Homeಮುಖಪುಟಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

ಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

- Advertisement -
- Advertisement -

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಕೆನಡಾ ಆರೋಪಿಸಿತ್ತು. ಇದರಿಂದ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಇದಾದ ಕೆಲವೇ ತಿಂಗಳಲ್ಲಿ ಅಮೆರಿಕಾದಲ್ಲಿ ಇನ್ನೋರ್ವ ಸಿಖ್‌ ಪ್ರತ್ಯೇಕತವಾದಿ ನಾಯಕ ಪನ್ನೂನ್‌ ಹತ್ಯೆ ಸಂಚು ಆರೋಪ ಕೂಡ ಭಾರತದ ಮೇಲೆ ಹೊರಿಸಲಾಗಿತ್ತು. ಇದೀಗ ಭಾರತದ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ.

ಬ್ರಿಟನ್‌ನಲ್ಲಿ ನೆಲೆಸಿರುವ ಖಲಿಸ್ತಾನ್‌ ಪರ ಹೋರಾಟಗಾರ ಅವತಾರ್‌ ಸಿಂಗ್‌ ಖಾಂಡಾ ಜೂನ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಅವತಾರ್‌ ಸಿಂಗ್‌ ಖಾಂಡಾ ಅವರು ತನ್ನ ಸಾವಿಗೆ ಕೆಲವೇ ತಿಂಗಳುಗಳ ಮೊದಲು, ಭಾರತೀಯ ಪೊಲೀಸರು ನನಗೆ ಕಿರುಕುಳ ನೀಡಿದ್ದಾರೆ. ಪಂಜಾಬ್‌ನಲ್ಲಿರುವ ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಅವತಾರ್‌ ಸಿಂಗ್‌ ಖಾಂಡಾ ಪ್ರತ್ಯೇಕತಾವಾದಿ ಸಿದ್ಧಾಂತದೊಂದಿಗೆ ಯುಕೆಯಲ್ಲಿ ಸಿಖ್ ಯುವಕರನ್ನು ತೀವ್ರಗಾಮಿಗಳಾನ್ನಾಗಿಸುತ್ತಿದ್ದಾರೆ ಎಂದು ಭಾರತೀಯ ತನಿಖಾ ಏಜೆನ್ಸಿಗಳು ಖಾಂಡಾ ವಿರುದ್ಧ ಆರೋಪಿಸಿದೆ. ಖಲಿಸ್ತಾನಿ ಪರ ಗುಂಪುಗಳ ಪ್ರತಿಭಟನೆಯ ಸಂದರ್ಭದಲ್ಲಿ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಅವತಾರ್‌ ಸಿಂಗ್‌ ಖಾಂಡಾ ಓರ್ವನಾಗಿದ್ದ ಎನ್ನಲಾಗಿದೆ.

ಗಾರ್ಡಿಯನ್‌ನ ಪ್ರಕಾರ, ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವತಾರ್‌ ಸಿಂಗ್‌ ಖಾಂಡಾ ಯುಕೆಯ ಬರ್ಮಿಂಗ್ಹ್ಯಾಮ್‌ನಲ್ಲಿರುವ ಆಸ್ಪತ್ರೆಗೆ ದಾಖಲಾದ 4 ದಿನಗಳಲ್ಲಿ ಅಂದರೆ ಜೂ.15 ರಂದು ನಿಧನರಾಗಿದ್ದರು. ಅವನ ಸಹವರ್ತಿಗಳು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.

ಈ ಬಗ್ಗೆ ದಿ ಗಾರ್ಡಿಯನ್ ವರದಿಗಳು ಬ್ರಿಟನ್‌ ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿ ಪತ್ರಿಕಾ ಮಾಧ್ಯಮಕ್ಕೆ ನೀಡುವ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ ಮತ್ತು ಈ ವಿಷಯವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ ಎಂದು ಹೇಳಿದೆ. ಆದರೆ ಖಾಂಡಾ ಅವರ ಸ್ನೇಹಿತರು, ಸಿಖ್ ಕಾರ್ಯಕರ್ತರು ಮತ್ತು ಕುಟುಂಬದ ಸದಸ್ಯರಿಗೆ ತನಿಖೆಯ ಬಗ್ಗೆ ಸಮಾಧಾನವಿರಲಿಲ್ಲ.

