Homeಮುಖಪುಟಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

ಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ರಚಿಸುವಂತೆ ಕಾಲೇಜುಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ನಿರ್ದೇಶನ ನೀಡಿತ್ತು. ಇದೀಗ ವ್ಯಾಪಕ ವಿರೋಧದ ಬೆನ್ನಲ್ಲೇ ಯುಜಿಸಿ ಸೂಚಿಸಿದ ಡಿಸೈನ್‌ಗಳನ್ನು ವಾಪಾಸ್ಸು ಪಡೆಯಲಾಗಿದೆ.

ಯುಜಿಸಿ ನಿರ್ದೇಶನವನ್ನು ಆರಾಧಾನ ಸಂಸ್ಕೃತಿ ಎಂದು ಹಲವರು ಹೇಳಿದರೆ,  2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಮೋದಿಯ ಪ್ರಚಾರ ತಂತ್ರ ಇದು ಎಂದು ಕೆಲವರು ಟೀಕಿಸಿದ್ದರು. ಸೆಲ್ಫಿ ಪಾಯಿಂಟ್‌ಗಳ ಸ್ಥಾಪನೆ ಕುರಿತ ನಿರ್ದೇಶನ ಜಾರಿಯಲ್ಲಿರುವಾಗ ನಿರ್ದೇಶನಗಳಲ್ಲಿ ಡಿಸೈನ್‌ಗಳನ್ನು ಏಕೆ ಹಿಂತೆಗೆದುಕೊಳ್ಳಲಾಗುತ್ತಿದೆ ಎಂಬುದನ್ನು ಯುಜಿಸಿ ಸ್ಪಷ್ಟಪಡಿಸಿಲ್ಲ.

ಯುಜಿಸಿಯ ಹಿಂದಿನ ನಿರ್ದೇಶನವು ಪ್ರತಿ ಸೆಲ್ಫಿ ಪಾಯಿಂಟ್‌ಗಳನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು ಎಂದು ಹೇಳಿದೆ. ಇದು ಶಿಕ್ಷಣದ ಅಂತರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಭಾರತೀಯ ಜ್ಞಾನ ವ್ಯವಸ್ಥೆ, ಬಹುಭಾಷಾತೆ ಮತ್ತು ಸಂಶೋಧನೆ ವಿಷಯಗಳನ್ನು ಶಿಫಾರಸು ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಲವಾರು ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳಿಗೆ ತಮಗೆ ಸಂಬಂಧವಿಲ್ಲದ ವ್ಯಕ್ತಿನಿಷ್ಠೆ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ ಎಂದು ಹೇಳಿದ್ದರು.

ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿತ್ತು.

ಇದರ ಬೆನ್ನಲ್ಲೇ ಯಾವುದೇ ಶಿಕ್ಷಣ ಸಂಸ್ಥೆಗಳು ಸರ್ಕಾರದ ಕಾರ್ಯಸೂಚಿಯನ್ನು ಉತ್ತೇಜಿಸುವಲ್ಲಿ ಹಿಂದೆಂದೂ ತೊಡಗಿಸಿಕೊಂಡಿಲ್ಲ ಎಂದು  ಯುಜಿಸಿ ಮಾಜಿ ಕಾರ್ಯದರ್ಶಿಯೊಬ್ಬರು ಪತ್ರಿಕೆಗೆ ತಿಳಿಸಿದ್ದರು. ದುರದೃಷ್ಟವಶಾತ್ ಜಗದೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪ್ರಸ್ತುತ ಯುಜಿಸಿ ಸರ್ಕಾರಕ್ಕಾಗಿ ಬಹಿರಂಗವಾಗಿ ಪ್ರಚಾರ ಮಾಡುತ್ತಿದೆ. ಇದು ಯುಜಿಸಿಯ ಕೆಲಸವಲ್ಲ. ಎಲ್ಲಾ ಸರ್ಕಾರಿ ಸಂಸ್ಥೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು ನಿಷ್ಪಕ್ಷಪಾತವಾಗಿರಬೇಕು ಎಂದು ನಿರೀಕ್ಷಿಸಲಾಗಿದೆ. ಆದರೆ ಯುಜಿಸಿ ಕ್ರಮೇಣ ಆಡಳಿತ ಪಕ್ಷದ ಒಂದು ವಿಭಾಗವಾಗುತ್ತಿದೆ. ಯುಜಿಸಿಯಲ್ಲಿ ಈ ಮೊದಲು ಒಮ್ಮತದಿಂದ ನಿರ್ಧಾರವನ್ನು ಕೈಗೊಳ್ಳಲಾಗುತ್ತಿತ್ತು. ಇದರೆ ಈಗ ಏಕಮುಖ ಸಂವಹನವಾಗಿದೆ ಮತ್ತು ಬೇರೆ ಯಾರಿಗೂ ಮಾತನಾಡಲು ಅವಕಾಶವಿಲ್ಲದಂತಿದೆ ಎಂದು ಮಾಜಿ ಯುಜಿಸಿ ಕಾರ್ಯದರ್ಶಿಯೋರ್ವರು ಹೇಳಿರುವ ಬಗ್ಗೆ ಟೆಲಿಗ್ರಾಫ್‌ ವರದಿ ಮಾಡಿದೆ.

ದೆಹಲಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಮಾಯಾ ಜಾನ್ ಅವರು ಟೆಲಿಗ್ರಾಫ್‌ಗೆ ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು, ಆಡಳಿತವನ್ನು ಮೌಲ್ಯೀಕರಿಸಬಾರದು. ಯುಜಿಸಿಯ ಪತ್ರವನ್ನು ಅದರ ಅಧಿಕಾರದ ಉಲ್ಲಂಘನೆ ಎಂದು ನಾವು ನೋಡುತ್ತೇವೆ. ಇದು ಅನಗತ್ಯ ರಾಜಕೀಯ ಹಸ್ತಕ್ಷೇಪ. ವಿಶ್ವವಿದ್ಯಾನಿಲಯಗಳು ಸ್ವಾಯತ್ತ ಸ್ಥಳವಾಗಿದೆ. ಅವುಗಳನ್ನು ಸ್ವಾಯತ್ತವಾಗಿರಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...