Homeಕರ್ನಾಟಕ‘ಆರ್‌ಎಸ್‌ಎಸ್‌ ಬಹಿರಂಗವಾಗಿ ಮುಸ್ಲಿಂ ವಿರುದ್ಧ; ಅಂತರಂಗದಲ್ಲಿ ದಲಿತರ ವಿರುದ್ಧ'

‘ಆರ್‌ಎಸ್‌ಎಸ್‌ ಬಹಿರಂಗವಾಗಿ ಮುಸ್ಲಿಂ ವಿರುದ್ಧ; ಅಂತರಂಗದಲ್ಲಿ ದಲಿತರ ವಿರುದ್ಧ’

- Advertisement -
- Advertisement -

ಆರ್‌ಎಸ್‌ಎಸ್‌ ಕುರಿತು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ’ ಎಂದು ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ’ ಎಂದಿದ್ದಾರೆ.

‘ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ’ ಎಂದಿದೆ.

‘ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ’ ಎಂದು ಸಲಹೆ ನೀಡಿದ್ದಾರೆ.

‘ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ. ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ, ಈಗ ಮತ್ತೆ ಹೇಳುತ್ತೇನೆ ‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ’ ಎಂದು ಪ್ರತಿಪಾದಿಸಿದ್ದಾರೆ.

‘ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ. ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು. ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಹಿಂದುಗಳೆಲ್ಲ ಒಂದು’ ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ “ಹಿಂದೂ.. ಒಂದು” ಎಂದು ಸುಳ್ಳು ಹೇಳಿ ಜನರನ್ನು ನಂಬಿಸಿ ಮೋಸಮಾಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದ್ದಾರೆ.

‘ತನ್ನ ‘ಹೊಡಿ ಬಡಿ’ ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ’ ಎಂದಿದ್ದಾರೆ.

ಗೂಳಿಹಟ್ಟಿ ಆರೋಪಕ್ಕೆ ಆರ್‌ಎಸ್‌ಎಸ್‌ ಸ್ಪಷ್ಟನೆ:

ಗೂಳಿಹಟ್ಟಿ ಶೇಖರ್ ಆಡಿಯೋ ಆರೋಪಕ್ಕೆ ಕರ್ನಾಟಕ ಆರ್‌ಎಸ್‌ಎಸ್‌ ಸ್ಪಷ್ಟನೆ ನೀಡಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ‘ಹೊಸದುರ್ಗದ ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ. ಹೆಡೆಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದ್ದಾರೆ. ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲದ ಆರೋಪ’ ಎಂದು ಹೇಳಿದ್ದಾರೆ.

‘ಆರ್‌ಎಸ್‌ಎಸ್‌ನ ಯಾವುದೇ ಕಚೇರಿಯಲ್ಲಾಗಲಿ ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ, ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು, ಆ ನ೦ತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾಗಿದ್ದಾರೆ. ಎಲ್ಲಿಯೂ ತಮಗಾದ ಈ ‘ಅವಮಾನ’ದ ಬಗ್ಗೆ ಹೇಳಿರಲಿಲ್ಲ. ಈಗ ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರವಾಗಿದೆ. ರಾಷ್ಟೀಯ ಸ್ವಯಂಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...