HomeUncategorized'ಮೈಚಾಂಗ್' ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!

‘ಮೈಚಾಂಗ್’ ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!

- Advertisement -
- Advertisement -

ಡಿಸೆಂಬರ್ 4 ಮತ್ತು 5ರಂದು ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶಕ್ಕೆ ‘ಮೈಚಾಂಗ್ ಚಂಡಮಾರುತ’ ಅಪ್ಪಳಿಸಿದ್ದು, ಭಾರೀ ಮಳೆಗೆ ಚೆನ್ನೈ ನಗರ ಹಾಗೂ ಅಕ್ಕಪಕ್ಕದ ಜಿಲ್ಲೆಗಳು ತತ್ತರಿಸಿವೆ. ನಗರದ ಬಹುತೇಕ ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹಕ್ಕೆ ಸಿಲುಕಿರುವ ಜನರನ್ನು ಮೀನುಗಾರಿಕಾ ದೋಣಿಗಳು ಮತ್ತು ಕೃಷಿ ಟ್ರ್ಯಾಕ್ಟರ್‌ಗಳ ಮೂಲಕ ರಕ್ಷಿಸುವ ಕಾರ್ಯ ನಡೆಯುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಹನ್ನೆರಡು ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾಹದಿಂದ ಗಾಯಗೊಂಡಿರುವ 11 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನೈ ನಗರದಾದ್ಯಂತ ಎಲ್ಲ ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಹಲವಾರು ಜಿಲ್ಲಾ ವಿಪತ್ತು ಪ್ರತಿಕ್ರಿಯೆ ತಂಡಗಳನ್ನು (DDRT) ರಚಿಸಲಾಗಿದೆ.

ನಗರದ ಹೊರವಲಯದಲ್ಲಿರುವ ಮುತ್ಯಾಲಪೇಟೆ ಪ್ರದೇಶದಲ್ಲಿ 54 ಕುಟುಂಬಗಳನ್ನು ರಕ್ಷಿಸಲಾಗಿದ್ದು, ಹೆರಿಗೆಯಾದ ಮಹಿಳೆಯನ್ನು ನಗರದ ಸಾಲಿಗ್ರಾಮದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ತಗ್ಗು ಪ್ರದೇಶದ 250ಕ್ಕೂ ಹೆಚ್ಚು ಜನರು ಕೊಟ್ಟೂರ್ಪುರಂನ ಶಾಲೆಯ ಆಶ್ರಯ ಪಡೆದಿದ್ದಾರೆ. ಮಳೆ ನೀರಿನಲ್ಲಿ ಸಿಲುಕಿದ್ದ ಬಸ್‌ನಲ್ಲಿದ್ದ 22 ಪ್ರಯಾಣಿಕರನ್ನು ಪಲ್ಲಾವರಂನ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿರುವ ಪರಿಹಾರ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಚೆನ್ನೈನ ಚುಲೈ ಕಣ್ಣಪರ್ ನಲ್ಲಿ ಸ್ಥಾಪಿಸಿರುವ ಶಿಬಿರಕ್ಕೆ ಭೇಟಿ ನೀಡಿದ ಸಿಎಂ ಸ್ಟಾಲಿನ್, ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದರು.

ಮಂಗಳವಾರ ಬೆಳಿಗ್ಗೆಯಿಂದ, ಚೆನ್ನೈನ ಹೆಚ್ಚಿನ ಭಾಗಗಳಲ್ಲಿ ಮಳೆ ಬಿಡುವು ಕೊಟ್ಟಿತ್ತು. ಈ ಸಂದರ್ಭದಲ್ಲಿ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ರಕ್ಷಣಾ ಕಾರ್ಯಚರಣೆ ಮತ್ತು ಪರಿಹಾರ ಕಾರ್ಯವನ್ನು ಚುರುಕುಗೊಳಿಸಿದರು.

ಚೆನ್ನೈ ಕಾರ್ಪೊರೇಷನ್ ಪ್ರಧಾನ ಕಛೇರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಹಾಗೂ ಪರಿಹಾರ ಕಾರ್ಯಗಳಿಗಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

