Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...