Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...