Homeಮುಖಪುಟಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

ಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

- Advertisement -
- Advertisement -

ಭಾರತೀಯ ಸಂವಿಧಾನದ ಮೂಲ ರಚನೆಯ ಸಿದ್ದಾಂತವನ್ನು ರೂಪಿಸಿದ ಐತಿಹಾಸಿಕ ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ 10 ಭಾಷೆಗಳಲ್ಲಿ ಲಭ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರು ತಿಳಿಸಿದ್ದಾರೆ. ಈ ಪ್ರಕರಣದ ತೀರ್ಪಿಗೆ 50 ವರ್ಷ ತುಂಬಿರುವ ಹಿನ್ನೆಲೆ ವಿವಿಧ ಭಾಷೆಗಳಲ್ಲಿ ಪ್ರಕಟಿಸಲಾಗಿದೆ ಸಿಜೆಐ ಹೇಳಿದ್ದಾರೆ.

ಕೇಶವಾನಂದ ಭಾರತಿ ಪ್ರಕರಣದ ಪ್ರಕರಣದ ಹಿನ್ನೆಲೆ, ಒಳಗೊಂಡಿರುವ ಪ್ರಮುಖ ಕಾನೂನು ಸಮಸ್ಯೆಗಳು, ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು, ಪ್ರಕರಣದಲ್ಲಿ ಹಾಜರಾದ ವಕೀಲರು, ಮಾಡಿದ ವಾದಗಳು ಮತ್ತು ತೀರ್ಮಾನಗಳ ವಿವರಗಳನ್ನು ಹತ್ತು ಭಾ‍ಷೆಗಳಲ್ಲಿ ನೀಡಲಾಗಿದೆ.

ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಒಡಿಯಾ, ಮಲಯಾಳಂ, ಗುಜರಾತಿ, ಕನ್ನಡ, ಬೆಂಗಾಲಿ, ಅಸ್ಸಾಮಿ ಮತ್ತು ಮರಾಠಿಯಲ್ಲಿ ತೀರ್ಪನ್ನು ಅನುವಾದಿಸಲಾಗಿದೆ. ಈ ಉಪಕ್ರಮವು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ವಿವಿಧ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ನಡೆಯುತ್ತಿರುವ ಪ್ರಯತ್ನದ ಭಾಗ ಎಂದು ಸಿಜೆಐ ಹೇಳಿದ್ದಾರೆ. 20,000 ತೀರ್ಪುಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ವರದಿಗಳ (eSCR) ಎಲೆಕ್ಟ್ರಾನಿಕ್ ಆವೃತ್ತಿಯಲ್ಲಿ ಅಪ್‌ಲೋಡ್ ಮಾಡಲಾಗಿದೆ.

“ಜನರಿಗೆ ಕೇಶವಾನಂದ ಭಾರತಿ ತೀರ್ಪಿನ ಬಗ್ಗೆ ತಿಳಿದಿದೆ. ಆದರೆ, ಅದರ ಹಿಂದಿನ ಮಹತ್ವದ ಬಗ್ಗೆ ಗೊತ್ತಿಲ್ಲ. ವಿವಿಧ ಭಾಷೆಗಳಲ್ಲಿ ತೀರ್ಪನ್ನು ಅನುವಾದ ಮಾಡಿರುವುದು ಜನರಲ್ಲಿ ಜಾಗೃತಿ ಮೂಡಿಸಲು ನೆರವಾಗಲಿದೆ ಎಂದು” ಸಾಲಿಸಿಟರ್ ಜನರಲ್ (ಎಸ್ಜಿ) ತುಷಾರ್ ಮೆಹ್ತಾ ಹೇಳಿದ್ದಾರೆ.

ಏನಿದು ಕೇಶವಾನಂದ ಭಾರತಿ ಪ್ರಕರಣದ ತೀರ್ಪು?

ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ ನೀಡಿದ ಒಂದು ಐತಿಹಾಸಿಕ ತೀರ್ಪು ಆಗಿದೆ. ಇದು ಭಾರತೀಯ ಸಂವಿಧಾನದ ಮೂಲ ಸ್ವರೂಪವನ್ನು ನಿರ್ಧರಿಸಿದ ತೀರ್ಪು. ಈ ಪ್ರಕರಣವನ್ನು ದೇಶದ ಅತ್ಯಂತ ಪ್ರಸಿದ್ಧ ಸಾಂವಿಧಾನಿಕ ಪ್ರಕರಣಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಎಂ.ಸಿಕ್ರಿ ನ್ಯಾಯಧೀಶರಾದ ಎ.ಎನ್‌ ರೇ, ಎಸ್.ಎಂ. ಶೆಲತ್, ಕೆ.ಎಸ್. ಹೆಗಡೆ, ಎ.ಕೆ. ಮುಖರ್ಜಿ, ಜೆ.ಎಂ.ಶೆಲತ್, ಎ.ಎನ್. ಗ್ರೋವರ್, ಪಿ.ಜಗನ್ಮೋಹನ್ ರೆಡ್ಡಿ, ಹೆಚ್.ಆರ್.ಖನ್ನಾ, ಎಸ್.ಎನ್. ದ್ವಿವೇದಿ, ಎಂ.ಹೆಚ್. ಬೇಗ್, ವೈ.ವಿ. ಚಂದ್ರಚೂಡ್, ಮತ್ತು ಪಿ.ಎನ್. ಭಗವತಿ ಸೇರಿದಂತೆ 13 ನ್ಯಾಯಾಧೀಶರ ಅತಿದೊಡ್ಡ ಪೀಠವು ಈ ಪ್ರಕರಣ ವಿಚಾರಣೆ ನಡೆಸಿತ್ತು. 1972 ರ ಅಕ್ಟೋಬರ್ 31 ರಿಂದ 16 ಮಾರ್ಚ್ 1973 ರವರೆಗೆ 66 ದಿನಗಳ ಕಾಲ ಪ್ರಕರಣದ ವಿಚಾರನಣೆ ನಡೆದಿತ್ತು. ಅಂತಿಮ ತೀರ್ಪು 23 ಮಾರ್ಚ್ 1973 ರಂದು ಪ್ರಕಟಿಸಲಾಗಿತ್ತು.

ಕೇಶವಾನಂದ ಭಾರತಿ ಕೇಸ್ ದಾಖಲಿಸಿದವರು ಯಾರು?

ಧಾರ್ಮಿಕ ಸ್ವಾಮ್ಯದ ಆಸ್ತಿಯನ್ನು ಸರ್ಕಾರದ ಹಸ್ತಕ್ಷೇಪವಿಲ್ಲದೆ ನಿರ್ವಹಿಸುವ ಹಕ್ಕನ್ನು ನಾಗರಿಕರಿಗೆ ನೀಡುವ ಸಂವಿಧಾನದ ವಿಧಿ 26ರ ಅಡಿಯಲ್ಲಿ ಮಠದ ಭೂಮಿಯನ್ನು ಕೇರಳ ಸರ್ಕಾರ ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನವನ್ನು ಪ್ರಶ್ನಿಸಿ ಹಿಂದೂ ಮಠದ ಮುಖ್ಯಸ್ಥ ಕೇಶವಾನಂದ ಭಾರತಿ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ವ್ಯಾಪ್ತಿ ದೊಡ್ಡದಾಗಿದ್ದ ಕಾರಣ ಮತ್ತು ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವನ್ನು ಈ ಪ್ರಕರಣ ಪ್ರಶ್ನಿಸಿದ್ದರಿಂದ ಇದು ಸಾಂವಿಧಾನಿಕ ವಿಷಯವಾಗಿ ಬದಲಾಗಿತ್ತು.

