HomeUncategorizedಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

ಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

- Advertisement -
- Advertisement -

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಮಂಡಿಸಿದ ಹಕ್ಕುಚ್ಯುತಿ ಪ್ರಸ್ತಾಪವನ್ನು ವಿಧಾನಮಂಡಲದ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಬೆಳ್ತಂಗಡಿಯ ಅರಣ್ಯಾಧಿಕಾರಿಗಳಿಂದ ನನಗೆ ಹಕ್ಕು ಚ್ಯುತಿಯಾಗಿದೆ ಎಂದು ಆರೋಪಿಸಿದ ಶಾಸಕ ಹರೀಶ್ ಪೂಂಜಾ, ಮಂಗಳವಾರ ವಿಧಾನಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಂಡಿಸಲು ಅವಕಾಶ ಕೋರಿದರು. ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸಿದರು.

ಬೆಳ್ತಂಗಡಿ ಅರಣ್ಯಾಧಿಕಾರಿಗಳು ಶಾಸಕ ಹರೀಶ್ ಪೂಂಜಾ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಅರಣ್ಯಾಧಿಕಾರಿಗಳನ್ನು ಅಮಾನತು ಮಾಡಬೇಕು. ಶಾಸಕರ ರಕ್ಷಣೆ ನಿಮ್ಮ ಜವಾಬ್ದಾರಿ. ಶಾಸಕರಿಂದ ಹಕ್ಕುಚ್ಯುತಿ ಪಡೆದುಕೊಂಡು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್‌ಗೆ ಆಗ್ರಹಿಸಿದರು.

ಬಿಜೆಪಿ ಶಾಸಕರ ಒತ್ತಾಯಕ್ಕೆ ಮಣಿದ ಸ್ಪೀಕರ್ ಖಾದರ್, ಹಕ್ಕುಚ್ಯುತಿ ಮಂಡನೆಗೆ ಹರೀಶ್ ಪೂಂಜಾ ಅವರಿಗೆ ಅನುಮತಿ ನೀಡಿದರು. ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯ ಮೂವರು ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

ಹಕ್ಕುಚ್ಯುತಿ ಮಂಡನೆಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮೀಸಲು ಅರಣ್ಯವನ್ನು ಅತಿಕ್ರಮಿಸಿ ಕೃಷಿ ಮಾಡಿದ್ದಕ್ಕೆ ದೂರು ದಾಖಲಾಗಿದೆ. ಅತಿಕ್ರಮಣ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾದಾಗ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ನಾನು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದಾಗ ಅತಿಕ್ರಮಣದ ಬಗ್ಗೆ ತಿಳಿಸಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ತರಿಸುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ್ದೆ. ನನ್ನ ಕಾಲ್ ರೆಕಾರ್ಡ್‌ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದೀರಿ. ಇದು ಸರಿಯಾದ ಕ್ರಮವಲ್ಲ ಎಂದರು.

ಈಶ್ವರ್ ಖಂಡ್ರೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಸುನೀಲ್ ಕುಮಾರ್, ಹಕ್ಕುಚ್ಯುತಿ ಬಗ್ಗೆ ಸಚಿವರು ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದರು. ಈ ವೇಳೆ ಸಚಿವ ಖಂಡ್ರೆ ಬೆಂಬಲಕ್ಕೆ ಬಂದ ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವರು ಪ್ರಕರಣದ ಬಗ್ಗೆ ಸದನಕ್ಕೆ ಮಾಹಿತಿ ನೀಡುತ್ತಿದ್ದಾರೆ ಎಂದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಪ್ರಕರಣದ ಹಿನ್ನೆಲೆ :

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಅವರು ಮೀಸಲು ಅರಣ್ಯದ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅ.6 ರಂದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸಿದ್ದರು.

ಈ ವಿಚಾರ ತಿಳಿದು ಶಾಸಕ ಹರೀಶ್ ಪೂಂಜಾ ಅ.7ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಕುರಿತ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಅರಣ್ಯ ಇಲಾಖೆ ಜಾಗವನ್ನು ಒತ್ತುವರಿ ನಡೆಸಿದವರು ಹಾಗೂ ಅದಕ್ಕೆ ಸಹಕರಿಸಿದ 11 ಜನರ ವಿರುದ್ಧ ಅ. 7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.

ಅ. 9 ರಂದು ಮತ್ತೆ ಮೇಲಧಿಕಾರಿಗಳ ಆದೇಶದಂತೆ ಎಸಿಎಫ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ.ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಲೋಲಾಕ್ಷ ಅವರ ಮನೆಯ ಶೆಡ್ ತೆರವಿಗೆ ಮುಂದಾಗಿದ್ದರು. ಈ ವೇಳೆ ಹರೀಶ್ ಪೂಂಜಾ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ತೆರಳಿ ಲೋಲಾಕ್ಷ ಅವರ ಮನೆ ತೆರವು ಮಾಡದಂತೆ ನೋಡಿಕೊಂಡಿದ್ದರು.

ಈ ವೇಳೆ ಅರಣ್ಯಾಧಿಕಾರಿ ಮತ್ತು ಹರೀಶ್ ಪೂಂಜಾ ನಡುವೆ ವಾಗ್ವಾದ ನಡೆದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅಸಂಸದೀಯ ಪದ ಬಳಸಿ ಬೈದಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಬಿಜೆಪಿ-ಕಾಂಗ್ರೆಸ್‌ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು. ಈ ಸಂಬಂಧ ಅರಣ್ಯಾಧಿಕಾರಿ ಅ.13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ : ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...