Homeಮುಖಪುಟಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

ಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

- Advertisement -
- Advertisement -

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಕೆನಡಾ ಆರೋಪಿಸಿತ್ತು. ಇದರಿಂದ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಇದಾದ ಕೆಲವೇ ತಿಂಗಳಲ್ಲಿ ಅಮೆರಿಕಾದಲ್ಲಿ ಇನ್ನೋರ್ವ ಸಿಖ್‌ ಪ್ರತ್ಯೇಕತವಾದಿ ನಾಯಕ ಪನ್ನೂನ್‌ ಹತ್ಯೆ ಸಂಚು ಆರೋಪ ಕೂಡ ಭಾರತದ ಮೇಲೆ ಹೊರಿಸಲಾಗಿತ್ತು. ಇದೀಗ ಭಾರತದ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ.

ಬ್ರಿಟನ್‌ನಲ್ಲಿ ನೆಲೆಸಿರುವ ಖಲಿಸ್ತಾನ್‌ ಪರ ಹೋರಾಟಗಾರ ಅವತಾರ್‌ ಸಿಂಗ್‌ ಖಾಂಡಾ ಜೂನ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಅವತಾರ್‌ ಸಿಂಗ್‌ ಖಾಂಡಾ ಅವರು ತನ್ನ ಸಾವಿಗೆ ಕೆಲವೇ ತಿಂಗಳುಗಳ ಮೊದಲು, ಭಾರತೀಯ ಪೊಲೀಸರು ನನಗೆ ಕಿರುಕುಳ ನೀಡಿದ್ದಾರೆ. ಪಂಜಾಬ್‌ನಲ್ಲಿರುವ ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಅವತಾರ್‌ ಸಿಂಗ್‌ ಖಾಂಡಾ ಪ್ರತ್ಯೇಕತಾವಾದಿ ಸಿದ್ಧಾಂತದೊಂದಿಗೆ ಯುಕೆಯಲ್ಲಿ ಸಿಖ್ ಯುವಕರನ್ನು ತೀವ್ರಗಾಮಿಗಳಾನ್ನಾಗಿಸುತ್ತಿದ್ದಾರೆ ಎಂದು ಭಾರತೀಯ ತನಿಖಾ ಏಜೆನ್ಸಿಗಳು ಖಾಂಡಾ ವಿರುದ್ಧ ಆರೋಪಿಸಿದೆ. ಖಲಿಸ್ತಾನಿ ಪರ ಗುಂಪುಗಳ ಪ್ರತಿಭಟನೆಯ ಸಂದರ್ಭದಲ್ಲಿ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಅವತಾರ್‌ ಸಿಂಗ್‌ ಖಾಂಡಾ ಓರ್ವನಾಗಿದ್ದ ಎನ್ನಲಾಗಿದೆ.

ಗಾರ್ಡಿಯನ್‌ನ ಪ್ರಕಾರ, ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವತಾರ್‌ ಸಿಂಗ್‌ ಖಾಂಡಾ ಯುಕೆಯ ಬರ್ಮಿಂಗ್ಹ್ಯಾಮ್‌ನಲ್ಲಿರುವ ಆಸ್ಪತ್ರೆಗೆ ದಾಖಲಾದ 4 ದಿನಗಳಲ್ಲಿ ಅಂದರೆ ಜೂ.15 ರಂದು ನಿಧನರಾಗಿದ್ದರು. ಅವನ ಸಹವರ್ತಿಗಳು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.

ಈ ಬಗ್ಗೆ ದಿ ಗಾರ್ಡಿಯನ್ ವರದಿಗಳು ಬ್ರಿಟನ್‌ ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿ ಪತ್ರಿಕಾ ಮಾಧ್ಯಮಕ್ಕೆ ನೀಡುವ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ ಮತ್ತು ಈ ವಿಷಯವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ ಎಂದು ಹೇಳಿದೆ. ಆದರೆ ಖಾಂಡಾ ಅವರ ಸ್ನೇಹಿತರು, ಸಿಖ್ ಕಾರ್ಯಕರ್ತರು ಮತ್ತು ಕುಟುಂಬದ ಸದಸ್ಯರಿಗೆ ತನಿಖೆಯ ಬಗ್ಗೆ ಸಮಾಧಾನವಿರಲಿಲ್ಲ.