‘ಚೆನ್ನೈ ಸೇರಿದಂತೆ ಒಂಬತ್ತು ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ ಸಾಕಷ್ಟು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ ಅಂದಾಜು 11 ಲಕ್ಷ ಆಹಾರ ಪ್ಯಾಕೆಟ್‌ಗಳು ಮತ್ತು ಒಂದು ಲಕ್ಷ ಹಾಲಿನ ಪ್ಯಾಕೆಟ್‌ಗಳನ್ನು ವಿತರಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ಹಂತ ಹಂತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. 2015ರ ಪ್ರವಾಹಕ್ಕೆ ಹೋಲಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ನಗರದ ಹೊರವಲಯದಲ್ಲಿರುವ ಚೆಂಬರಂಬಾಕ್ಕಂ ಜಲಾಶಯದಿಂದ ಅಡ್ಯಾರ್ ನದಿಗೆ ಮುನ್ಸೂಚನೆ ನೀಡದೆ ಒಂದು ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ್ದರಿಂದ 2015ರಲ್ಲಿ ಮಾನವ ನಿರ್ಮಿತ ಪ್ರವಾಹಕ್ಕೆ ಕಾರಣವಾಯಿತು. ಪ್ರಸ್ತುತ ಪರಿಸ್ಥಿತಿ ಹಾಗೂ ಧಾರಾಕಾರ ಮಳೆಯಿಂದ ಉಂಟಾದ ನೈಸರ್ಗಿಕ ಪ್ರವಾಹವನ್ನು ರಾಜ್ಯವು ಸಮರ್ಥವಾಗಿ ನಿರ್ವಹಿಸಿದೆ’ ಎಂದು ಹೇಳಿದರು.

‘ಮಳೆ ಸಂಬಂಧಿತ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡ 12 ಜನರಲ್ಲಿ ಫೋರ್ಶೋರ್ ಎಸ್ಟೇಟ್‌ನಲ್ಲಿ 60 ವರ್ಷದ ಮಹಿಳೆ ಮತ್ತು ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದ 48 ವರ್ಷದ ವ್ಯಕ್ತಿ ಸೇರಿದ್ದಾರೆ’ ಎಂದು ಅಧಿಕಾರಿಯೊಬ್ಬರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

‘ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಫೆಡರೇಶನ್ ಲಿಮಿಟೆಡ್‌ನ ಅಂಬತ್ತೂರು ಡೈರಿಯು ಸಂಪೂರ್ಣ ಮುಳುಗಡೆಯಾದ ಕಾರಣ ಐದು ಲಕ್ಷ ಲೀಟರ್ ಸಾಮರ್ಥ್ಯದ ಹಾಲಿನ ಘಟಕದ ಕಾರ್ಯಾಚರಣೆಗೆ ತೊಂದರೆಯಾಗಿದೆ’ ಎಂದು ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಟಿ ಮನೋ ತಂಗರಾಜ್ ಹೇಳಿದ್ದಾರೆ.

ನಗರದಲ್ಲಿ ಪ್ರವಾಹ ತಗ್ಗಿಸುವ ಕಾರ್ಯಗಳಿಗಾಗಿ ಚೆನ್ನೈ ಕಾರ್ಪೊರೇಷನ್ ಅಧಿಕಾರಿಗಳು ನೆರೆಯ ಜಿಲ್ಲೆಗಳಿಂದ 5000 ಕಾರ್ಮಿಕರನ್ನು ಕರೆತಂದಿದ್ದಾರೆ. ಈ ಕಾರ್ಮಿಕರು ಕೃಷಿ ಟ್ರ್ಯಾಕ್ಟರ್‌ಗಳು ಮತ್ತು ಮೀನುಗಾರಿಕಾ ದೋಣಿಗಳನ್ನು ಬಳಸಿಕೊಂಡು ಪೆರಿಯಾಮೆಟ್ ಮತ್ತು ಉತ್ತರ ಚೆನ್ನೈನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಹಾಗೂ ಪರಿಹಾರ ಸಾಮಗ್ರಿಗಳನ್ನು ವಿತರಿಸುತ್ತಿದ್ದಾರೆ.

ಚೆನ್ನೈ ಉಪನಗರ ತಾಂಬರಂ, ಅಶೋಕ್ ನಗರ, ಕಟ್ಟುಪಾಕ್ಕಂ ಮತ್ತು ಪೆರುಂಗುಡಿ ಮುಂತಾದ ಪ್ರದೇಶಗಳಲ್ಲಿ ಹಲವಾರು ಗಂಟೆಗಳ ಕಾಲ ಮಳೆ ನಿಂತಿದ್ದರೂ ವಿದ್ಯುತ್ ಮರುಸ್ಥಾಪನೆಯಾಗಿಲ್ಲ. ಈ ಪ್ರದೇಶ ಪ್ರಮುಖ ರಸ್ತೆಗಳಲ್ಲಿ ನೀರು ಇಳಿಮುಖವಾಗಿದ್ದರೂ ವಿದ್ಯುತ್ ಸಂಪರ್ಕ ಮರು ಸ್ಥಾಪಿಸಿಲ್ಲ ಎಂದು ಅಶೋಕನಗರ ನಿವಾಸಿಗಳು ಸಂಕಷ್ಟ ತೋಡಿಕೊಂಡಿದ್ದಾರೆ.

ಇದನ್ನೂ ಓದಿ; ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...