HomeUncategorizedಮೋದಿಯ ಕಾನೂನು ಕಾರ್ಯದರ್ಶಿಯಾಗಿದ್ದ ತ್ರಿವೇದಿ ಪೀಠಕ್ಕೆ 7 ಸೂಕ್ಷ್ಮ ಪ್ರಕರಣಗಳ ವರ್ಗಾವಣೆ!  

ಮೋದಿಯ ಕಾನೂನು ಕಾರ್ಯದರ್ಶಿಯಾಗಿದ್ದ ತ್ರಿವೇದಿ ಪೀಠಕ್ಕೆ 7 ಸೂಕ್ಷ್ಮ ಪ್ರಕರಣಗಳ ವರ್ಗಾವಣೆ!  

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕಾನೂನು ಕಾರ್ಯದರ್ಶಿಯಾಗಿ  ಈ ಹಿಂದೆ ಸೇವೆ ಸಲ್ಲಿಸಿದ್ದ ಜಸ್ಟಿಸ್‌ ಬಾಲಾ ತ್ರಿವೇದಿ ಅವರ ಪೀಠಕ್ಕೆ ನಾಲ್ಕು ತಿಂಗಳಲ್ಲಿ ಏಳು ರಾಜಕೀಯವಾಗಿ ಸೂಕ್ಷವಾದ ಪ್ರಕರಣಗಳನ್ನು ವರ್ಗವಾಣೆ ಮಾಡಲಾಗಿದೆ ಎಂದು Article 14 ವರದಿ ತಿಳಿಸಿದೆ.

ಜಸ್ಟಿಸ್‌ ತ್ರಿವೇದಿ ಅವರು ಗುಜರಾತ್ ಹೈಕೋರ್ಟ್‌ನಿಂದ ಸುಪ್ರೀಂಕೋರ್ಟ್‌ಗೆ ಪದೋನ್ನತಿ ಹೊಂದಿದ್ದರು. ಅವರು ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು 2001ರಿಂದ 2014ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಕಾನೂನು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಆ.31, 2021ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬೇಲಾ ತ್ರಿವೇದಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಸ್ತುತ ಅವರು 34 ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಲ್ಲಿ ಹಿರಿತನದಲ್ಲಿ 16ನೇ ಸ್ಥಾನದಲ್ಲಿರುವ ಜಡ್ಜ್‌ ಆಗಿದ್ದಾರೆ.

ಡಿಸೆಂಬರ್ 7ರ ಗುರುವಾರ ನ್ಯೂಸ್ ಪೋರ್ಟಲ್ ಆರ್ಟಿಕಲ್ 14ನಲ್ಲಿ ಪ್ರಕಟವಾದ ವರದಿಯಲ್ಲಿ ಸ್ವತಂತ್ರ ಪತ್ರಕರ್ತ ಸೌರವ್ ದಾಸ್ ಅವರು ಕಳೆದ ನಾಲ್ಕು ತಿಂಗಳಲ್ಲಿ 7 ಪ್ರಕರಣಗಳನ್ನು ನ್ಯಾಯಮೂರ್ತಿ ತ್ರಿವೇದಿ ಅಥವಾ ನೇತೃತ್ವದ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು Article 14 ವರದಿ ಉಲ್ಲೇಖಿಸಿ ನ್ಯಾಶನಲ್‌ ಹೆರಾಲ್ಡ್‌ ವರದಿ ಮಾಡಿದೆ.

ಆರ್ಟಿಕಲ್ 14 ನಿಂದ ಉಲ್ಲೇಖಿಸಲಾದ ಏಳು ಪ್ರಕರಣಗಳು ಈ ಕೆಳಗಿನಂತಿವೆ:

1. ಉಮರ್ ಖಾಲಿದ್ ಅವರ  ಜಾಮೀನು ಅರ್ಜಿ

2. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA)1967ರ ನಿಬಂಧನೆಗಳನ್ನು ಪ್ರಶ್ನಿಸುವ ಅರ್ಜಿಗಳು

3. ಹೆದ್ದಾರಿ ಟೆಂಡರ್ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ವಿರುದ್ಧದ ಹೊಸ ತನಿಖೆಯನ್ನು ವಜಾಗೊಳಿಸುವುದನ್ನು ಪ್ರಶ್ನಿಸಿದ ಅರ್ಜಿಗಳು

4. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಹ ಆರೋಪಿಯಾಗಿರುವ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದ ಎರಡು ಅರ್ಜಿಗಳು

5. ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಸಂಬಂಧಿಸಿದ ಅರ್ಜಿ

6. ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿದ ಜಾಮೀನು ಅರ್ಜಿ

7. ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದ ಸಹ-ಆರೋಪಿ ಮಹೇಶ್ ರಾವುತ್ ಅವರ ಜಾಮೀನು ಅರ್ಜಿ

ಈ ಪ್ರಕರಣಗಳನ್ನು ಈ ಹಿಂದೆ ಇತರ ಹಿರಿಯ ನ್ಯಾಯಾಧೀಶರ ನೇತೃತ್ವದ ಪೀಠಗಳು ವಿಚಾರಣೆ ನಡೆಸುತ್ತಿದ್ದವು ಮತ್ತು ಕೆಲವು ನ್ಯಾಯಾಧೀಶರು ತ್ರಿವೇದಿ ಅವರ ಪೀಠದ ನ್ಯಾಯಾಧೀಶರಾಗಿದ್ದರು. ಇದೀಗ ಈ ಎಲ್ಲಾ ಪ್ರಕರಣಗಳನ್ನು ಜಸ್ಟಿಸ್‌ ತ್ರಿವೇದಿ ಬಾಲಾ ಅವರ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು ವರದಿ ತಿಳಿಸಿದೆ.

ನ.29 2023ರಂದು ಈ ಎಲ್ಲಾ ವಿಷಯಗಳನ್ನು ನ್ಯಾಯಮೂರ್ತಿ ತ್ರಿವೇದಿ ನೇತೃತ್ವದ ಪೀಠದ ಮುಂದೆ  ಮರುಹಂಚಿಕೆ ಮಾಡಲಾಯಿತು ಎಂದು ವರದಿ ತಿಳಿಸಿದೆ.

ನ್ಯಾಯಮೂರ್ತಿ ತ್ರಿವೇದಿ ನೇತೃತ್ವದ ಪೀಠಕ್ಕೆ ವರ್ಗಾವಣೆಗೊಂಡ ಪ್ರಕರಣಗಳಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರಕರಣವೂ ಒಂದಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿವಕುಮಾರ್ ವಿರುದ್ಧದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್‌ನ ಜೂ.12 2023ರ ತೀರ್ಪನ್ನು ಸಿಬಿಐ ಪ್ರಶ್ನಿಸಿತ್ತು.

ಇದನ್ನು ಓದಿ: ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆ ಕನ್ನಡ ಸೇರಿ ಇತರ ವಿಷಯಗಳ ಬೋಧನೆ ಕಡ್ಡಾಯ: ಕೃಷ್ಣ ಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...