Homeಮುಖಪುಟಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

ಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

- Advertisement -
- Advertisement -

ಆನ್‌ಲೈನ್‌ನಲ್ಲಿ ಅರೆಕಾಲಿಕ ಉದ್ಯೋಗ ನೀಡುವುದಾಗಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು 100 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ. ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಶಿಫಾರಸ್ಸಿನ ಮೇಲೆ ಈ ಕ್ರಮವನ್ನು ಕೈಗೊಂಡಿರುವುದಾಗಿ ಕೇಂದ್ರ ಸರಕಾರ ಹೇಳಿದೆ.

ಆಪಾದಿತ 100 ವೆಬ್‌ಸೈಟ್‌ಗಳು ಆರ್ಥಿಕ ವಂಚನೆಗಳಲ್ಲಿ ಭಾಗಿಯಾಗಿದ್ದವು ಮತ್ತು ಈ ಆದಾಯವನ್ನು ಭಾರತದಿಂದ ಹೊರಗೆ ವರ್ಗಾಯಿಸುತ್ತಿದ್ದವು. ಡಿಜಿಟಲ್ ಜಾಹೀರಾತು, ಚಾಟ್ ಮೆಸೆಂಜರ್‌ಗಳಲ್ಲಿ ಜಾಹೀರಾತುಗಳನ್ನು ನೀಡುವ ಮೂಲಕ ಜನರನ್ನು ವಂಚಿಸುತ್ತಿದ್ದರು ಎನ್ನುವುದು ಬಯಲಾಗಿದೆ. ಈ ರೀತಿಯ ವಂಚನೆಗಳಿಂದ ಗಳಿಸಿದ ಆದಾಯವನ್ನು ಕಾರ್ಡ್ ನೆಟ್‌ವರ್ಕ್‌, ಕ್ರಿಪ್ಟೋ ಕರೆನ್ಸಿ, ಸಾಗರೋತ್ತರ ಎಟಿಎಂ ವಿತ್‌ ಡ್ರಾ ಮತ್ತು ಅಂತಾರಾಷ್ಟ್ರೀಯ ಫಿನ್ಟೆಕ್ ಕಂಪನಿಗಳನ್ನು ಬಳಸಿಕೊಂಡು ಭಾರತದಿಂದ ಹೊರಗೆ ಸಾಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಎನ್‌ಸಿಟಿಎಯು ಕಳೆದ ವಾರ ಸಂಘಟಿತ ಹೂಡಿಕೆ, ಅರೆಕಾಲಿಕ ಉದ್ಯೋಗ ವಂಚನೆಗಳಲ್ಲಿ ತೊಡಗಿರುವ 100ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ಗುರುತಿಸಿತ್ತು ಮತ್ತು ನಿಷೇಧಕ್ಕೆ ಶಿಫಾರಸು ಮಾಡಿತ್ತು. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ ಕಾಯಿದೆ 2000ದ ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಿ ಈ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದೆ ಎಂದು ಸರ್ಕಾರ ಹೇಳಿದೆ.

ಈ ವಂಚನೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ 1930 ಮತ್ತು ಎನ್‌ಸಿಆರ್‌ಪಿ  ಮೂಲಕ ಹಲವು ದೂರುಗಳು ಬಂದಿದೆ. ಈ ಅಪರಾಧಗಳು ನಾಗರಿಕರಿಗೆ ಬೆದರಿಕೆಗಳನ್ನು ಒಡ್ಡುವುದಷ್ಟೇ ಅಲ್ಲದೆ ಮಾಹಿತಿ ಭದ್ರತೆಗೆ ಅಪಾಯವೊಡ್ಡಿದೆ ಎಂದು ಸಚಿವಾಲಯ ಹೇಳಿದೆ.

ಗೂಗಲ್ ಮತ್ತು ಮೆಟಾದಂತಹ ಫ್ಲಾಟ್‌ಫಾರ್ಮ್‌ಗಳನ್ನು ಪ್ರಚಾರಕ್ಕೆ ಬಳಸಲಾಗುತ್ತಿತ್ತು. ಮನೆಯಲ್ಲಿ ಕುಳಿತು ಮಾಡಬಹುದಾದ ಕೆಲಸಗಳು, ಮನೆಯಲ್ಲಿ ಕುಳಿತು ಹಣವನ್ನು ಸಂಪಾದಿಸುವುದು ಹೇಗೆ? ಮುಂತಾದ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗುತ್ತದೆ. ನಿವೃತ್ತ ಉದ್ಯೋಗಿಗಳು, ಮಹಿಳೆಯರು ಮತ್ತು ಅರೆಕಾಲಿಕ ಉದ್ಯೋಗಗಳನ್ನು ಹುಡುಕುತ್ತಿರುವವರನ್ನು ಇವರು ಟಾರ್ಗೆಟ್‌ ಮಾಡುತ್ತಿದ್ದರು ಎಂದು ಸಚಿವಾಲಯ ತಿಳಿಸಿದೆ.

ಬಳಕೆದಾರರು ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದ ನಂತರ ವಾಟ್ಸಾಪ್, ಟೆಲಿಗ್ರಾಮ್ ಬಳಸುವ ಏಜೆಂಟ್‌ಗಳು ಕರೆ ಮಾಡಲು ಪ್ರಾರಂಭಿಸುತ್ತಾರೆ. ಆರಂಭದಲ್ಲಿ ವಿಡಿಯೊ ಲೈಕ್‌ನಂತಹ ಕೆಲವು ಕಾರ್ಯಗಳನ್ನು ನಿರ್ವಹಿಸಲು ಸೂಚಿಸುತ್ತಾರೆ. ಕೆಲಸ ಪೂರ್ಣಗೊಂಡಾಗ ಕಮಿಷನ್ ನೀಡಲಾಗುತ್ತದೆ. ಬಳಿಕ ಹೆಚ್ಚಿನ ಆದಾಯಕ್ಕಾಗಿ ಅಧಿಕ ಹೂಡಿಕೆ ಮಾಡಲು ಕೇಳಲಾಗುತ್ತದೆ. ಒಂದು ವೇಳೆ ದೊಡ್ಡ ಮೊತ್ತವನ್ನು ಠೇವಣಿ ಇಟ್ಟರೆ ಅದನ್ನು ಸ್ಥಗಿತಗೊಳಿಸಲಾಗುತ್ತದೆ ಮತ್ತೆ ಅವರು ಸಂಪರ್ಕಕ್ಕೆ ಸಿಗದೆ ವಂಚನೆ ಮಾಡಲಾಗುತ್ತದೆ. ಹೆಚ್ಚಿನ ಕಮಿಷನ್‌-ಪಾವತಿಸುವ ಆನ್‌ಲೈನ್ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಸೂಚಿಸಿದೆ.

ಇದನ್ನು ಓದಿ: ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...