HomeUncategorized'ಗೋರಕ್‌ಪುರ ಆಸ್ಪತ್ರೆ ದುರಂತ' ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಮಾಜಿ ವೈದ್ಯ ಕಫೀಲ್ ಖಾನ್ ವಿರುದ್ದ ಮತ್ತು ಅವರ ಪುಸ್ತಕ ಪ್ರಕಟಿಸಿದ ಐವರ ವಿರುದ್ಧ ಗೋರಖ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ದಿ ಗೋರಖ್‌ಪುರ ಆಸ್ಪಿಟಲ್‌ ಟ್ರಾಜಿಡಿ: ಎ ಡಾಕ್ಟರ್ಸ್ ಮೆಮೊಯಿರ್ ಆಫ್ ಎ ಡೆಡ್ಲಿ ಮೆಡಿಕಲ್ ಕ್ರೈಸಿಸ್’ (The Gorakhpur Hospital Tragedy: A Doctor’s Memoir of a Deadly Medical Crisis) ಪುಸ್ತಕವನ್ನು ಕಫೀಲ್ ಖಾನ್ ಬರೆದಿದ್ದರು. ಪುಸ್ತಕವನ್ನು 2021ರಲ್ಲಿ ಪ್ರಕಟಿಸಲಾಗಿದ್ದು, ಹಲವಾರು ಭಾರತೀಯ ಭಾಷೆಗಳಿಗೆ ಅದನ್ನು ಅನುವಾದಿಸಲಾಗಿತ್ತು.

ಲಕ್ನೋದ ಕೃಷ್ಣನಗರದ ಸ್ಟೇಷನ್ ಹೌಸ್ ಅಧಿಕಾರಿ ಜಿತೇಂದ್ರ ಪ್ರತಾಪ್ ಸಿಂಗ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕೃಷ್ಣನಗರದ ಉದ್ಯಮಿ ಮನೀಶ್ ಶುಕ್ಲಾ ಅವರ ದೂರಿನ ಮೇರೆಗೆ ಪುಸ್ತಕಗಳ ಮುದ್ರಣ ಮತ್ತು ನೋಂದಣಿ ಕಾಯ್ದೆಯ ಉಲ್ಲಂಘನೆಯ ಆರೋಪದಡಿ ಕಫೀಲ್ ಖಾನ್ ವಿರುದ್ದ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ದೂರಿನಲ್ಲಿ ಡಾ.ಕಫೀಲ್ ಅವರ ಪುಸ್ತಕವನ್ನು ಹಣ ಸಂಗ್ರಹಿಸುವ, ರಾಜ್ಯ ಸರ್ಕಾರವನ್ನು ಉರುಳಿಸುವ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯುವ ಸಾಧನವಾಗಿ ಬಳಸಲಾಗಿದೆ. ಸಮುದಾಯಗಳ ನಡುವೆ ಸಂಘರ್ಷದ ಪಿತೂರಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಫೀಲ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ 10 ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದರಲ್ಲಿ ವಿವಿಧ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೃತ್ಯಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳು, 295A , 153B ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಮುದ್ರಣದ ಹೆಸರು ಮತ್ತು ಮುದ್ರಣದ ಸ್ಥಳವನ್ನು ಸರಿಯಾಗಿ ಪ್ರಕಟಿಸದ ಆರೋಪದಲ್ಲಿ ಕಫೀಲ್ ಖಾನ್ ವಿರುದ್ಧ 1867ರ ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್‌ನ ಸೆಕ್ಷನ್ 3 ಮತ್ತು 1ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2017ರಲ್ಲಿ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುವಾಗ ಆಮ್ಲಜನಕದ ಕೊರತೆಯಿಂದಾಗಿ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಫೀಲ್ ಖಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರು ಆಕ್ಸಿಜನ್‌ ದುರಂತದ ವೇಳೆ  ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಅವರನ್ನು ಜೀವ ಸಂರಕ್ಷಕ ಎಂದು ಪ್ರಶಂಸಿಸಲಾಗಿತ್ತು. ಆದರೆ ಕರ್ತವ್ಯ ಲೋಪದ ಹೆಸರಿನಲ್ಲಿ ಕ್ರಮವನ್ನು ಎದುರಿಸಬೇಕಾಯಿತು ಮತ್ತು 6 ತಿಂಗಳು ಜೈಲಿನಲ್ಲಿ ಕಳೆಯಬೇಕಾಯಿತು. ಅಲಹಾಬಾದ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಅವರ ವಿರುದ್ಧದ ಆರೋಪಗಳನ್ನು ರದ್ದುಗೊಳಿಸಿತ್ತು.

ಏನಿದು ಗೋರಖ್‌ಪುರ ಆಸ್ಪತ್ರೆ ದುರಂತ?

ಗೋರಖ್‌ಪುರ ಆಸ್ಪತ್ರೆಯಲ್ಲಿ 60 ಮಕ್ಕಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದರು. ಈ ವೇಳೆ ಕಫೀಲ್ ಖಾನ್ ಅವರು ಶಿಶು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಸ್ಪತ್ರೆಯು ಬಾಕಿ ಮೊತ್ತ ಪಾವತಿಸದ ಕಾರಣ ಎಲ್ಲಾ ಆಮ್ಲಜನಕ ಪೂರೈಕೆದಾರ ಸಂಸ್ಥೆಗಳು ಸರಬರಾಜು ಸ್ಥಗಿತಗೊಳಿಸಿದ್ದವು. ಘಟನೆಯ ವೇಳೆ ಖಾನ್‌ ಅವರು ಮಕ್ಕಳ ಜೀವವನ್ನು ಉಳಿಸಲು ಪ್ರಯತ್ನಿಸಿದ್ದರು ಆದರೆ ದುರದೃಷ್ಟಾವಶಾತ್‌ ಘಟನೆಗೆ ಕಫೀಲ್ ಖಾನ್ ಅವರು ಕಾರಣ ಎಂದು 2017ರಲ್ಲಿ ಡಾ.ಕಪೀಲ್‌ ಖಾನ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ಕಫೀಲ್ ಖಾನ್ ಅವರು ವಾಸ್ತವವಾಗಿ ಈ ಮುಗ್ಧ ಮಕ್ಕಳ ಪ್ರಾಣ ಉಳಿಸಲು ಪ್ರಯತ್ನಿಸಿದ್ದರು. ಆದರೆ ಆಡಳಿತ ಮಂಡಳಿ ಮತ್ತು ಸರ್ಕಾರ ಅವರಿಗೆ ಸ್ಪಂದಿಸಿರಲಿಲ್ಲ. ಕೊನೆಗೆ ಪ್ರಕರಣದಲ್ಲಿ ಅವರು ತಪ್ಪಿತಸ್ಥರು ಎಂದು ಆಪಾದನೆ ಹೊರಿಸಲಾಗಿತ್ತು. ಈ ಮೂಲಕ ಉತ್ತರ ಪ್ರದೇಶ ಸರ್ಕಾರ ತನ್ನ ತಪ್ಪನ್ನು ಮರೆಮಾಚಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...