Homeಕರ್ನಾಟಕಕಲ್ಬುರ್ಗಿ-ಗೌರಿ ಹತ್ಯೆ ವಿಚಾರಣೆ; ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ

ಕಲ್ಬುರ್ಗಿ-ಗೌರಿ ಹತ್ಯೆ ವಿಚಾರಣೆ; ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ

- Advertisement -
- Advertisement -

ಖ್ಯಾತ ಸಂಶೋಧಕ ಎಂ.ಎಂ. ಕಲ್ಬುರ್ಗಿ ಮತ್ತು ಜನಪರ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಹಾಗೂ ಪೂರ್ಣಾವಧಿ ನ್ಯಾಯಾಧೀಶರ ನೇಮಕಾತಿ ಮಾಡುವಂತೆ ಸಲ್ಲಿಸಿದ್ದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಈ ಬಗ್ಗೆ ತ್ವರಿತವಾಗಿ ಅಗತ್ಯ ಕ್ರಮ ವಹಿಸುವಂತೆ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹಿಂದುತ್ವ ಸಂಘಟನೆಗಳು ನಡೆಸುತ್ತಿದ್ದ ಕೋಮು ದ್ವೇಶ ಹಾಗೂ ದ್ವೇಶ ರಾಜಕಾರಣವನ್ನು ವಿರೋಧಿಸುತ್ತಿದ್ದ ಗೌರಿ ಲಂಕೇಶ್ ಅವರನ್ನು ಕಳೆದ ಐದು ವರ್ಷಗಳ ಹಿಂದೆ ಇದೇ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಗುಂಡಿಟ್ಟು ಕೊಂದಿದ್ದರು. ಗೌರಿ ಹತ್ಯೆ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ದಳಕ್ಕೆ, ಅದಕ್ಕೂ ಎರಡು ವರ್ಷಗಳ ಹಿಂದೆ ಎಂ.ಎಂ. ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿದ್ದ ಆರೋಪಿಗಳ ಸುಳಿವೂ ಸಿಕ್ಕಿತ್ತು. ಎರಡೂ ಹತ್ಯೆ ನಡೆದು ಏಳು ವರ್ಷ ಕಳೆದರೂ ಈವರೆಗೆ ಪ್ರಕರಣಗಳ ವಿಚಾರಣೆ ಮಾತ್ರ ಪೂರ್ಣಗೊಂಡಿಲ್ಲ. ಆರೋಪಿಗಳ ಬಂಧನವಾಗಿದ್ದರೂ ವಿಚಾರಣೆ ಪೂರ್ಣಗೊಳ್ಳದ ಕಾರಣಕ್ಕೆ ಶಿಕ್ಷೆ ಪ್ರಕಟವಾಗಿಲ್ಲ. ಆದ್ದರಿಂದ, ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಎಂಎಂ ಕಲ್ಬುರ್ಗಿ ಕುಟುಂಬದವರು ಹಾಗೂ ಪೂರ್ಣಾವಧಿ ನ್ಯಾಯಾಧೀಶರ ನೇಮಕ ಮಾಡುವಂತೆ ಗೌರಿ ಲಂಕೇಶ್ ಕುಟುಂಬದವರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಹಿರಿಯ ಸಾಹಿತಿ ಹಾಗೂ ಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರನ್ನು ದಿನಾಂಕ: 31.08.2015 ರಂದು ಧಾರವಾಡದ ಅವರ ಮನೆಯಲ್ಲೇ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ನ್ಯಾಯಾಲಯಕ್ಕೆ 1950 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೆ, ವಿಚಾರಣೆ ಪೂರ್ಣಗೊಂಡು ಶಿಕ್ಷೆ ಪ್ರಕಟವಾಗಿಲ್ಲ. ಘಟನೆ ನಡೆದು ಸಾಕಷ್ಟು ವರ್ಷಗಳು ಕಳೆದಿವೆ; ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಬೇಕು ಎಂದು ಮೃತರ ಪತ್ನಿ ಉಮಾದೇವಿ ಎಂ. ಕಲ್ಬುರ್ಗಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಗೌರಿ ಹತ್ಯೆ; ಪೂರ್ಣಾವಧಿ ನ್ಯಾಯಾಧೀಶರ ನೇಮಕಕ್ಕೆ ಸೂಚನೆ

ಜನಪರ ಪತ್ರಕರ್ತೆ, ಹಿಂದುತ್ವ ಸಂಘಟನೆಗಳ ಕಟು ಟೀಕಾಕಾರರಾಗಿದ್ದ ಗೌರಿ ಲಂಕೇಶ್ ಅವರನ್ನು ರಾಜರಾಜೇಶ್ವರಿ ನಗರದ ಅವರ ನಿವಾಸ ಮುಂದೆಯೇ 2017ರ ಸೆಪ್ಟೆಂಬರ್ 5ರ ಸಂಜೆ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸದೆ, ವಿಶೇಷ ತನಿಖಾ ದಳ (SIT) ಸ್ಥಾಪಿಸಿದ್ದರು. ಗೌರಿ ಹತ್ಯೆ ತನಿಖಾ ಸಂದರ್ಭದಲ್ಲಿ, ಎಂಎಂ ಕಲ್ಬುರ್ಗಿ ಹಾಗೂ ಮಹಾರಾಷ್ಟ್ರದಲ್ಲಿ ಇದೇ ಮಾದರಿಯಲ್ಲಿ ಹತ್ಯೆ ನಡೆಸಿದ್ದ ಆರೋಪಿಗಳ ಸುಳಿವೂ ಸಿಕ್ಕಿತ್ತು.

ಗೌರಿ ಹತ್ಯೆ ನಡೆದು ಐದು ವರ್ಷಗಳು ಕಳೆದು ಚಾರ್ಜ್‌ ಶೀಟ್ ಸಲ್ಲಿಕೆಯಾಗಿದ್ದರೂ ಕೋರ್ಟ್ ವಿಚಾರಣೆ ಮಾತ್ರ ಕುಂಟುತ್ತಲೇ ಸಾಗಿದೆ. ಪ್ರಕರಣ ಸಂಬಂಧ ಇದುವರೆಗೆ 18 ಆರೋಪಿಗಳನ್ನು ಬಂಧಿಸಲಾಗಿದ್ದು, ವಿವಿಧ ಬಗೆಯ 500 ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಜುಲೈ, 2022 ರಿಂದ ನ್ಯಾಯಾಲಯದಲ್ಲಿ ವಿಚಾರಣೆಯು ಪ್ರಾರಂಭಗೊಂಡಿದ್ದು, ಈವರೆಗೆ ಕೇವಲ 94 ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದೆ.

ನ್ಯಾಯಾಲಯದಲ್ಲಿ ದಿನನಿತ್ಯ ಹಲವು ಪ್ರಕರಣಗಳು ವಿಚಾರಣೆಗೆ ಬಾಕಿ ಇರುವುದರಿಂದ, ಗೌರಿ ಹತ್ಯೆ ಪ್ರಕರಣದ ವಿಚಾರಣೆಗೆ ಹಿನ್ನಡೆಯಾಗುತ್ತಿದೆ. ಆದ್ದರಿಂದ, ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಮೃತ ಗೌರಿ ಸಹೋದರಿ ಕವಿತಾ ಲಂಕೇಶ್ ಅವರು ಮನವಿ ಮಾಡಿದ್ದರು. ಇದೀಗ ಎರಡೂ ಪ್ರಕರಣಗಳ ಕುರಿತು ‘ಜರೂರು ಅಗತ್ಯ ಕ್ರಮ’ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ; ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...