Homeಕರ್ನಾಟಕಗೂಳಿಹಟ್ಟಿ 'ಅಸ್ಪೃಶ್ಯತೆ' ಆರೋಪ; ದಲಿತ ನಾಯಕರನ್ನು ಮುಂದಿಟ್ಟು 'ಡ್ಯಾಮೇಜ್ ಕಂಟ್ರೋಲ್‌'ಗೆ ಮುಂದಾಯಿತೇ ಬಿಜೆಪಿ?

ಗೂಳಿಹಟ್ಟಿ ‘ಅಸ್ಪೃಶ್ಯತೆ’ ಆರೋಪ; ದಲಿತ ನಾಯಕರನ್ನು ಮುಂದಿಟ್ಟು ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಯಿತೇ ಬಿಜೆಪಿ?

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದ ಆಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪರಿಶಿಷ್ಟ ಸಮುದಾಯದ ವಿರುದ್ಧ ನಡೆಯುತ್ತಿರುವ ಬಹಿರಂಗ ಅಸ್ಪೃಶ್ಯತೆ ಆಚರಣೆ ವಿರುದ್ಧ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕನ ವಿರುದ್ಧ ಸ್ವಪಕ್ಷದ ದಲಿತ ನಾಯಕರೇ ಈಗ ತಿರುಗಿಬಿದ್ದಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಪಿ. ರಾಜೀವ್ ಹಾಗೂ ಅರವಿಂದ ಲಿಂಬಾವಳಿ ಅವರು ಗೂಳಿಹಟ್ಟಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ದಲಿತ ನಾಯಕರನ್ನೇ ಮುಂದಿಟ್ಟು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಕಳುಹಿಸಿದ್ದಾರೆ ಎನ್ನಲಾಗಿದ್ದು ಆಡಿಯೋ ವೈರಲ್ ಆಗಿ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಹೇಳಿಕೆ ಬಿಡುಗಡೆ ಮಾಡಿದ್ದ ಆರ್‌ಎಸ್‌ಎಸ್‌, ‘ಗೂಳಿಹಟ್ಟಿ ಆರೋಪ ನಿರಾಧಾರ’ ಎಂದು ಹೇಳಿತ್ತು. ಇತ್ತಕಡೆ ಬಿಜೆಪಿ ಕೂಡ ದಲಿತ ಸಮುದಾಯದ ನಾಯರನ್ನು ಮುಂದಿಟ್ಟುಕೊಂಡು, ಗೂಳಿಹಟ್ಟಿ ಆರೋಪ ಸುಳ್ಳು ಎಂದು ಹೇಳಿಸಿದೆ.

ಗೂಳಿಹಟ್ಟಿ ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡ:

‘ಆರ್‌ಎಸ್‌ಎಸ್‌ ಕುರಿತು ಗೂಳಿಹಟ್ಟಿ ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ. ರಾಜೀವ್ ಆರೋಪವನ್ನು ನಿರಾಕರಿಸಿದ್ದಾರೆ.

‘ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರ್‌ಎಸ್‌ಎಸ್‌ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆರ್‌ಎಸ್‌ಎಸ್‌ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರ್‌ಎಸ್‌ಎಸ್‌, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ’ ಬಂದಿಲ್ಲ ಎಂದರು.

ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ?

ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿಯ ಮತ್ತೋರ್ವ ದಲಿತ ಮುಖಂಡ ಛಲವಾದಿ ನಾರಾಯಣಸ್ವಾಮಿ, ‘ಗೂಳಿಹಟ್ಟಿ ಶೇಖರ್ ಆರ್‌ಎಸ್‌ಎಸ್‌ ಕುರಿತಂತೆ ಸತ್ಯಕ್ಕೆ ದೂರವಾದ ಪ್ರಸ್ತಾಪ ಮಾಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಜಾತಿಭೇದ ಇಲ್ಲ. ರಿಜಿಸ್ಟರ್‌ನಲ್ಲಿ ಸಹಿ ಮಾಡುವ ಪದ್ಧತಿಯೂ ಇಲ್ಲ. ಅವರ ಆಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅದು ನಿಜಕ್ಕೂ ಅವರದೇ ಅಥವಾ ಅಲ್ಲವೇ ಎಂಬುದು ಬೇರೆ ವಿಷಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಬಂದ ವಿಷಯ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವ ರೀತಿಯಲ್ಲಿದೆ. ಅವರು ನಮ್ಮ ಪಕ್ಷದ ಸದಸ್ಯರಾಗಿದ್ದರು’ ಎಂದು ತಿಳಿಸಿದರು.

‘ನನ್ನ ಅನುಭವದ ಪ್ರಕಾರ ಸಂಘದಲ್ಲಿ ಯಾವುದೇ ತಾರತಮ್ಯ ಇಲ್ಲ; ಇದು ಸ್ಪಷ್ಟ. ಇವತ್ತು ಗೂಳಿಹಟ್ಟಿಯವರು ರಾಜಕೀಯ ಕಾರಣಕ್ಕಾಗಿ, ಕಾಂಗ್ರೆಸ್ ಬಾಗಿಲು ತಟ್ಟುವ ಸಂದರ್ಭದಲ್ಲಿ ಪಕ್ಷಕ್ಕೆ ಈ ರೀತಿ ಹಾನಿ ಮಾಡುವುದು ಸರಿಯಾದ ಕ್ರಮವಲ್ಲ. ನೀವು ಕಾಂಗ್ರೆಸ್‌ಗೆ ಹೋಗುವುದಾದರೆ ನಮ್ಮ ಅಡ್ಡಿ ಇಲ್ಲ; ಹೋಗಬಹುದು. ಆದರೆ, ನೀವು ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ’ ಎಂದು ಛಲವಾದಿ ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಆಡಿಯೋದಲ್ಲಿ ಮಾತನಾಡಿದ್ದು ಶುದ್ಧ ಸುಳ್ಳು:

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ‘ಆರ್‌ಎಸ್‌ಎಸ್‌ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ. ನಾನು ಆರ್‌ಎಸ್‌ಎಸ್‌, ವಿದ್ಯಾರ್ಥಿ ಪರಿಷತ್ತಿನಲ್ಲಿ ಬೆಳೆದ ಹುಡುಗ. ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಸ್ವಯಂಸೇವಕನಾಗಿದ್ದೆ. ನನ್ನ ಜಾತಿ ಬಗ್ಗೆ ಬಹಳ ಜನರಿಗೆ ಗೊತ್ತಾದುದು ಬಿಜೆಪಿಗೆ ಬಂದ ಬಳಿಕ. ಸುಳ್ಳು ಸುದ್ದಿ ಹಬ್ಬಿಸಬೇಡಿ. ಆರ್‌ಎಸ್‌ಎಸ್‌ನ ರಾಜ್ಯ, ಇತರ ರಾಜ್ಯಗಳ ಪದಾಧಿಕಾರಿಗಳ ಮನೆಗೂ ಹೋಗಿದ್ದೇನೆ. ಅವರ ಮನೆಯಲ್ಲೂ ಜಾತಿ ಕೇಳುವುದಿಲ್ಲ. ಅಲ್ಲಿ ಕೂಡ ಆತಿಥ್ಯ ಗಮನಿಸಿದರೆ, ಭೇದಭಾವ ಕಾಣಲಿಲ್ಲ. ಚರ್ಚೆಗಾಗಿ ಆರ್‌ಎಸ್‌ಎಸ್‌ ಅನ್ನು ಎಳೆದು ತರುವುದು ನಿಲ್ಲಿಸಿ’ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...