Homeಮುಖಪುಟಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಬಂದಾ ಜೈಲಿನಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ಹತ್ಯೆಗೆ ಸಂಚು ರೂಪಿಸಿದೆ ಎಂದು ಆರೋಪಿಸಿ ಅನ್ಸಾರಿ ಕಟುಂಬ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅನ್ಸಾರಿ ಅವರ ಕಿರಿಯ ಮಗ ಉಮರ್ ಅನ್ಸಾರಿ ಅವರು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂದಾ ಜೈಲಿನಿಂದ ಸ್ಥಳಾಂತರಿಸಿ ತಮ್ಮ ತಂದೆಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ. ಉತ್ತರಪ್ರದೇಶದ ಬಂದಾ ಜೈಲಿನಲ್ಲಿ ಮುಖ್ತಾರ್ ತನ್ನ ಜೀವಕ್ಕೆ  ಗಂಭೀರ ಬೆದರಿಕೆಯನ್ನು ಎದುರಿಸುತ್ತಾರೆ ಎಂದು ಉಮರ್ ಸುಪ್ರೀಂಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವ ಮೌ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ಮುಖ್ತಾರ್,  ಅವರ ಕುಟುಂಬಸ್ಥರು, ಬೆಂಬಲಿಗರ ಮೇಲೆ 2017ರಲ್ಲಿ ಯೋಗಿ ಅಧಿಕಾರಕ್ಕೆ ಬಂದ ನಂತರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರವು ಮುಖ್ತಾರ್‌ನನ್ನು ದರೋಡೆಕೋರ ಮತ್ತು ಗ್ಯಾಂಗ್ IS191ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದು ಮುಖ್ತಾರ್‌ ಮತ್ತು ಅವನ ಮಕ್ಕಳು, ಹಾಲಿ ಶಾಸಕ ಅಬ್ಬಾಸ್ ಅನ್ಸಾರಿ, ಸಹೋದರ ಮತ್ತು ಮಾಜಿ ಸಂಸದ ಅಫ್ಜಲ್ ಅನ್ಸಾರಿ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ.

ಕಟ್ಟುನಿಟ್ಟಾದ ದರೋಡೆಕೋರರ ಕಾಯಿದೆಯಡಿಯಲ್ಲಿ ಅನ್ಸಾರಿ ಕುಟುಂಬಕ್ಕೆ ಸೇರಿದ ಕೋಟಿಗಟ್ಟಲೆ ಮೌಲ್ಯದ ಆಸ್ತಿಯನ್ನು ಸರ್ಕಾರವು ವಶಪಡಿಸಿಕೊಂಡಿದೆ ಮತ್ತು ನೆಲಸಮಗೊಳಿಸಿದೆ.

ಅರ್ಜಿದಾರರಾದ ಉಮರ್ ಅನ್ಸಾರಿ ಅವರು ತಮ್ಮ ತಂದೆಯ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.  ಪ್ರಯಾಗ್‌ರಾಜ್‌ನಲ್ಲಿ ಮಾಜಿ ಲೋಕಸಭಾ ಸಂಸದ ಮತ್ತು ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ತಂಡದ ಎದುರು ಪತ್ರಕರ್ತನ ಸೋಗಿನಲ್ಲಿ ಬಂದು ಹತ್ಯೆಗೈದ ಬಗ್ಗೆ ಉಲ್ಲೇಖಿಸಲಾಗಿದೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬಂಧಿತ ಅತೀಕ್ ರಕ್ಷಣೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಮುಖ್ತಾರ್ ಅವರ ಪುತ್ರ ಉಮರ್ ಅವರು ತಮ್ಮ ಅರ್ಜಿಯಲ್ಲಿ, ಆದಿತ್ಯನಾಥ್ ಸರ್ಕಾರವು ಮುಖ್ತಾರ್‌ನ್ನು  ಜೈಲಿನಲ್ಲಿ ಹತ್ಯೆಗೆ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆದರಿಕೆಯ ಆರೋಪವು ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿದೆ. ತಂದೆಯ ಜೀವವು ಗಂಭೀರ ಅಪಾಯದಲ್ಲಿದೆ. ಬಂದಾ ಜೈಲಿನಲ್ಲಿ ಅವರನ್ನು ಹತ್ಯೆಗೆ ಸಂಚು ರೂಪಿಸಲಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