ಖಾಂಡಾ ಅವರ ಮರಣದ ಸಂಭವಿಸಿದ ಕೆಲವೇ ದಿನಗಳಲ್ಲಿ ವ್ಯಾಂಕೋವರ್‌ನಲ್ಲಿ ಕೆನಡಾದ ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆ ನಡೆದಿದೆ. ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಭಾರತ ಸರ್ಕಾರ ಎದುರಿಸುತ್ತಿದೆ. ಇದಲ್ಲದೆ ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತ ವಿಫಲವಾದ ಸಂಚನ್ನು ರೂಪಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಸಮಿತಿ ಕೂಡ ಭಾರತ ರಚಿಸಿದೆ.

ದಿ ಗಾರ್ಡಿಯನ್‌ನ ಪ್ರಕಾರ, ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ಸಾವಿನ ತನಿಖೆ ನಡೆಸಿದ್ದರು ಎಂಬ ಅಧಿಕೃತ ಹೇಳಿಕೆಗಳಿಗೆ ಖಂಡಾ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ವಿರೋಧಿಸಿದ್ದಾರೆ. ಪೊಲೀಸರು ಅವರ ಮರಣದ ನಂತರ ಸ್ನೇಹಿತರು ಮತ್ತು ಕುಟುಂಬದವರಿಂದ ಹೇಳಿಕೆಗಳನ್ನು ತೆಗೆದುಕೊಳ್ಳಲಿಲ್ಲ, ಅವರು  ಕೆಲಸ  ಮಾಡುವಲ್ಲಿ ಸಹೋದ್ಯೋಗಿಗಳೊಂದಿಗೆ ಮಾತನಾಡಲಿಲ್ಲ, ಅವರ ನಿವಾಸಕ್ಕೆ ಭೇಟಿ ನೀಡಲಿಲ್ಲ ಅಥವಾ ಅವರಿಗೆ ಬಂದ ಬೆದರಿಕೆಗಳ ಬಗ್ಗೆ ತನಿಖೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಪಂಜಾಬ್‌ ಪೊಲೀಸರು ಖಂಡಾ ಅವರನ್ನು ಸಿಖ್ ಪ್ರತ್ಯೇಕತಾವಾದಿ, ವಾರಿಸ್ ಪಂಜಾಬ್ ನಾಯಕ ಅಮೃತಪಾಲ್ ಸಿಂಗ್‌ನ ಆಪ್ತ ಎಂದು ಹೇಳಿಕೊಂಡಿದ್ದಾರೆ. ಆತನ ಕುಟುಂಬ ಈ ಸಂಬಂಧವನ್ನು ನಿರಾಕರಿಸಿದೆ.  ಅಮೃತಪಾಲ್ ಸಿಂಗ್ ಪರಾರಿಯಾಗಿರುವಾಗ ಖಾಂಡಾ ಅವರ ತಾಯಿ ಮತ್ತು ಸಹೋದರಿಯನ್ನು ಪಂಜಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೋಲಿಸ್ ಠಾಣೆಯಲ್ಲಿ ಯುಕೆಯಲ್ಲಿರುವ ಖಾಂಡಾಗೆ ಕರೆ ಮಾಡಲು ತನ್ನ ಫೋನ್‌ನ್ನು  ಬಳಸಿದ್ದಾರೆ. ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಖಾಂಡಾ ಸಹೋದರಿ ಆರೋಪಿಸಿದ್ದಾರೆ.

ಖಂಡಾ ಅವರು ಏಪ್ರಿಲ್‌ನಲ್ಲಿ ತಮ್ಮ ವೈಯಕ್ತಿಕ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಭಾರತೀಯ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಿಂದ ನನಗೆ ಕರೆಗಳು ಬರುತ್ತಿವೆ ಮತ್ತು ಅವರು ಅಮೃತಪಾಲ್ ಸಿಂಗ್ ಎಲ್ಲಿದ್ದಾರೆ? ಎಂದು ಪ್ರಶ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿದ್ದರು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...