ಖಾಂಡಾ ಅವರ ಮರಣದ ಸಂಭವಿಸಿದ ಕೆಲವೇ ದಿನಗಳಲ್ಲಿ ವ್ಯಾಂಕೋವರ್‌ನಲ್ಲಿ ಕೆನಡಾದ ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆ ನಡೆದಿದೆ. ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಭಾರತ ಸರ್ಕಾರ ಎದುರಿಸುತ್ತಿದೆ. ಇದಲ್ಲದೆ ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತ ವಿಫಲವಾದ ಸಂಚನ್ನು ರೂಪಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಸಮಿತಿ ಕೂಡ ಭಾರತ ರಚಿಸಿದೆ.

ದಿ ಗಾರ್ಡಿಯನ್‌ನ ಪ್ರಕಾರ, ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ಸಾವಿನ ತನಿಖೆ ನಡೆಸಿದ್ದರು ಎಂಬ ಅಧಿಕೃತ ಹೇಳಿಕೆಗಳಿಗೆ ಖಂಡಾ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ವಿರೋಧಿಸಿದ್ದಾರೆ. ಪೊಲೀಸರು ಅವರ ಮರಣದ ನಂತರ ಸ್ನೇಹಿತರು ಮತ್ತು ಕುಟುಂಬದವರಿಂದ ಹೇಳಿಕೆಗಳನ್ನು ತೆಗೆದುಕೊಳ್ಳಲಿಲ್ಲ, ಅವರು  ಕೆಲಸ  ಮಾಡುವಲ್ಲಿ ಸಹೋದ್ಯೋಗಿಗಳೊಂದಿಗೆ ಮಾತನಾಡಲಿಲ್ಲ, ಅವರ ನಿವಾಸಕ್ಕೆ ಭೇಟಿ ನೀಡಲಿಲ್ಲ ಅಥವಾ ಅವರಿಗೆ ಬಂದ ಬೆದರಿಕೆಗಳ ಬಗ್ಗೆ ತನಿಖೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಪಂಜಾಬ್‌ ಪೊಲೀಸರು ಖಂಡಾ ಅವರನ್ನು ಸಿಖ್ ಪ್ರತ್ಯೇಕತಾವಾದಿ, ವಾರಿಸ್ ಪಂಜಾಬ್ ನಾಯಕ ಅಮೃತಪಾಲ್ ಸಿಂಗ್‌ನ ಆಪ್ತ ಎಂದು ಹೇಳಿಕೊಂಡಿದ್ದಾರೆ. ಆತನ ಕುಟುಂಬ ಈ ಸಂಬಂಧವನ್ನು ನಿರಾಕರಿಸಿದೆ.  ಅಮೃತಪಾಲ್ ಸಿಂಗ್ ಪರಾರಿಯಾಗಿರುವಾಗ ಖಾಂಡಾ ಅವರ ತಾಯಿ ಮತ್ತು ಸಹೋದರಿಯನ್ನು ಪಂಜಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೋಲಿಸ್ ಠಾಣೆಯಲ್ಲಿ ಯುಕೆಯಲ್ಲಿರುವ ಖಾಂಡಾಗೆ ಕರೆ ಮಾಡಲು ತನ್ನ ಫೋನ್‌ನ್ನು  ಬಳಸಿದ್ದಾರೆ. ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಖಾಂಡಾ ಸಹೋದರಿ ಆರೋಪಿಸಿದ್ದಾರೆ.

ಖಂಡಾ ಅವರು ಏಪ್ರಿಲ್‌ನಲ್ಲಿ ತಮ್ಮ ವೈಯಕ್ತಿಕ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಭಾರತೀಯ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಿಂದ ನನಗೆ ಕರೆಗಳು ಬರುತ್ತಿವೆ ಮತ್ತು ಅವರು ಅಮೃತಪಾಲ್ ಸಿಂಗ್ ಎಲ್ಲಿದ್ದಾರೆ? ಎಂದು ಪ್ರಶ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿದ್ದರು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...