2005ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಹತ್ಯೆಯ ಆರೋಪದಲ್ಲಿ ಮುಕ್ತಾರ್ ಅವರನ್ನು ಈ ವರ್ಷದ ಆರಂಭದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಪಡಿಸಲಾಯಿತು. ರೈ ಹತ್ಯೆ ಆರೋಪಿಗಳ ಪೈಕಿ ಈಗಾಗಲೇ ನಾಲ್ವರನ್ನು ಕೊಲೆ ಮಾಡಲಾಗಿದೆ. 2006ರಲ್ಲಿ ಫಿರ್ದೌಸ್‌ನನ್ನು ಎಸ್‌ಟಿಎಫ್ ಗುಂಡಿಕ್ಕಿ ಕೊಂದರೆ, ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಬಜರಂಗಿಯನ್ನು 2018ರಲ್ಲಿ ಬಾಗ್‌ಪತ್ ಜೈಲಿನಲ್ಲಿ ಇನ್ನೊಬ್ಬ ಅಪರಾಧಿ ದರೋಡೆಕೋರ ಸುನಿಲ್ ರಾಠಿ ಕೊಲೆ ಮಾಡಿದ್ದಾನೆ. ಆತನ ಹತ್ಯೆಗೆ ಒಂದು ವಾರಕ್ಕೂ ಮುನ್ನ ಬಜರಂಗಿಯ ಪತ್ನಿ ಸೀಮಾ ಸಿಂಗ್ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆಲವು ರಾಜಕೀಯ ಮುಖಂಡರು ಮತ್ತು ಅಧಿಕಾರಿಗಳು ಸೇರಿ ಪತಿಯ ಕೊಲೆಗೆ ಜೈಲಿನ ಹೊರಗೆ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಝಾನ್ಸಿ ಜೈಲಿನಲ್ಲಿದ್ದ ಸಮಯದಲ್ಲಿ ಆಕೆಯ ಪತಿಗೆ ವಿಷ ಕೊಡುವ ಪ್ರಯತ್ನ ನಡೆದಿತ್ತು ಎಂದು ಸಿಂಗ್ ಹೇಳಿಕೊಂಡಿದ್ದರು.

ಮುಖ್ತಾರ್ ಅವರ ಇನ್ನೊಬ್ಬ ಸಹಾಯಕ ರಾಕೇಶ್ ಪಾಂಡೆಯನ್ನು 2020ರ ಆಗಸ್ಟ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಕೊಲೆ ಮಾಡಲಾಗಿದೆ. ಮುಖ್ತಾರ್‌ನ ನಿಕಟನಾಗಿದ್ದ ಸಂಜೀವ್ ಮಹೇಶ್ವರಿ ಅಲಿಯಾಸ್ ಜೀವಾ ಅವರನ್ನು ಜೂ.2023ರಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ಲಕ್ನೋದ ನ್ಯಾಯಾಲಯದ ಕೊಠಡಿಯೊಳಗೆ ಗುಂಡಿಕ್ಕಿ ಕೊಲ್ಲಲಾಯಿತು. ಬಿಜೆಪಿ ನಾಯಕ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದಲ್ಲೂ ಜೀವಾ ಆರೋಪಿಯಾಗಿದ್ದ.

ತನ್ನ ಅರ್ಜಿಯಲ್ಲಿ ಉಮರ್ ಅನ್ಸಾರಿ, ವಿಶ್ವಾಸಾರ್ಹ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ ತಂದೆಯನ್ನು ಹತ್ಯೆ ಮಾಡುವ ಉದ್ದೇಶದಿಂದ ಕೊಲೆಗಾರ ವ್ಯಕ್ತಿಗಳನ್ನು ಪೊಲೀಸರು ಬಂಧಿಸುತ್ತಾರೆ. ನಂತರ ಅವರನ್ನು ಪ್ರಸ್ತುತ ತಂದೆ ಇರುವ ಬಂದಾ ಜೈಲಿಗೆ ಕರೆದೊಯ್ಯಲಾಗುತ್ತದೆ. ಈ ಬಾಡಿಗೆ ಕೊಲೆಗಾರರಿಗೆ ಜೈಲಿನೊಳಗೆ ಶಸ್ತ್ರಾಸ್ತ್ರಗಳನ್ನು ನೀಡಿ ಕೃತ್ಯ ನಡೆಸಲಾಗುತ್ತದೆ. ಆದರೆ ಸಂಪೂರ್ಣ ಘಟನೆಯನ್ನು ಗ್ಯಾಂಗ್-ವಾರ್ ಎಂದು ದಾರಿ ತಪ್ಪಿಸಲಾಗುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಮುಖ್ತಾರ್ ಅವರು 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರು ಆರು ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಅವರ ಸಹೋದರ ಅವದೇಶ್ ರೈ ಹತ್ಯೆಗೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯವು ಜೂನ್‌ನಲ್ಲಿ ಅವರಿಗೆ ನೀಡಿದ್ದ ಜೀವಾವಧಿ ಶಿಕ್ಷೆ ಕೂಡ ಸೇರಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...