HomeUncategorizedಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಹೆಡಗೇವಾರ್ ಮ್ಯೂಸಿಯಂ ಪ್ರವೇಶಕ್ಕೆ ನಿರಾಕರಣೆ: ಗೂಳಿಹಟ್ಟಿ ಶೇಖರ್

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್‌ಎಸ್‌ಎಸ್‌ ಮುಖಂಡ ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಆಡಿಯೋ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದ್ದು, ‘ಬಹಳ ಖುಷಿಯಿಂದ ನಾನು ಆರ್‌ಎಸ್‌ಎಸ್ ಕಚೇರಿಗೆ ಹೋದೆ, ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಸ್ನೇಹಿತರ ಜತೆಗೆ ಮಹಾರಾಷ್ಟ್ರದ ನಾಗಪುರದ ಆರೆಸ್ಸೆಸ್ ಕಚೇರಿಗೆ ಖುಷಿಯಿಂದ ಭೇಟಿ ನೀಡಿದ್ದೆ. ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ನನಗೆ ಬಹಳ ನೋವಾಗಿದೆ’ ಎಂದು ಹೇಳಿದ್ದಾರೆ.

‘ಮ್ಯೂಸಿಯಂ ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶ ದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು ತಡೆದರು. ತಪ್ಪು ತಿಳಿಯಬೇಡಿ, ನೀವು ಮೀಸಲಾತಿ ಪಡೆದುಕೊಳ್ಳುವ ಜಾತಿಗೆ ಸೇರಿದ್ದೀರಾ ಎಂದು ಕೇಳಿದರು. ನಾನು ಹೌದು ಎಂದಿದ್ದಕ್ಕೆ ನನಗೆ ಪ್ರವೇಶ ನಿರಾಕರಿಸಿದರು. ನನ್ನೊಂದಿಗೆ ಬಂದಿದ್ದ ಇಬ್ಬರು ಸ್ನೇಹಿತರು ಮಾತ್ರ ಒಳಗೆ ಹೋದರು. ಪರವಾಗಿಲ್ಲ ಎಂದು ಹೇಳಿದ ನಾನು, ಹೊರಗೆ ಕಾಯುತ್ತಾ ಕುಳಿತುಕೊಂಡೆ. ಗೋವಿಂದ ಕಾರಜೋಳ ಹಾಗೂ ಸಂಸದ ಆನೇಕಲ್ ನಾರಾಯಣಸ್ವಾಮಿ ಅವರಿಗೂ ಪ್ರವೇಶ ನಿರಾಕರಿಸಲಾಗಿತ್ತಾ? ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿದ್ದಾರೆ.

ಬಿಜೆಪಿಯಿಂದ ದೂರ ಉಳಿದಿರುವ ಗೂಳಿಹಟ್ಟಿ:

ಹೊಸದುರ್ಗ ಮೀಸಲು ಕ್ಷೇತ್ರದಿಂದ ಗೆದ್ದು ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್, 2023ರ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದಾರೆ. ಹೊಸದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಗೂಳಿಹಟ್ಟಿ ಶೇಖರ್‌ಗೆ ಹೈಕಮಾಂಡ್ ಟಿಕೆಟ್ ನೀಡಲಿಲ್ಲ. ಬದಲಿಗೆ ಅಂದಿನ ಖನಿಜ ನಿಗಮದ ಅಧ್ಯಕ್ಷರಾಗಿದ್ದ ಎಸ್. ಲಿಂಗಮೂರ್ತಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಗೂಳಿಹಟ್ಟಿ ರಾಜೀನಾಮೆ ನೀಡಿದ್ದರು.

ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ:

ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಅವರು, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ಸುಮಾರು ₹23 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಇದನ್ನೂ ಓದಿ; ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...