HomeUncategorizedಮೋದಿಯ ಕಾನೂನು ಕಾರ್ಯದರ್ಶಿಯಾಗಿದ್ದ ತ್ರಿವೇದಿ ಪೀಠಕ್ಕೆ 7 ಸೂಕ್ಷ್ಮ ಪ್ರಕರಣಗಳ ವರ್ಗಾವಣೆ!  

ಮೋದಿಯ ಕಾನೂನು ಕಾರ್ಯದರ್ಶಿಯಾಗಿದ್ದ ತ್ರಿವೇದಿ ಪೀಠಕ್ಕೆ 7 ಸೂಕ್ಷ್ಮ ಪ್ರಕರಣಗಳ ವರ್ಗಾವಣೆ!  

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕಾನೂನು ಕಾರ್ಯದರ್ಶಿಯಾಗಿ  ಈ ಹಿಂದೆ ಸೇವೆ ಸಲ್ಲಿಸಿದ್ದ ಜಸ್ಟಿಸ್‌ ಬಾಲಾ ತ್ರಿವೇದಿ ಅವರ ಪೀಠಕ್ಕೆ ನಾಲ್ಕು ತಿಂಗಳಲ್ಲಿ ಏಳು ರಾಜಕೀಯವಾಗಿ ಸೂಕ್ಷವಾದ ಪ್ರಕರಣಗಳನ್ನು ವರ್ಗವಾಣೆ ಮಾಡಲಾಗಿದೆ ಎಂದು Article 14 ವರದಿ ತಿಳಿಸಿದೆ.

ಜಸ್ಟಿಸ್‌ ತ್ರಿವೇದಿ ಅವರು ಗುಜರಾತ್ ಹೈಕೋರ್ಟ್‌ನಿಂದ ಸುಪ್ರೀಂಕೋರ್ಟ್‌ಗೆ ಪದೋನ್ನತಿ ಹೊಂದಿದ್ದರು. ಅವರು ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು 2001ರಿಂದ 2014ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಕಾನೂನು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಆ.31, 2021ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬೇಲಾ ತ್ರಿವೇದಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಸ್ತುತ ಅವರು 34 ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಲ್ಲಿ ಹಿರಿತನದಲ್ಲಿ 16ನೇ ಸ್ಥಾನದಲ್ಲಿರುವ ಜಡ್ಜ್‌ ಆಗಿದ್ದಾರೆ.

ಡಿಸೆಂಬರ್ 7ರ ಗುರುವಾರ ನ್ಯೂಸ್ ಪೋರ್ಟಲ್ ಆರ್ಟಿಕಲ್ 14ನಲ್ಲಿ ಪ್ರಕಟವಾದ ವರದಿಯಲ್ಲಿ ಸ್ವತಂತ್ರ ಪತ್ರಕರ್ತ ಸೌರವ್ ದಾಸ್ ಅವರು ಕಳೆದ ನಾಲ್ಕು ತಿಂಗಳಲ್ಲಿ 7 ಪ್ರಕರಣಗಳನ್ನು ನ್ಯಾಯಮೂರ್ತಿ ತ್ರಿವೇದಿ ಅಥವಾ ನೇತೃತ್ವದ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು Article 14 ವರದಿ ಉಲ್ಲೇಖಿಸಿ ನ್ಯಾಶನಲ್‌ ಹೆರಾಲ್ಡ್‌ ವರದಿ ಮಾಡಿದೆ.

ಆರ್ಟಿಕಲ್ 14 ನಿಂದ ಉಲ್ಲೇಖಿಸಲಾದ ಏಳು ಪ್ರಕರಣಗಳು ಈ ಕೆಳಗಿನಂತಿವೆ:

1. ಉಮರ್ ಖಾಲಿದ್ ಅವರ  ಜಾಮೀನು ಅರ್ಜಿ

2. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA)1967ರ ನಿಬಂಧನೆಗಳನ್ನು ಪ್ರಶ್ನಿಸುವ ಅರ್ಜಿಗಳು

3. ಹೆದ್ದಾರಿ ಟೆಂಡರ್ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ವಿರುದ್ಧದ ಹೊಸ ತನಿಖೆಯನ್ನು ವಜಾಗೊಳಿಸುವುದನ್ನು ಪ್ರಶ್ನಿಸಿದ ಅರ್ಜಿಗಳು

4. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಹ ಆರೋಪಿಯಾಗಿರುವ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದ ಎರಡು ಅರ್ಜಿಗಳು

5. ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಸಂಬಂಧಿಸಿದ ಅರ್ಜಿ

6. ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿದ ಜಾಮೀನು ಅರ್ಜಿ

7. ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದ ಸಹ-ಆರೋಪಿ ಮಹೇಶ್ ರಾವುತ್ ಅವರ ಜಾಮೀನು ಅರ್ಜಿ

ಈ ಪ್ರಕರಣಗಳನ್ನು ಈ ಹಿಂದೆ ಇತರ ಹಿರಿಯ ನ್ಯಾಯಾಧೀಶರ ನೇತೃತ್ವದ ಪೀಠಗಳು ವಿಚಾರಣೆ ನಡೆಸುತ್ತಿದ್ದವು ಮತ್ತು ಕೆಲವು ನ್ಯಾಯಾಧೀಶರು ತ್ರಿವೇದಿ ಅವರ ಪೀಠದ ನ್ಯಾಯಾಧೀಶರಾಗಿದ್ದರು. ಇದೀಗ ಈ ಎಲ್ಲಾ ಪ್ರಕರಣಗಳನ್ನು ಜಸ್ಟಿಸ್‌ ತ್ರಿವೇದಿ ಬಾಲಾ ಅವರ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು ವರದಿ ತಿಳಿಸಿದೆ.

ನ.29 2023ರಂದು ಈ ಎಲ್ಲಾ ವಿಷಯಗಳನ್ನು ನ್ಯಾಯಮೂರ್ತಿ ತ್ರಿವೇದಿ ನೇತೃತ್ವದ ಪೀಠದ ಮುಂದೆ  ಮರುಹಂಚಿಕೆ ಮಾಡಲಾಯಿತು ಎಂದು ವರದಿ ತಿಳಿಸಿದೆ.

ನ್ಯಾಯಮೂರ್ತಿ ತ್ರಿವೇದಿ ನೇತೃತ್ವದ ಪೀಠಕ್ಕೆ ವರ್ಗಾವಣೆಗೊಂಡ ಪ್ರಕರಣಗಳಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರಕರಣವೂ ಒಂದಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿವಕುಮಾರ್ ವಿರುದ್ಧದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್‌ನ ಜೂ.12 2023ರ ತೀರ್ಪನ್ನು ಸಿಬಿಐ ಪ್ರಶ್ನಿಸಿತ್ತು.

ಇದನ್ನು ಓದಿ: ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆ ಕನ್ನಡ ಸೇರಿ ಇತರ ವಿಷಯಗಳ ಬೋಧನೆ ಕಡ್ಡಾಯ: ಕೃಷ್ಣ ಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...