಥೆಗಳು ಸರ್ಕಾರದ ಕಾರ್ಯಸೂಚಿಯನ್ನು ಉತ್ತೇಜಿಸುವಲ್ಲಿ ಹಿಂದೆಂದೂ ತೊಡಗಿಸಿಕೊಂಡಿಲ್ಲ ಎಂದು  ಯುಜಿಸಿ ಮಾಜಿ ಕಾರ್ಯದರ್ಶಿಯೊಬ್ಬರು ಪತ್ರಿಕೆಗೆ ತಿಳಿಸಿದ್ದರು. ದುರದೃಷ್ಟವಶಾತ್ ಜಗದೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪ್ರಸ್ತುತ ಯುಜಿಸಿ ಸರ್ಕಾರಕ್ಕಾಗಿ ಬಹಿರಂಗವಾಗಿ ಪ್ರಚಾರ ಮಾಡುತ್ತಿದೆ. ಇದು ಯುಜಿಸಿಯ ಕೆಲಸವಲ್ಲ. ಎಲ್ಲಾ ಸರ್ಕಾರಿ ಸಂಸ್ಥೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು ನಿಷ್ಪಕ್ಷಪಾತವಾಗಿರಬೇಕು ಎಂದು ನಿರೀಕ್ಷಿಸಲಾಗಿದೆ. ಆದರೆ ಯುಜಿಸಿ ಕ್ರಮೇಣ ಆಡಳಿತ ಪಕ್ಷದ ಒಂದು ವಿಭಾಗವಾಗುತ್ತಿದೆ. ಯುಜಿಸಿಯಲ್ಲಿ ಈ ಮೊದಲು ಒಮ್ಮತದಿಂದ ನಿರ್ಧಾರವನ್ನು ಕೈಗೊಳ್ಳಲಾಗುತ್ತಿತ್ತು. ಇದರೆ ಈಗ ಏಕಮುಖ ಸಂವಹನವಾಗಿದೆ ಮತ್ತು ಬೇರೆ ಯಾರಿಗೂ ಮಾತನಾಡಲು ಅವಕಾಶವಿಲ್ಲದಂತಿದೆ ಎಂದು ಮಾಜಿ ಯುಜಿಸಿ ಕಾರ್ಯದರ್ಶಿಯೋರ್ವರು ಹೇಳಿರುವ ಬಗ್ಗೆ ಟೆಲಿಗ್ರಾಫ್‌ ವರದಿ ಮಾಡಿದೆ.

ದೆಹಲಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಮಾಯಾ ಜಾನ್ ಅವರು ಟೆಲಿಗ್ರಾಫ್‌ಗೆ ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು, ಆಡಳಿತವನ್ನು ಮೌಲ್ಯೀಕರಿಸಬಾರದು. ಯುಜಿಸಿಯ ಪತ್ರವನ್ನು ಅದರ ಅಧಿಕಾರದ ಉಲ್ಲಂಘನೆ ಎಂದು ನಾವು ನೋಡುತ್ತೇವೆ. ಇದು ಅನಗತ್ಯ ರಾಜಕೀಯ ಹಸ್ತಕ್ಷೇಪ. ವಿಶ್ವವಿದ್ಯಾನಿಲಯಗಳು ಸ್ವಾಯತ್ತ ಸ್ಥಳವಾಗಿದೆ. ಅವುಗಳನ್ನು ಸ್ವಾಯತ್ತವಾಗಿರಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...