Homeಕರ್ನಾಟಕಕಲ್ಬುರ್ಗಿ-ಗೌರಿ ಹತ್ಯೆ ವಿಚಾರಣೆ; ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ

ಕಲ್ಬುರ್ಗಿ-ಗೌರಿ ಹತ್ಯೆ ವಿಚಾರಣೆ; ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ

- Advertisement -
- Advertisement -

ಖ್ಯಾತ ಸಂಶೋಧಕ ಎಂ.ಎಂ. ಕಲ್ಬುರ್ಗಿ ಮತ್ತು ಜನಪರ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಹಾಗೂ ಪೂರ್ಣಾವಧಿ ನ್ಯಾಯಾಧೀಶರ ನೇಮಕಾತಿ ಮಾಡುವಂತೆ ಸಲ್ಲಿಸಿದ್ದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಈ ಬಗ್ಗೆ ತ್ವರಿತವಾಗಿ ಅಗತ್ಯ ಕ್ರಮ ವಹಿಸುವಂತೆ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹಿಂದುತ್ವ ಸಂಘಟನೆಗಳು ನಡೆಸುತ್ತಿದ್ದ ಕೋಮು ದ್ವೇಶ ಹಾಗೂ ದ್ವೇಶ ರಾಜಕಾರಣವನ್ನು ವಿರೋಧಿಸುತ್ತಿದ್ದ ಗೌರಿ ಲಂಕೇಶ್ ಅವರನ್ನು ಕಳೆದ ಐದು ವರ್ಷಗಳ ಹಿಂದೆ ಇದೇ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಗುಂಡಿಟ್ಟು ಕೊಂದಿದ್ದರು. ಗೌರಿ ಹತ್ಯೆ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ದಳಕ್ಕೆ, ಅದಕ್ಕೂ ಎರಡು ವರ್ಷಗಳ ಹಿಂದೆ ಎಂ.ಎಂ. ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿದ್ದ ಆರೋಪಿಗಳ ಸುಳಿವೂ ಸಿಕ್ಕಿತ್ತು. ಎರಡೂ ಹತ್ಯೆ ನಡೆದು ಏಳು ವರ್ಷ ಕಳೆದರೂ ಈವರೆಗೆ ಪ್ರಕರಣಗಳ ವಿಚಾರಣೆ ಮಾತ್ರ ಪೂರ್ಣಗೊಂಡಿಲ್ಲ. ಆರೋಪಿಗಳ ಬಂಧನವಾಗಿದ್ದರೂ ವಿಚಾರಣೆ ಪೂರ್ಣಗೊಳ್ಳದ ಕಾರಣಕ್ಕೆ ಶಿಕ್ಷೆ ಪ್ರಕಟವಾಗಿಲ್ಲ. ಆದ್ದರಿಂದ, ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಎಂಎಂ ಕಲ್ಬುರ್ಗಿ ಕುಟುಂಬದವರು ಹಾಗೂ ಪೂರ್ಣಾವಧಿ ನ್ಯಾಯಾಧೀಶರ ನೇಮಕ ಮಾಡುವಂತೆ ಗೌರಿ ಲಂಕೇಶ್ ಕುಟುಂಬದವರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಹಿರಿಯ ಸಾಹಿತಿ ಹಾಗೂ ಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರನ್ನು ದಿನಾಂಕ: 31.08.2015 ರಂದು ಧಾರವಾಡದ ಅವರ ಮನೆಯಲ್ಲೇ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ನ್ಯಾಯಾಲಯಕ್ಕೆ 1950 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೆ, ವಿಚಾರಣೆ ಪೂರ್ಣಗೊಂಡು ಶಿಕ್ಷೆ ಪ್ರಕಟವಾಗಿಲ್ಲ. ಘಟನೆ ನಡೆದು ಸಾಕಷ್ಟು ವರ್ಷಗಳು ಕಳೆದಿವೆ; ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಬೇಕು ಎಂದು ಮೃತರ ಪತ್ನಿ ಉಮಾದೇವಿ ಎಂ. ಕಲ್ಬುರ್ಗಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಗೌರಿ ಹತ್ಯೆ; ಪೂರ್ಣಾವಧಿ ನ್ಯಾಯಾಧೀಶರ ನೇಮಕಕ್ಕೆ ಸೂಚನೆ

ಜನಪರ ಪತ್ರಕರ್ತೆ, ಹಿಂದುತ್ವ ಸಂಘಟನೆಗಳ ಕಟು ಟೀಕಾಕಾರರಾಗಿದ್ದ ಗೌರಿ ಲಂಕೇಶ್ ಅವರನ್ನು ರಾಜರಾಜೇಶ್ವರಿ ನಗರದ ಅವರ ನಿವಾಸ ಮುಂದೆಯೇ 2017ರ ಸೆಪ್ಟೆಂಬರ್ 5ರ ಸಂಜೆ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸದೆ, ವಿಶೇಷ ತನಿಖಾ ದಳ (SIT) ಸ್ಥಾಪಿಸಿದ್ದರು. ಗೌರಿ ಹತ್ಯೆ ತನಿಖಾ ಸಂದರ್ಭದಲ್ಲಿ, ಎಂಎಂ ಕಲ್ಬುರ್ಗಿ ಹಾಗೂ ಮಹಾರಾಷ್ಟ್ರದಲ್ಲಿ ಇದೇ ಮಾದರಿಯಲ್ಲಿ ಹತ್ಯೆ ನಡೆಸಿದ್ದ ಆರೋಪಿಗಳ ಸುಳಿವೂ ಸಿಕ್ಕಿತ್ತು.

ಗೌರಿ ಹತ್ಯೆ ನಡೆದು ಐದು ವರ್ಷಗಳು ಕಳೆದು ಚಾರ್ಜ್‌ ಶೀಟ್ ಸಲ್ಲಿಕೆಯಾಗಿದ್ದರೂ ಕೋರ್ಟ್ ವಿಚಾರಣೆ ಮಾತ್ರ ಕುಂಟುತ್ತಲೇ ಸಾಗಿದೆ. ಪ್ರಕರಣ ಸಂಬಂಧ ಇದುವರೆಗೆ 18 ಆರೋಪಿಗಳನ್ನು ಬಂಧಿಸಲಾಗಿದ್ದು, ವಿವಿಧ ಬಗೆಯ 500 ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಜುಲೈ, 2022 ರಿಂದ ನ್ಯಾಯಾಲಯದಲ್ಲಿ ವಿಚಾರಣೆಯು ಪ್ರಾರಂಭಗೊಂಡಿದ್ದು, ಈವರೆಗೆ ಕೇವಲ 94 ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದೆ.

ನ್ಯಾಯಾಲಯದಲ್ಲಿ ದಿನನಿತ್ಯ ಹಲವು ಪ್ರಕರಣಗಳು ವಿಚಾರಣೆಗೆ ಬಾಕಿ ಇರುವುದರಿಂದ, ಗೌರಿ ಹತ್ಯೆ ಪ್ರಕರಣದ ವಿಚಾರಣೆಗೆ ಹಿನ್ನಡೆಯಾಗುತ್ತಿದೆ. ಆದ್ದರಿಂದ, ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಮೃತ ಗೌರಿ ಸಹೋದರಿ ಕವಿತಾ ಲಂಕೇಶ್ ಅವರು ಮನವಿ ಮಾಡಿದ್ದರು. ಇದೀಗ ಎರಡೂ ಪ್ರಕರಣಗಳ ಕುರಿತು ‘ಜರೂರು ಅಗತ್ಯ ಕ್ರಮ’ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ; ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...