Homeಕರ್ನಾಟಕಬೆಂಗಳೂರಿನ ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ: ಇಂಟರ್‌ಪೋಲ್‌ ನೆರವು ಕೋರಿದ ಪೊಲೀಸರು

ಬೆಂಗಳೂರಿನ ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ: ಇಂಟರ್‌ಪೋಲ್‌ ನೆರವು ಕೋರಿದ ಪೊಲೀಸರು

- Advertisement -
- Advertisement -

ಬೆಂಗಳೂರು ನಗರದ 48 ಶಾಲೆಗಳಿಗೆ ಕಳೆದ ವಾರ ನಕಲಿ ಬಾಂಬ್‌ ಬೆದರಿಕೆ ಕರೆಗಳು ಬಂದಿದ್ದವು. ಈ ಕುರಿತ ತನಿಖೆಗೆ ಸಹಾಯಕ್ಕಾಗಿ ಸಿಬಿಐ ಮೂಲಕ ಇಂಟರ್‌ಪೋಲ್‌ನ್ನು ಸಂಪರ್ಕಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು ನಗರದಲ್ಲಿನ 48 ಶಾಲೆಗಳಿಗೆ ಮತ್ತು ಹೊರವಲಯದಲ್ಲಿರುವ 22 ಶಾಲೆಗಳಿಗೆ ಶುಕ್ರವಾರ ಬೆದರಿಕೆ  ಇಮೇಲ್‌ಗಳು ಬಂದಿವೆ. ಬೆಂಗಳೂರು ನಗರ ಪೊಲೀಸರು 48 ಇಮೇಲ್‌ಗಳ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದರೆ. ಬೆಂಗಳೂರು ಜಿಲ್ಲಾ ಪೊಲೀಸರು ಉಳಿದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ, ಬೆದರಿಕೆ ಇಮೇಲ್‌ ಬಂದಿರುವ ಬಗ್ಗೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ 27 ಎಫ್‌ಐಆರ್‌ಗಳು ದಾಖಲಾಗಿದ್ದು, ಸೋಮವಾರ ಪ್ರಕರಣದ ಕುರಿತು ಸಭೆ ನಡೆಸಲಾಗಿದೆ. ಕಳೆದ ವರ್ಷ ಇದೇ ರೀತಿಯ 6 ಇಮೇಲ್‌ಗಳು ಬಂದಿದ್ದವು. ಪ್ರಕರಣಕ್ಕೆ ಸಂಬಂಧಿಸಿ ಕೆಲವು ಬಾಲಾಪರಾಧಿಗಳನ್ನು ಬಂಧಿಸಲಾಗಿತ್ತು. ಇಮೇಲ್‌ಗಳಲ್ಲಿನ  ಸಾಮ್ಯತೆಯ ಕುರಿತು ತನಿಖೆಗೆ ನಾವು ಆ ಪ್ರಕರಣಗಳ ತನಿಖಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಎಲ್ಲಾ ಶಾಲೆಗಳು ಒಂದೇ ಐಡಿಯಿಂದ ಬೆದರಿಕೆ ಇ-ಮೇಲ್‌ನ್ನು ಸ್ವೀಕರಿಸಿವೆ ಮತ್ತು ಅದರಲ್ಲಿದ್ದ ವಿಷಯವು  ಒಂದೇ ಆಗಿದೆ. ಇಂತಹ ಇಮೇಲ್‌ಗಳನ್ನು ಬರೆಯುವ ಹಿಂದಿನ ಸಂಭವನೀಯ ಕಾರಣಗಳು ಮತ್ತು ಇ-ಇಮೇಲ್‌ ಏನು ಸೂಚಿಸುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪೊಲೀಸರು ತಜ್ಞರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಕಮಿಷನರ್‌ ಹೇಳಿದ್ದಾರೆ.

ಪೊಲೀಸರು ಕಳುಹಿಸಿದ ವಿನಂತಿಗೆ ಇ-ಮೇಲ್ ಸೇವಾ ಪೂರೈಕೆದಾರರು ಪ್ರತಿಕ್ರಿಯಿಸಿದ್ದಾರೆ. ಆ ಮಾರ್ಗಗಳಲ್ಲಿಯೂ ತನಿಖೆಗಳು ನಡೆಯುತ್ತಿವೆ. ಪೊಲೀಸರು ಪ್ರಕರಣವನ್ನು ವಿವರವಾಗಿ ಅರ್ಥಮಾಡಿಕೊಳ್ಳಲು ವಿವಿಧ ದೇಶಗಳಲ್ಲಿ ಇದೇ ರೀತಿಯ ಘಟನೆಗಳ ಬಗ್ಗೆ ಮುಕ್ತ ಮೂಲಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯುಎಸ್ಎ, ಜರ್ಮನಿ, ಮಲೇಷ್ಯಾ ಮತ್ತು ಟ್ರಿನಿಡಾಡ್ ಮತ್ತು ಟೊಬಾಗೊಗೆ ಇದೇ ರೀತಿಯ ಇಮೇಲ್‌ಗಳು ಬಂದಿವೆ. ಈ ಪ್ರಕರಣವು ಸವಾಲಾಗಿದೆ. ಇದು ಒಂದು ರೀತಿಯ ಸೈಬರ್ ಅಪರಾಧ ಮತ್ತು ಇಮೇಲ್‌ಗಳನ್ನು ಕಳುಹಿಸಲು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (VPN) ಬಳಸಲಾಗಿರುವುದರಿಂದ ಪ್ರಕರಣವು ತಾಂತ್ರಿಕ ಜಟಿಲತೆಗಳನ್ನು ಒಳಗೊಂಡಿರುತ್ತದೆ ಎಂದು ಕಮಿಷನರ್‌ ಹೇಳಿದ್ದಾರೆ.

ಆರೋಪಿಯು beeble.comನ ವಿವಿಧ ಇಮೇಲ್ ಐಡಿಗಳಿಂದ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಬೆಂಗಳೂರು ಪೊಲೀಸರು ಆ ಕಂಪನಿಗೆ ಪತ್ರ ಬರೆದು ಅವರಿಂದ ವಿವರ ಪಡೆದಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಡಿ.1ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿತ್ತು. ತಕ್ಷಣ ಎಚ್ಚೆತ್ತು ಪೊಲೀಸರು ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕಗಳು ಪತ್ತೆಯಾಗಿರಲಿಲ್ಲ. ಬೆಂಗಳೂರಿನ ಬಸವೇಶ್ವರ ನಗರ, ಸದಾಶಿವನಗರ, ಯಲಹಂಕ ಮತ್ತು ಬನ್ನೇರುಘಟ್ಟ ಭಾಗದ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸರು ಶಾಲೆಗಳಿಗೆ ತೆರಳಿ ಮಕ್ಕಳನ್ನು ಮನೆಗೆ ಕಳುಹಿಸಿ ಪರಿಶೀಲನೆ ನಡೆಸಿದ್ದರು.

ಇದನ್ನು ಓದಿ: ‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...