Homeಮುಖಪುಟಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

ಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

- Advertisement -
- Advertisement -

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಕೆನಡಾ ಆರೋಪಿಸಿತ್ತು. ಇದರಿಂದ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಇದಾದ ಕೆಲವೇ ತಿಂಗಳಲ್ಲಿ ಅಮೆರಿಕಾದಲ್ಲಿ ಇನ್ನೋರ್ವ ಸಿಖ್‌ ಪ್ರತ್ಯೇಕತವಾದಿ ನಾಯಕ ಪನ್ನೂನ್‌ ಹತ್ಯೆ ಸಂಚು ಆರೋಪ ಕೂಡ ಭಾರತದ ಮೇಲೆ ಹೊರಿಸಲಾಗಿತ್ತು. ಇದೀಗ ಭಾರತದ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ.

ಬ್ರಿಟನ್‌ನಲ್ಲಿ ನೆಲೆಸಿರುವ ಖಲಿಸ್ತಾನ್‌ ಪರ ಹೋರಾಟಗಾರ ಅವತಾರ್‌ ಸಿಂಗ್‌ ಖಾಂಡಾ ಜೂನ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಅವತಾರ್‌ ಸಿಂಗ್‌ ಖಾಂಡಾ ಅವರು ತನ್ನ ಸಾವಿಗೆ ಕೆಲವೇ ತಿಂಗಳುಗಳ ಮೊದಲು, ಭಾರತೀಯ ಪೊಲೀಸರು ನನಗೆ ಕಿರುಕುಳ ನೀಡಿದ್ದಾರೆ. ಪಂಜಾಬ್‌ನಲ್ಲಿರುವ ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಅವತಾರ್‌ ಸಿಂಗ್‌ ಖಾಂಡಾ ಪ್ರತ್ಯೇಕತಾವಾದಿ ಸಿದ್ಧಾಂತದೊಂದಿಗೆ ಯುಕೆಯಲ್ಲಿ ಸಿಖ್ ಯುವಕರನ್ನು ತೀವ್ರಗಾಮಿಗಳಾನ್ನಾಗಿಸುತ್ತಿದ್ದಾರೆ ಎಂದು ಭಾರತೀಯ ತನಿಖಾ ಏಜೆನ್ಸಿಗಳು ಖಾಂಡಾ ವಿರುದ್ಧ ಆರೋಪಿಸಿದೆ. ಖಲಿಸ್ತಾನಿ ಪರ ಗುಂಪುಗಳ ಪ್ರತಿಭಟನೆಯ ಸಂದರ್ಭದಲ್ಲಿ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಅವತಾರ್‌ ಸಿಂಗ್‌ ಖಾಂಡಾ ಓರ್ವನಾಗಿದ್ದ ಎನ್ನಲಾಗಿದೆ.

ಗಾರ್ಡಿಯನ್‌ನ ಪ್ರಕಾರ, ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವತಾರ್‌ ಸಿಂಗ್‌ ಖಾಂಡಾ ಯುಕೆಯ ಬರ್ಮಿಂಗ್ಹ್ಯಾಮ್‌ನಲ್ಲಿರುವ ಆಸ್ಪತ್ರೆಗೆ ದಾಖಲಾದ 4 ದಿನಗಳಲ್ಲಿ ಅಂದರೆ ಜೂ.15 ರಂದು ನಿಧನರಾಗಿದ್ದರು. ಅವನ ಸಹವರ್ತಿಗಳು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.

ಈ ಬಗ್ಗೆ ದಿ ಗಾರ್ಡಿಯನ್ ವರದಿಗಳು ಬ್ರಿಟನ್‌ ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿ ಪತ್ರಿಕಾ ಮಾಧ್ಯಮಕ್ಕೆ ನೀಡುವ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ ಮತ್ತು ಈ ವಿಷಯವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ ಎಂದು ಹೇಳಿದೆ. ಆದರೆ ಖಾಂಡಾ ಅವರ ಸ್ನೇಹಿತರು, ಸಿಖ್ ಕಾರ್ಯಕರ್ತರು ಮತ್ತು ಕುಟುಂಬದ ಸದಸ್ಯರಿಗೆ ತನಿಖೆಯ ಬಗ್ಗೆ ಸಮಾಧಾನವಿರಲಿಲ್ಲ.

