Homeಮುಖಪುಟಕೇಂದ್ರೀಯ ವಿವಿಗಳಲ್ಲಿ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದ 13,000ಕ್ಕೂ ಅಧಿಕ ಎಸ್ಸಿ-ಎಸ್ಟಿ,OBC ವಿದ್ಯಾರ್ಥಿಗಳು

ಕೇಂದ್ರೀಯ ವಿವಿಗಳಲ್ಲಿ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದ 13,000ಕ್ಕೂ ಅಧಿಕ ಎಸ್ಸಿ-ಎಸ್ಟಿ,OBC ವಿದ್ಯಾರ್ಥಿಗಳು

- Advertisement -
- Advertisement -

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಗಣನೀಯ ಪ್ರಮಾಣದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವುದು ಬಹಿರಗವಾಗಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿಗಳು) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಸಂಸ್ಥೆಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಸುಮಾರು 13,626 ವಿದ್ಯಾರ್ಥಿಗಳು ಕಳೆದ 5 ವರ್ಷಗಳಲ್ಲಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಡ್ರಾಪ್ಔಟ್ ದರಗಳ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳಲು ಸರ್ಕಾರವು ಯಾವುದೇ ಅಧ್ಯಯನಗಳನ್ನು ನಡೆಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಭಾಸ್ ಸರ್ಕಾರ್, ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳು ಅನೇಕ ಆಯ್ಕೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಹೊರಗುಳಿದ ವಿದ್ಯಾರ್ಥಿಗಳ ವಿವರ ನೀಡಿದ ಸಚಿವರು ಕಳೆದ 5 ವರ್ಷಗಳಲ್ಲಿ ಸುಮಾರು 4,596 OBC ಅಭ್ಯರ್ಥಿಗಳು, 2,424 SC ಮತ್ತು 2,622 ST ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ ಡ್ರಾಪ್‌ಔಟ್‌ ಮಾಡಿದ್ದಾರೆ. ಅದೇ ಅವಧಿಯಲ್ಲಿ 2,066 ಒಬಿಸಿ ಅಭ್ಯರ್ಥಿಗಳು, 1,068 ಎಸ್ಸಿ ಮತ್ತು 408 ಎಸ್ಟಿ ವಿದ್ಯಾರ್ಥಿಗಳು ಐಐಟಿಯಿಂದ ಡ್ರಾಪ್‌ಔಟ್‌ ಮಾಡಿದ್ದಾರೆ ಮತ್ತು 163 ಒಬಿಸಿ, 188 ಎಸ್ಸಿ ಮತ್ತು 91 ಎಸ್ಟಿ ಅಭ್ಯರ್ಥಿಗಳು ಐಐಎಂಗಳಿಂದ ಶಿಕ್ಷಣವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಸುಭಾಸ್ ಅವರು ಹೇಳಿದ್ದಾರೆ.

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳನ್ನು ಪೂರ್ವಭಾವಿಯಾಗಿ ಪರಿಹರಿಸಲು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಘಟಕ, ಸಮಾನ ಅವಕಾಶ ಘಟಕ, ವಿದ್ಯಾರ್ಥಿ ಕುಂದುಕೊರತೆ ನಿವಾರಣೆ ಘಟಕ, ವಿದ್ಯಾರ್ಥಿಗಳ ಸಾಮಾಜಿಕ ಕ್ಲಬ್ ಮುಂತಾದವುಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಕಾಲಕಾಲಕ್ಕೆ ವಿದ್ಯಾರ್ಥಿಗಳ ನಡುವೆ ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಸೂಚನೆಗಳನ್ನು ನೀಡಿದೆ ಎಂದು ಸಚಿವರು ಹೇಳಿದ್ದಾರೆ.

ಸರ್ಕಾರವು ಶುಲ್ಕ ಕಡಿತ, ಹೆಚ್ಚಿನ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡುವುದು ಮತ್ತು ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆದ್ಯತೆ ನೀಡಿದೆ ಎಂದು ಸರ್ಕಾರ್ ಹೇಳಿದ್ದಾರೆ.

ವಿವಿಧ ಐಐಟಿ ಮತ್ತು ಐಐಎಂ ಕ್ಯಾಂಪಸ್‌ಗಳಲ್ಲಿ 33ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವಾಲಯ ಈ ವರ್ಷದ ಆರಂಭದಲ್ಲಿ ಸಂಸತ್ತಿಗೆ ಮಾಹಿತಿ ನೀಡಿತ್ತು. 2014 ಮತ್ತು 2021ರ ನಡುವೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರವು 2014ರಲ್ಲಿ ಸಂಸತ್ತಿಗೆ ತಿಳಿಸಿತ್ತು. ಆತ್ಮಹತ್ಯೆ ಮಾಡಿಕೊಂಡ 122 ವಿದ್ಯಾರ್ಥಿಗಳಲ್ಲಿ 24 ಎಸ್‌ಸಿ ಸಮುದಾಯಕ್ಕೆ ಸೇರಿದವರು, ಮೂವರು ಎಸ್‌ಟಿಗಳು ಮತ್ತು 41 ಒಬಿಸಿಗಳು ವಿದ್ಯಾರ್ಥಿಗಳು ಸೇರಿದ್ದಾರೆ.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...