Homeಮುಖಪುಟರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

ರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

- Advertisement -
- Advertisement -

ರಾಜಸ್ಥಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದು ಪಟ್ಟು ಹಿಡಿದಿದ್ದ ಬಿಜೆಪಿ ಹೈಕಮಾಂಡ್ ವರಿಷ್ಠರು, ಕೇಂದ್ರ ಸಂಪುಟದ ಸಚಿವರು ಹಾಗೂ ಸಂಸದರನ್ನೇ ಕಣಕ್ಕಿಳಿಸಿ ತನ್ನ ಪ್ರತಿಷ್ಠೆ ಪಣಕ್ಕಿಟ್ಟಿತ್ತು. ಇದೀಗ 115 ಸ್ಥಾನಗಳನ್ನು ಗೆಲ್ಲುವ ಮೂಲಕ ‘ಅರಮನೆಗಳ ರಾಜ್ಯ’ದ ಗದ್ದುಗೆ ಏರಲು ಸಿದ್ಧವಾಗಿದೆ. 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತ ಸಾಧಿಸಿರುವ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಕೇಳಿಬರುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಸ್ಥಾನದಲ್ಲಿ ಚುನಾವಣೆ ಎದುರಿಸಿತ್ತು.

ರಾಜಮನೆತನ ಹಿನ್ನೆಲೆಯ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ವಸುಂಧರ ರಾಜೆ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜತೆಗೆ ಇನ್ನೂ ಹಲವರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. ಮಹಂತ್ ಬಾಲಕನಾಥ್, ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ ಮತ್ತು ವಿಪಕ್ಷ ನಾಯಕರಾಗಿದ್ದ ರಾಜೇಂದ್ರ ರಾಥೋಡ್ ಅವರು ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಮೂರನೇ ಬಾರಿಗೆ ಸಿಎಂ ಆಗ್ತಾರಾ ವಸುಂಧರಾ?

ಎರಡು ಬಾರಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೆ ಅವರು ಝಲ್ರಾಪಟನ್ ಕ್ಷೇತ್ರದಿಂದ 53,193 ಮತಗಳ ಅಂತರದಿಂದ ಗೆದ್ದು ಒಟ್ಟು 1,38,831 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಮಲಾಲ್ ಅವರಿಗಿಂತ 85,638 ಹೆಚ್ಚಿನ ಮತಗಳನ್ನು ಪಡೆದು ಮೇಲುಗೈ ಸಾಧಿಸಿದ್ದು, ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ಯೋಗಿ ಮಹಂತ್ ಬಾಲಕನಾಥ್‌ಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ವಾರ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮಹಂತ್ ಬಾಲಕ್ ನಾಥ್ ರಾಜಸ್ಥಾನದ ಪ್ರಮುಖ ಧಾರ್ಮಿಕ ವ್ಯಕ್ತಿಯಾಗಿದ್ದಾರೆ. ಇದೀಗ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಖಾನ್ ಅವರನ್ನು 6,173 ಮತಗಳ ಅಂತರದಿಂದ ಸೋಲಿಸಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಇವರೂ ಸಿಎಂ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ದಿಯಾ ಕುಮಾರಿ ಮುಂದಿನ ರಾಜಸ್ಥಾನ ಸಿಎಂ?

ರಾಜಸ್ಥಾನದ ರಾಜಸಮಂದ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ದಿಯಾ ಕುಮಾರಿ ಅವರು ಜೈಪುರ ಜಿಲ್ಲೆಯಲ್ಲಿರುವ ವಿದ್ಯಾಧರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು, ಕಾಂಗ್ರೆಸ್‌ನ ಸೀತಾರಾಮ್ ಅಗರ್ವಾಲ್ ಅವರನ್ನು 71,368 ಮತಗಳ ಅಂತರದಿಂದ ಸೋಲಿಸಿ, ಸಿಎಂ ಸ್ಥಾನದ ಪ್ರಬಲ ಸ್ಪರ್ಧಿಯಾಗಿದ್ದಾರೆ.

ಸಿಪಿ ಜೋಶಿ ಹೆಸರು ಮುನ್ನೆಲೆಗೆ!

2014 ಹಾಗೂ 2019ರಲ್ಲಿ ಎರಡು ಬಾರಿ ಚಿತ್ತೋರ್ಗಢ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾಗಿರುವ ಸಿಪಿ ಜೋಶಿ, ಪ್ರಸ್ತುತ ಬಿಜೆಪಿಯ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದಾರೆ. ಅವರು ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ರಾಜಸ್ಥಾನ ಸಿಎಂ ಆಗ್ತಾರಾ ಕೇಂದ್ರ ಜಲಶಕ್ತಿ ಸಚಿವ?

ಜೋಧ್ಪುರದಿಂದ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾಗಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಮುಖ್ಯಮಂತ್ರಿಯಾಗಲು ಪ್ರಬಲ ಆಕಾಂಕ್ಷಿಯಾಗಿದ್ದಾರೆ. 2014 ರಿಂದ ಎರಡು ಅವಧಿಗೆ ಲೋಕಸಭಾ ಸದಸ್ಯರಾಗಿ ಜೋಧ್ಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಹೈಕಮಾಂಡ್ ವರಿಷ್ಠರ ಸೂಚನೆ ಮೇರೆಗೆ ವಿಧಾನಸಭೆಗೆ ಸ್ಪರ್ಧಿಸಿದ್ದರು. ಇದೀಗ ಇವರನ್ನೇ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಗೆ ನೇಮಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಸೋತ ವಿಪಕ್ಷ ನಾಯಕನಿಗೆ ಸಿಗುತ್ತಾ ಸಿಎಂ ಪಟ್ಟ!

ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ರಾಜೇಂದ್ರ ರಾಥೋಡ್ ಕೂಡ ಚುನಾವಣೆಗೆ ಹೋಗುವ ಮುನ್ನ ಸಂಭಾವ್ಯ ಸಿಎಂ ಅಭ್ಯರ್ಥಿ ಎಂದು ಪರಿಗಣಿಸಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಬುಡಾನಿಯಾ ವಿರುದ್ಧ 10,345 ಮತಗಳ ಅಂತರದಿಂದ ಸೋತಿದ್ದಾರೆ. ಸೋತಿದ್ದರೂ ಅವರೇ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತುಗಳಿವೆ.

ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ:
ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನರಾಗಿದ್ದರಿಂದ ಕರಣ್ಪುರ ಕ್ಷೇತ್ರಕ್ಕೆ ಮತದಾನ ದಿನಾಂಕವನ್ನು ಮುಂದೂಡಲಾಗಿದೆ. ಬಹುಮತಕ್ಕೆ 100 ಸ್ಥಾನಗಳು ಬೇಕಿದ್ದು, ಕಳೆದ ಭಾನುವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ 115 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...