ಖಾಂಡಾ ಅವರ ಮರಣದ ಸಂಭವಿಸಿದ ಕೆಲವೇ ದಿನಗಳಲ್ಲಿ ವ್ಯಾಂಕೋವರ್‌ನಲ್ಲಿ ಕೆನಡಾದ ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆ ನಡೆದಿದೆ. ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಭಾರತ ಸರ್ಕಾರ ಎದುರಿಸುತ್ತಿದೆ. ಇದಲ್ಲದೆ ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತ ವಿಫಲವಾದ ಸಂಚನ್ನು ರೂಪಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಸಮಿತಿ ಕೂಡ ಭಾರತ ರಚಿಸಿದೆ.

ದಿ ಗಾರ್ಡಿಯನ್‌ನ ಪ್ರಕಾರ, ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ಸಾವಿನ ತನಿಖೆ ನಡೆಸಿದ್ದರು ಎಂಬ ಅಧಿಕೃತ ಹೇಳಿಕೆಗಳಿಗೆ ಖಂಡಾ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ವಿರೋಧಿಸಿದ್ದಾರೆ. ಪೊಲೀಸರು ಅವರ ಮರಣದ ನಂತರ ಸ್ನೇಹಿತರು ಮತ್ತು ಕುಟುಂಬದವರಿಂದ ಹೇಳಿಕೆಗಳನ್ನು ತೆಗೆದುಕೊಳ್ಳಲಿಲ್ಲ, ಅವರು  ಕೆಲಸ  ಮಾಡುವಲ್ಲಿ ಸಹೋದ್ಯೋಗಿಗಳೊಂದಿಗೆ ಮಾತನಾಡಲಿಲ್ಲ, ಅವರ ನಿವಾಸಕ್ಕೆ ಭೇಟಿ ನೀಡಲಿಲ್ಲ ಅಥವಾ ಅವರಿಗೆ ಬಂದ ಬೆದರಿಕೆಗಳ ಬಗ್ಗೆ ತನಿಖೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಪಂಜಾಬ್‌ ಪೊಲೀಸರು ಖಂಡಾ ಅವರನ್ನು ಸಿಖ್ ಪ್ರತ್ಯೇಕತಾವಾದಿ, ವಾರಿಸ್ ಪಂಜಾಬ್ ನಾಯಕ ಅಮೃತಪಾಲ್ ಸಿಂಗ್‌ನ ಆಪ್ತ ಎಂದು ಹೇಳಿಕೊಂಡಿದ್ದಾರೆ. ಆತನ ಕುಟುಂಬ ಈ ಸಂಬಂಧವನ್ನು ನಿರಾಕರಿಸಿದೆ.  ಅಮೃತಪಾಲ್ ಸಿಂಗ್ ಪರಾರಿಯಾಗಿರುವಾಗ ಖಾಂಡಾ ಅವರ ತಾಯಿ ಮತ್ತು ಸಹೋದರಿಯನ್ನು ಪಂಜಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೋಲಿಸ್ ಠಾಣೆಯಲ್ಲಿ ಯುಕೆಯಲ್ಲಿರುವ ಖಾಂಡಾಗೆ ಕರೆ ಮಾಡಲು ತನ್ನ ಫೋನ್‌ನ್ನು  ಬಳಸಿದ್ದಾರೆ. ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಖಾಂಡಾ ಸಹೋದರಿ ಆರೋಪಿಸಿದ್ದಾರೆ.

ಖಂಡಾ ಅವರು ಏಪ್ರಿಲ್‌ನಲ್ಲಿ ತಮ್ಮ ವೈಯಕ್ತಿಕ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಭಾರತೀಯ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಿಂದ ನನಗೆ ಕರೆಗಳು ಬರುತ್ತಿವೆ ಮತ್ತು ಅವರು ಅಮೃತಪಾಲ್ ಸಿಂಗ್ ಎಲ್ಲಿದ್ದಾರೆ? ಎಂದು ಪ್ರಶ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿದ್ದರು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...