Homeಕರ್ನಾಟಕಗೂಳಿಹಟ್ಟಿ 'ಅಸ್ಪೃಶ್ಯತೆ' ಆರೋಪ; ದಲಿತ ನಾಯಕರನ್ನು ಮುಂದಿಟ್ಟು 'ಡ್ಯಾಮೇಜ್ ಕಂಟ್ರೋಲ್‌'ಗೆ ಮುಂದಾಯಿತೇ ಬಿಜೆಪಿ?

ಗೂಳಿಹಟ್ಟಿ ‘ಅಸ್ಪೃಶ್ಯತೆ’ ಆರೋಪ; ದಲಿತ ನಾಯಕರನ್ನು ಮುಂದಿಟ್ಟು ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಯಿತೇ ಬಿಜೆಪಿ?

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದ ಆಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪರಿಶಿಷ್ಟ ಸಮುದಾಯದ ವಿರುದ್ಧ ನಡೆಯುತ್ತಿರುವ ಬಹಿರಂಗ ಅಸ್ಪೃಶ್ಯತೆ ಆಚರಣೆ ವಿರುದ್ಧ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕನ ವಿರುದ್ಧ ಸ್ವಪಕ್ಷದ ದಲಿತ ನಾಯಕರೇ ಈಗ ತಿರುಗಿಬಿದ್ದಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಪಿ. ರಾಜೀವ್ ಹಾಗೂ ಅರವಿಂದ ಲಿಂಬಾವಳಿ ಅವರು ಗೂಳಿಹಟ್ಟಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ದಲಿತ ನಾಯಕರನ್ನೇ ಮುಂದಿಟ್ಟು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಕಳುಹಿಸಿದ್ದಾರೆ ಎನ್ನಲಾಗಿದ್ದು ಆಡಿಯೋ ವೈರಲ್ ಆಗಿ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಹೇಳಿಕೆ ಬಿಡುಗಡೆ ಮಾಡಿದ್ದ ಆರ್‌ಎಸ್‌ಎಸ್‌, ‘ಗೂಳಿಹಟ್ಟಿ ಆರೋಪ ನಿರಾಧಾರ’ ಎಂದು ಹೇಳಿತ್ತು. ಇತ್ತಕಡೆ ಬಿಜೆಪಿ ಕೂಡ ದಲಿತ ಸಮುದಾಯದ ನಾಯರನ್ನು ಮುಂದಿಟ್ಟುಕೊಂಡು, ಗೂಳಿಹಟ್ಟಿ ಆರೋಪ ಸುಳ್ಳು ಎಂದು ಹೇಳಿಸಿದೆ.

ಗೂಳಿಹಟ್ಟಿ ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡ:

‘ಆರ್‌ಎಸ್‌ಎಸ್‌ ಕುರಿತು ಗೂಳಿಹಟ್ಟಿ ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ. ರಾಜೀವ್ ಆರೋಪವನ್ನು ನಿರಾಕರಿಸಿದ್ದಾರೆ.

‘ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರ್‌ಎಸ್‌ಎಸ್‌ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆರ್‌ಎಸ್‌ಎಸ್‌ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರ್‌ಎಸ್‌ಎಸ್‌, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ’ ಬಂದಿಲ್ಲ ಎಂದರು.

ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ?

ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿಯ ಮತ್ತೋರ್ವ ದಲಿತ ಮುಖಂಡ ಛಲವಾದಿ ನಾರಾಯಣಸ್ವಾಮಿ, ‘ಗೂಳಿಹಟ್ಟಿ ಶೇಖರ್ ಆರ್‌ಎಸ್‌ಎಸ್‌ ಕುರಿತಂತೆ ಸತ್ಯಕ್ಕೆ ದೂರವಾದ ಪ್ರಸ್ತಾಪ ಮಾಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಜಾತಿಭೇದ ಇಲ್ಲ. ರಿಜಿಸ್ಟರ್‌ನಲ್ಲಿ ಸಹಿ ಮಾಡುವ ಪದ್ಧತಿಯೂ ಇಲ್ಲ. ಅವರ ಆಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅದು ನಿಜಕ್ಕೂ ಅವರದೇ ಅಥವಾ ಅಲ್ಲವೇ ಎಂಬುದು ಬೇರೆ ವಿಷಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಬಂದ ವಿಷಯ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವ ರೀತಿಯಲ್ಲಿದೆ. ಅವರು ನಮ್ಮ ಪಕ್ಷದ ಸದಸ್ಯರಾಗಿದ್ದರು’ ಎಂದು ತಿಳಿಸಿದರು.

‘ನನ್ನ ಅನುಭವದ ಪ್ರಕಾರ ಸಂಘದಲ್ಲಿ ಯಾವುದೇ ತಾರತಮ್ಯ ಇಲ್ಲ; ಇದು ಸ್ಪಷ್ಟ. ಇವತ್ತು ಗೂಳಿಹಟ್ಟಿಯವರು ರಾಜಕೀಯ ಕಾರಣಕ್ಕಾಗಿ, ಕಾಂಗ್ರೆಸ್ ಬಾಗಿಲು ತಟ್ಟುವ ಸಂದರ್ಭದಲ್ಲಿ ಪಕ್ಷಕ್ಕೆ ಈ ರೀತಿ ಹಾನಿ ಮಾಡುವುದು ಸರಿಯಾದ ಕ್ರಮವಲ್ಲ. ನೀವು ಕಾಂಗ್ರೆಸ್‌ಗೆ ಹೋಗುವುದಾದರೆ ನಮ್ಮ ಅಡ್ಡಿ ಇಲ್ಲ; ಹೋಗಬಹುದು. ಆದರೆ, ನೀವು ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ’ ಎಂದು ಛಲವಾದಿ ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಆಡಿಯೋದಲ್ಲಿ ಮಾತನಾಡಿದ್ದು ಶುದ್ಧ ಸುಳ್ಳು:

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ‘ಆರ್‌ಎಸ್‌ಎಸ್‌ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ. ನಾನು ಆರ್‌ಎಸ್‌ಎಸ್‌, ವಿದ್ಯಾರ್ಥಿ ಪರಿಷತ್ತಿನಲ್ಲಿ ಬೆಳೆದ ಹುಡುಗ. ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಸ್ವಯಂಸೇವಕನಾಗಿದ್ದೆ. ನನ್ನ ಜಾತಿ ಬಗ್ಗೆ ಬಹಳ ಜನರಿಗೆ ಗೊತ್ತಾದುದು ಬಿಜೆಪಿಗೆ ಬಂದ ಬಳಿಕ. ಸುಳ್ಳು ಸುದ್ದಿ ಹಬ್ಬಿಸಬೇಡಿ. ಆರ್‌ಎಸ್‌ಎಸ್‌ನ ರಾಜ್ಯ, ಇತರ ರಾಜ್ಯಗಳ ಪದಾಧಿಕಾರಿಗಳ ಮನೆಗೂ ಹೋಗಿದ್ದೇನೆ. ಅವರ ಮನೆಯಲ್ಲೂ ಜಾತಿ ಕೇಳುವುದಿಲ್ಲ. ಅಲ್ಲಿ ಕೂಡ ಆತಿಥ್ಯ ಗಮನಿಸಿದರೆ, ಭೇದಭಾವ ಕಾಣಲಿಲ್ಲ. ಚರ್ಚೆಗಾಗಿ ಆರ್‌ಎಸ್‌ಎಸ್‌ ಅನ್ನು ಎಳೆದು ತರುವುದು ನಿಲ್ಲಿಸಿ’ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...