ಕೇಶವಾನಂದ ಭಾರತಿ ಹಿನ್ನೆಲೆ

ಕೇಶವಾನಂದ ಭಾರತಿ ಕೇರಳದ ಕಾಸರಗೋಡು ಜಿಲ್ಲೆಯ ಹಿಂದೂ ಮಠದ ಮುಖ್ಯಸ್ಥರಾಗಿದ್ದರು. ಮಠದಲ್ಲಿ ಜಮೀನು ಹೊಂದಿದ್ದರು. 1969 ರಲ್ಲಿ ಕೇರಳ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿತ್ತು. ಈ ಕಾಯ್ದೆಯಡಿ ಮಠಕ್ಕೆ ಸೇರಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕನ್ನು ಸರ್ಕಾರ ಹೊಂದಿದೆ ಎಂದು ಹೇಳಿತ್ತು.

ಮಾರ್ಚ್ 1970 ರಲ್ಲಿ ಭಾರತಿ ಸ್ವಾಮಿಜಿ ಸಂವಿಧಾನದ ವಿಧಿ 14 ರ ಅಡಿಯಲ್ಲಿ ಹೊಂದಿರುವ ಮೂಲಭೂತ ಹಕ್ಕುಗಳು, ವಿಧಿ 19 (1) (ಎಫ್) ರ ಸಮಾನತೆಯ ಹಕ್ಕು, ವಿಧಿ 25ರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಸ್ವಾತಂತ್ರ್ಯ, ವಿಧಿ 26ರ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ವಿಧಿ 31 ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕುಗಳಡಿ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ ತೀರ್ಪು ಏನು?

24ನೇ ಏಪ್ರಿಲ್ 1973 ರಂದು ಸುಪ್ರೀಂ ಕೋರ್ಟ್ ಪ್ರಕರಣದ ಅಂತಿಮ ತೀರ್ಪನ್ನು 7:6 ರ ಬಹುಮತದಿಂದ ಪ್ರಕಟಿಸಿತು. ತೀರ್ಪಿನಲ್ಲಿ ಸಂವಿಧಾನದ “ಮೂಲ ರಚನೆ” ಅಥವಾ ಚೌಕಟ್ಟಿಗೆ ಧಕ್ಕೆಯಾಗದಂತೆ ಯಾವುದೇ ತಿದ್ದಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ, ಸಂವಿಧಾನದ ಶ್ರೇಷ್ಠತೆ, ಕಾನೂನು-ರಚನಾ ಸಂಸ್ಥೆಗಳು, ಅಧಿಕಾರಗಳ ಪ್ರತ್ಯೇಕತೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯ ಸೇರಿದಂತೆ ಸಂವಿಧಾನದ ಕೆಲವು ಮೂಲಭೂತ ಅಂಶಗಳು ಸಂವಿಧಾನದ ಮೂಲ ಸ್ವರೂಪದ ಭಾಗವಾಗಿದ್ದು, ಅದನ್ನು ಸಂಸತ್ತಿನಿಂದ ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಪ್ರಕಾರ, ಸಂವಿಧಾನದಲ್ಲಿ ತಿದ್ದುಪಡಿಗಳನ್ನು ಮಾಡಲು ಸಂಸತ್ತು ಅನಿಯಮಿತ ಅಧಿಕಾರವನ್ನು ಹೊಂದಿದೆ. ಆದರೆ, ಅಂತಹ ತಿದ್ದುಪಡಿಗಳು ಸಂವಿಧಾನದ ಮೂಲಭೂತ ರಚನೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಸಂಸತ್ತು ಸಂವಿಧಾನದ ಪ್ರತಿಯೊಂದು ತಿದ್ದುಪಡಿಯು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು.

ಇದನ್ನೂ ಓದಿ : ವಿವೋ-ಇಂಡಿಯಾ ಸೇರಿ ಇತರ ಕಂಪೆನಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...