Homeಮುಖಪುಟಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

ಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

- Advertisement -
- Advertisement -

ಆನ್‌ಲೈನ್‌ನಲ್ಲಿ ಅರೆಕಾಲಿಕ ಉದ್ಯೋಗ ನೀಡುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು 100 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ. ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಶಿಫಾರಸ್ಸಿನ ಮೇಲೆ ಈ ಕ್ರಮವನ್ನು ಕೈಗೊಂಡಿರುವುದಾಗಿ ಕೇಂದ್ರ ಸರಕಾರ ಹೇಳಿದೆ.

ಆಪಾದಿತ 100 ವೆಬ್‌ಸೈಟ್‌ಗಳು ಆರ್ಥಿಕ ವಂಚನೆಗಳಲ್ಲಿ ಭಾಗಿಯಾಗಿದ್ದವು ಮತ್ತು ಈ ಆದಾಯವನ್ನು ಭಾರತದಿಂದ ಹೊರಗೆ ವರ್ಗಾಯಿಸುತ್ತಿದ್ದವು. ಡಿಜಿಟಲ್ ಜಾಹೀರಾತು, ಚಾಟ್ ಮೆಸೆಂಜರ್‌ಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಜನರನ್ನು ವಂಚಿಸುತ್ತಿದ್ದರು ಎನ್ನುವುದು ಬಯಲಾಗಿದೆ. ಈ ರೀತಿಯ ವಂಚನೆಗಳಿಂದ ಗಳಿಸಿದ ಆದಾಯವನ್ನು ಕಾರ್ಡ್ ನೆಟ್‌ವರ್ಕ್‌, ಕ್ರಿಪ್ಟೋ ಕರೆನ್ಸಿ, ಸಾಗರೋತ್ತರ ಎಟಿಎಂ ವಿತ್‌ ಡ್ರಾ ಮತ್ತು ಅಂತಾರಾಷ್ಟ್ರೀಯ ಫಿನ್ಟೆಕ್ ಕಂಪನಿಗಳನ್ನು ಬಳಸಿಕೊಂಡು ಭಾರತದಿಂದ ಹೊರಗೆ ಸಾಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಎನ್‌ಸಿಟಿಎಯು ಕಳೆದ ವಾರ ಸಂಘಟಿತ ಹೂಡಿಕೆ, ಅರೆಕಾಲಿಕ ಉದ್ಯೋಗ ವಂಚನೆಗಳಲ್ಲಿ ತೊಡಗಿರುವ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ಗುರುತಿಸಿತ್ತು ಮತ್ತು ನಿಷೇಧಕ್ಕೆ ಶಿಫಾರಸು ಮಾಡಿತ್ತು. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯಿದೆ 2000ದ ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಿ ಈ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ ಎಂದು ಸರ್ಕಾರ ಹೇಳಿದೆ.

ಈ ವಂಚನೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ 1930 ಮತ್ತು ಎನ್‌ಸಿಆರ್‌ಪಿ  ಮೂಲಕ ಹಲವು ದೂರುಗಳು ಬಂದಿದೆ. ಈ ಅಪರಾಧಗಳು ನಾಗರಿಕರಿಗೆ ಬೆದರಿಕೆಗಳನ್ನು ಒಡ್ಡುವುದಷ್ಟೇ ಅಲ್ಲದೆ ಮಾಹಿತಿ ಭದ್ರತೆಗೆ ಅಪಾಯವೊಡ್ಡಿದೆ ಎಂದು ಸಚಿವಾಲಯ ಹೇಳಿದೆ.

ಗೂಗಲ್ ಮತ್ತು ಮೆಟಾದಂತಹ ಫ್ಲಾಟ್‌ಫಾರ್ಮ್‌ಗಳನ್ನು ಪ್ರಚಾರಕ್ಕೆ ಬಳಸಲಾಗುತ್ತಿತ್ತು. ಮನೆಯಲ್ಲಿ ಕುಳಿತು ಮಾಡಬಹುದಾದ ಕೆಲಸಗಳು, ಮನೆಯಲ್ಲಿ ಕುಳಿತು ಹಣವನ್ನು ಸಂಪಾದಿಸುವುದು ಹೇಗೆ? ಮುಂತಾದ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗುತ್ತದೆ. ನಿವೃತ್ತ ಉದ್ಯೋಗಿಗಳು, ಮಹಿಳೆಯರು ಮತ್ತು ಅರೆಕಾಲಿಕ ಉದ್ಯೋಗಗಳನ್ನು ಹುಡುಕುತ್ತಿರುವವರನ್ನು ಇವರು ಟಾರ್ಗೆಟ್‌ ಮಾಡುತ್ತಿದ್ದರು ಎಂದು ಸಚಿವಾಲಯ ತಿಳಿಸಿದೆ.

ಬಳಕೆದಾರರು ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದ ನಂತರ ವಾಟ್ಸಾಪ್, ಟೆಲಿಗ್ರಾಮ್ ಬಳಸುವ ಏಜೆಂಟ್‌ಗಳು ಕರೆ ಮಾಡಲು ಪ್ರಾರಂಭಿಸುತ್ತಾರೆ. ಆರಂಭದಲ್ಲಿ ವಿಡಿಯೊ ಲೈಕ್‌ನಂತಹ ಕೆಲವು ಕಾರ್ಯಗಳನ್ನು ನಿರ್ವಹಿಸಲು ಸೂಚಿಸುತ್ತಾರೆ. ಕೆಲಸ ಪೂರ್ಣಗೊಂಡಾಗ ಕಮಿಷನ್ ನೀಡಲಾಗುತ್ತದೆ. ಬಳಿಕ ಹೆಚ್ಚಿನ ಆದಾಯಕ್ಕಾಗಿ ಅಧಿಕ ಹೂಡಿಕೆ ಮಾಡಲು ಕೇಳಲಾಗುತ್ತದೆ. ಒಂದು ವೇಳೆ ದೊಡ್ಡ ಮೊತ್ತವನ್ನು ಠೇವಣಿ ಇಟ್ಟರೆ ಅದನ್ನು ಸ್ಥಗಿತಗೊಳಿಸಲಾಗುತ್ತದೆ ಮತ್ತೆ ಅವರು ಸಂಪರ್ಕಕ್ಕೆ ಸಿಗದೆ ವಂಚನೆ ಮಾಡಲಾಗುತ್ತದೆ. ಹೆಚ್ಚಿನ ಕಮಿಷನ್‌-ಪಾವತಿಸುವ ಆನ್‌ಲೈನ್ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಸೂಚಿಸಿದೆ.

ಇದನ್ನು ಓದಿ: ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...