Homeಮುಖಪುಟಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

ಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

- Advertisement -
- Advertisement -

ಲಿವ್-ಇನ್ ಸಂಬಂಧಗಳು ‘ಅಪಾಯಕಾರಿ ಕಾಯಿಲೆ’ಯಾಗಿದೆ. ಇದರ ವಿರುದ್ಧ ಕಾನೂನು ರೂಪಿಸಬೇಕು. ಸಮಾಜದಿಂದ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹರಿಯಾಣದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಧರಂಬೀರ್ ಸಿಂಗ್, “ಪ್ರೇಮ ವಿವಾಹಗಳಲ್ಲಿ ವಿಚ್ಛೇದನದ ಪ್ರಮಾಣ ಹೆಚ್ಚಾಗುತ್ತಿದ್ದು, ವಧು-ವರರ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾನು ಅತ್ಯಂತ ಗಂಭೀರವಾದ ವಿಷಯವನ್ನು ಸರ್ಕಾರ ಮತ್ತು ಸಂಸತ್ತಿನ ಗಮನಕ್ಕೆ ತರಲು ಬಯಸುತ್ತೇನೆ. ಭಾರತೀಯ ಸಂಸ್ಕೃತಿಯು ‘ವಸುಧೈವ ಕುಟುಂಬ’ಕಂ (ಜಗತ್ತು ಒಂದು ಕುಟುಂಬ) ಮತ್ತು ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರರಿಗಿಂತ ಭಿನ್ನವಾಗಿದೆ. ನಮ್ಮ ವೈವಿಧ್ಯತೆಯಲ್ಲಿ ಏಕತೆಗೆ ಇಡೀ ಜಗತ್ತು ಪ್ರಭಾವಿತವಾಗಿದೆ ಎಂದು” ಭಿವಾನಿ-ಮಹೇಂದ್ರಗಢದ ಸಂಸದ ಧರಂಬೀರ್ ಸಿಂಗ್ ಹೇಳಿದ್ದಾರೆ.

“ಭಾರತವು ಅರೇಂಜ್ಡ್ ಮ್ಯಾರೇಜ್‌ಗಳ ಸುದೀರ್ಘ ಸಂಪ್ರದಾಯವನ್ನು ಹೊಂದಿದೆ. ಸಮಾಜದ ದೊಡ್ಡ ವರ್ಗವು ಇಂದಿಗೂ ಪೋಷಕರು ಅಥವಾ ಸಂಬಂಧಿಕರು ನಿಶ್ವಯಿಸುವ ಮದುವೆಗಳಿಗೆ ಆದ್ಯತೆ ನೀಡುತ್ತಿವೆ. ಇದು ವಧು ಮತ್ತು ವರನ ಒಪ್ಪಿಗೆಯನ್ನು ಹೊಂದಿದೆ. ವಿವಾಹಗಳು ಸಾಮಾಜಿಕ, ವೈಯಕ್ತಿಕ ಮೌಲ್ಯಗಳು, ಇಷ್ಟಗಳು ಮತ್ತು ಕೌಟುಂಬಿಕ ಹಿನ್ನೆಲೆಗಳಂತಹ ಹಲವಾರು ಸಾಮಾನ್ಯ ಅಂಶಗಳ ಹೊಂದಾಣಿಕೆಯನ್ನು ಆಧರಿಸಿವೆ” ಎಂದು ಧರಂಬೀರ್ ಸಿಂಗ್ ಹೇಳಿದ್ದಾರೆ.

“ಮದುವೆಯು ಏಳು ತಲೆಮಾರುಗಳವರೆಗೆ ಮುಂದುವರಿಯುವ ಪವಿತ್ರ ಸಂಬಂಧವೆಂದು ಪರಿಗಣಿಸಲಾಗಿದೆ. ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ವಿಚ್ಛೇದನದ ಪ್ರಮಾಣವು ಸುಮಾರು 40 ಪ್ರತಿಶತದಷ್ಟಿದೆ. ಅರೇಂಜ್ಡ್ ಮ್ಯಾರೇಜ್‌ಗಳಲ್ಲಿ ವಿಚ್ಛೇದನದ ದರ ತೀರಾ ಕಡಿಮೆ ಇರುತ್ತದೆ. ಆದರೆ, ಇತ್ತೀಚೆಗೆ ವಿಚ್ಛೇದನದ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣ ಪ್ರೇಮ ವಿವಾಹಗಳು” ಎಂದು ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಪ್ರೇಮ ವಿವಾಹಗಳಲ್ಲಿ ವಧು-ವರರ ತಾಯಿ ಮತ್ತು ತಂದೆಯ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕೆಂದು ನನ್ನ ಸಲಹೆಯಾಗಿದೆ. ಏಕೆಂದರೆ ದೇಶದ ಹೆಚ್ಚಿನ ಭಾಗಗಳಲ್ಲಿ ಒಂದೇ ‘ಗೋತ್ರ’ದಲ್ಲಿ ವಿವಾಹಗಳು ನಡೆಯುವುದಿಲ್ಲ. ಪ್ರೇಮ ವಿವಾಹಗಳ ಕಾರಣದಿಂದಾಗಿ ಹಳ್ಳಿಗಳಲ್ಲಿ ಸಾಕಷ್ಟು ಸಂಘರ್ಷಗಳಿಂದ ಹಲವಾರು ಕುಟುಂಬಗಳು ನಾಶವಾಗುತ್ತಿವೆ. ಆದ್ದರಿಂದ, ಎರಡೂ ಕುಟುಂಬಗಳ ಒಪ್ಪಿಗೆ ಮುಖ್ಯವಾಗಿದೆ. ಈಗ ಹೊಸ ಕಾಯಿಲೆ ಶುರುವಾಗಿದೆ. ಈ ಸಾಮಾಜಿಕ ಅನಿಷ್ಟವನ್ನು “ಲಿವ್-ಇನ್ ಸಂಬಂಧ” ಎಂದು ಕರೆಯಲಾಗುತ್ತದೆ. ಇದರ ಅಡಿಯಲ್ಲಿ ಇಬ್ಬರು ವ್ಯಕ್ತಿಗಳು, ಪುರುಷ ಅಥವಾ ಮಹಿಳೆ ವಿವಾಹವಾಗದೆ ಒಟ್ಟಿಗೆ ವಾಸಿಸುತ್ತಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಇಂತಹ ಸಂಬಂಧಗಳು ತುಂಬಾ ಸಾಮಾನ್ಯವಾಗಿದೆ. ನಮ್ಮ ಸಮಾಜದಲ್ಲಿ ಈ ರೋಗ ವೇಗವಾಗಿ ಹರಡುತ್ತಿದೆ. ಇದರ ಪರಿಣಾಮಗಳು ಭಯಾನಕವಾಗಿವೆ. ಇತ್ತೀಚೆಗೆ, ಶ್ರದ್ಧಾ ವಾಲ್ಕರ್ ಮತ್ತು ಅಫ್ತಾಬ್ ಪೂನಾವಾಲಾ ಪ್ರಕರಣವು ಬೆಳಕಿಗೆ ಬಂದಿತ್ತು. ಅವರಿಬ್ಬರು ಲೀವ್ ಇನ್‌ ನಲ್ಲಿ ಇದ್ದರು” ಎಂದು ಸಿಂಗ್ ಹೇಳಿದ್ದಾರೆ.

ಇದನ್ನು ಓದಿ : ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಟಿಎಂಸಿ ಸಂಸದೆಯರಿಂದ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...