Homeಮುಖಪುಟರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

ರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

- Advertisement -
- Advertisement -

ರಾಜಸ್ಥಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದು ಪಟ್ಟು ಹಿಡಿದಿದ್ದ ಬಿಜೆಪಿ ಹೈಕಮಾಂಡ್ ವರಿಷ್ಠರು, ಕೇಂದ್ರ ಸಂಪುಟದ ಸಚಿವರು ಹಾಗೂ ಸಂಸದರನ್ನೇ ಕಣಕ್ಕಿಳಿಸಿ ತನ್ನ ಪ್ರತಿಷ್ಠೆ ಪಣಕ್ಕಿಟ್ಟಿತ್ತು. ಇದೀಗ 115 ಸ್ಥಾನಗಳನ್ನು ಗೆಲ್ಲುವ ಮೂಲಕ ‘ಅರಮನೆಗಳ ರಾಜ್ಯ’ದ ಗದ್ದುಗೆ ಏರಲು ಸಿದ್ಧವಾಗಿದೆ. 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಹುಮತ ಸಾಧಿಸಿರುವ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಕೇಳಿಬರುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಸ್ಥಾನದಲ್ಲಿ ಚುನಾವಣೆ ಎದುರಿಸಿತ್ತು.

ರಾಜಮನೆತನ ಹಿನ್ನೆಲೆಯ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ವಸುಂಧರ ರಾಜೆ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜತೆಗೆ ಇನ್ನೂ ಹಲವರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. ಮಹಂತ್ ಬಾಲಕನಾಥ್, ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ ಮತ್ತು ವಿಪಕ್ಷ ನಾಯಕರಾಗಿದ್ದ ರಾಜೇಂದ್ರ ರಾಥೋಡ್ ಅವರು ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಮೂರನೇ ಬಾರಿಗೆ ಸಿಎಂ ಆಗ್ತಾರಾ ವಸುಂಧರಾ?

ಎರಡು ಬಾರಿ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೆ ಅವರು ಝಲ್ರಾಪಟನ್ ಕ್ಷೇತ್ರದಿಂದ 53,193 ಮತಗಳ ಅಂತರದಿಂದ ಗೆದ್ದು ಒಟ್ಟು 1,38,831 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಮಲಾಲ್ ಅವರಿಗಿಂತ 85,638 ಹೆಚ್ಚಿನ ಮತಗಳನ್ನು ಪಡೆದು ಮೇಲುಗೈ ಸಾಧಿಸಿದ್ದು, ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ಯೋಗಿ ಮಹಂತ್ ಬಾಲಕನಾಥ್‌ಗೆ ಒಲಿಯುತ್ತಾ ಸಿಎಂ ಪಟ್ಟ?

ಅಲ್ವಾರ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮಹಂತ್ ಬಾಲಕ್ ನಾಥ್ ರಾಜಸ್ಥಾನದ ಪ್ರಮುಖ ಧಾರ್ಮಿಕ ವ್ಯಕ್ತಿಯಾಗಿದ್ದಾರೆ. ಇದೀಗ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಖಾನ್ ಅವರನ್ನು 6,173 ಮತಗಳ ಅಂತರದಿಂದ ಸೋಲಿಸಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಇವರೂ ಸಿಎಂ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ದಿಯಾ ಕುಮಾರಿ ಮುಂದಿನ ರಾಜಸ್ಥಾನ ಸಿಎಂ?

ರಾಜಸ್ಥಾನದ ರಾಜಸಮಂದ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ದಿಯಾ ಕುಮಾರಿ ಅವರು ಜೈಪುರ ಜಿಲ್ಲೆಯಲ್ಲಿರುವ ವಿದ್ಯಾಧರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು, ಕಾಂಗ್ರೆಸ್‌ನ ಸೀತಾರಾಮ್ ಅಗರ್ವಾಲ್ ಅವರನ್ನು 71,368 ಮತಗಳ ಅಂತರದಿಂದ ಸೋಲಿಸಿ, ಸಿಎಂ ಸ್ಥಾನದ ಪ್ರಬಲ ಸ್ಪರ್ಧಿಯಾಗಿದ್ದಾರೆ.

ಸಿಪಿ ಜೋಶಿ ಹೆಸರು ಮುನ್ನೆಲೆಗೆ!

2014 ಹಾಗೂ 2019ರಲ್ಲಿ ಎರಡು ಬಾರಿ ಚಿತ್ತೋರ್ಗಢ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾಗಿರುವ ಸಿಪಿ ಜೋಶಿ, ಪ್ರಸ್ತುತ ಬಿಜೆಪಿಯ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದಾರೆ. ಅವರು ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.

ರಾಜಸ್ಥಾನ ಸಿಎಂ ಆಗ್ತಾರಾ ಕೇಂದ್ರ ಜಲಶಕ್ತಿ ಸಚಿವ?

ಜೋಧ್ಪುರದಿಂದ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾಗಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಮುಖ್ಯಮಂತ್ರಿಯಾಗಲು ಪ್ರಬಲ ಆಕಾಂಕ್ಷಿಯಾಗಿದ್ದಾರೆ. 2014 ರಿಂದ ಎರಡು ಅವಧಿಗೆ ಲೋಕಸಭಾ ಸದಸ್ಯರಾಗಿ ಜೋಧ್ಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಹೈಕಮಾಂಡ್ ವರಿಷ್ಠರ ಸೂಚನೆ ಮೇರೆಗೆ ವಿಧಾನಸಭೆಗೆ ಸ್ಪರ್ಧಿಸಿದ್ದರು. ಇದೀಗ ಇವರನ್ನೇ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಗೆ ನೇಮಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಸೋತ ವಿಪಕ್ಷ ನಾಯಕನಿಗೆ ಸಿಗುತ್ತಾ ಸಿಎಂ ಪಟ್ಟ!

ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ರಾಜೇಂದ್ರ ರಾಥೋಡ್ ಕೂಡ ಚುನಾವಣೆಗೆ ಹೋಗುವ ಮುನ್ನ ಸಂಭಾವ್ಯ ಸಿಎಂ ಅಭ್ಯರ್ಥಿ ಎಂದು ಪರಿಗಣಿಸಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಬುಡಾನಿಯಾ ವಿರುದ್ಧ 10,345 ಮತಗಳ ಅಂತರದಿಂದ ಸೋತಿದ್ದಾರೆ. ಸೋತಿದ್ದರೂ ಅವರೇ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತುಗಳಿವೆ.

ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ:
ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನರಾಗಿದ್ದರಿಂದ ಕರಣ್ಪುರ ಕ್ಷೇತ್ರಕ್ಕೆ ಮತದಾನ ದಿನಾಂಕವನ್ನು ಮುಂದೂಡಲಾಗಿದೆ. ಬಹುಮತಕ್ಕೆ 100 ಸ್ಥಾನಗಳು ಬೇಕಿದ್ದು, ಕಳೆದ ಭಾನುವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ 115 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ: ಮಿಜೋರಾಂ ಸಿಎಂ ಪಟ್ಟಕ್ಕೇರಲು ಅಣಿಯಾದ ಇಂದಿರಾ ಗಾಂಧಿಯ ಮಾಜಿ ಭದ್ರತಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...