Homeಮುಖಪುಟಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

ಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

- Advertisement -
- Advertisement -

ಲಿವ್-ಇನ್ ಸಂಬಂಧಗಳು ‘ಅಪಾಯಕಾರಿ ಕಾಯಿಲೆ’ಯಾಗಿದೆ. ಇದರ ವಿರುದ್ಧ ಕಾನೂನು ರೂಪಿಸಬೇಕು. ಸಮಾಜದಿಂದ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹರಿಯಾಣದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಧರಂಬೀರ್ ಸಿಂಗ್, “ಪ್ರೇಮ ವಿವಾಹಗಳಲ್ಲಿ ವಿಚ್ಛೇದನದ ಪ್ರಮಾಣ ಹೆಚ್ಚಾಗುತ್ತಿದ್ದು, ವಧು-ವರರ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾನು ಅತ್ಯಂತ ಗಂಭೀರವಾದ ವಿಷಯವನ್ನು ಸರ್ಕಾರ ಮತ್ತು ಸಂಸತ್ತಿನ ಗಮನಕ್ಕೆ ತರಲು ಬಯಸುತ್ತೇನೆ. ಭಾರತೀಯ ಸಂಸ್ಕೃತಿಯು ‘ವಸುಧೈವ ಕುಟುಂಬ’ಕಂ (ಜಗತ್ತು ಒಂದು ಕುಟುಂಬ) ಮತ್ತು ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರರಿಗಿಂತ ಭಿನ್ನವಾಗಿದೆ. ನಮ್ಮ ವೈವಿಧ್ಯತೆಯಲ್ಲಿ ಏಕತೆಗೆ ಇಡೀ ಜಗತ್ತು ಪ್ರಭಾವಿತವಾಗಿದೆ ಎಂದು” ಭಿವಾನಿ-ಮಹೇಂದ್ರಗಢದ ಸಂಸದ ಧರಂಬೀರ್ ಸಿಂಗ್ ಹೇಳಿದ್ದಾರೆ.

“ಭಾರತವು ಅರೇಂಜ್ಡ್ ಮ್ಯಾರೇಜ್‌ಗಳ ಸುದೀರ್ಘ ಸಂಪ್ರದಾಯವನ್ನು ಹೊಂದಿದೆ. ಸಮಾಜದ ದೊಡ್ಡ ವರ್ಗವು ಇಂದಿಗೂ ಪೋಷಕರು ಅಥವಾ ಸಂಬಂಧಿಕರು ನಿಶ್ವಯಿಸುವ ಮದುವೆಗಳಿಗೆ ಆದ್ಯತೆ ನೀಡುತ್ತಿವೆ. ಇದು ವಧು ಮತ್ತು ವರನ ಒಪ್ಪಿಗೆಯನ್ನು ಹೊಂದಿದೆ. ವಿವಾಹಗಳು ಸಾಮಾಜಿಕ, ವೈಯಕ್ತಿಕ ಮೌಲ್ಯಗಳು, ಇಷ್ಟಗಳು ಮತ್ತು ಕೌಟುಂಬಿಕ ಹಿನ್ನೆಲೆಗಳಂತಹ ಹಲವಾರು ಸಾಮಾನ್ಯ ಅಂಶಗಳ ಹೊಂದಾಣಿಕೆಯನ್ನು ಆಧರಿಸಿವೆ” ಎಂದು ಧರಂಬೀರ್ ಸಿಂಗ್ ಹೇಳಿದ್ದಾರೆ.

“ಮದುವೆಯು ಏಳು ತಲೆಮಾರುಗಳವರೆಗೆ ಮುಂದುವರಿಯುವ ಪವಿತ್ರ ಸಂಬಂಧವೆಂದು ಪರಿಗಣಿಸಲಾಗಿದೆ. ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ವಿಚ್ಛೇದನದ ಪ್ರಮಾಣವು ಸುಮಾರು 40 ಪ್ರತಿಶತದಷ್ಟಿದೆ. ಅರೇಂಜ್ಡ್ ಮ್ಯಾರೇಜ್‌ಗಳಲ್ಲಿ ವಿಚ್ಛೇದನದ ದರ ತೀರಾ ಕಡಿಮೆ ಇರುತ್ತದೆ. ಆದರೆ, ಇತ್ತೀಚೆಗೆ ವಿಚ್ಛೇದನದ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣ ಪ್ರೇಮ ವಿವಾಹಗಳು” ಎಂದು ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಪ್ರೇಮ ವಿವಾಹಗಳಲ್ಲಿ ವಧು-ವರರ ತಾಯಿ ಮತ್ತು ತಂದೆಯ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕೆಂದು ನನ್ನ ಸಲಹೆಯಾಗಿದೆ. ಏಕೆಂದರೆ ದೇಶದ ಹೆಚ್ಚಿನ ಭಾಗಗಳಲ್ಲಿ ಒಂದೇ ‘ಗೋತ್ರ’ದಲ್ಲಿ ವಿವಾಹಗಳು ನಡೆಯುವುದಿಲ್ಲ. ಪ್ರೇಮ ವಿವಾಹಗಳ ಕಾರಣದಿಂದಾಗಿ ಹಳ್ಳಿಗಳಲ್ಲಿ ಸಾಕಷ್ಟು ಸಂಘರ್ಷಗಳಿಂದ ಹಲವಾರು ಕುಟುಂಬಗಳು ನಾಶವಾಗುತ್ತಿವೆ. ಆದ್ದರಿಂದ, ಎರಡೂ ಕುಟುಂಬಗಳ ಒಪ್ಪಿಗೆ ಮುಖ್ಯವಾಗಿದೆ. ಈಗ ಹೊಸ ಕಾಯಿಲೆ ಶುರುವಾಗಿದೆ. ಈ ಸಾಮಾಜಿಕ ಅನಿಷ್ಟವನ್ನು “ಲಿವ್-ಇನ್ ಸಂಬಂಧ” ಎಂದು ಕರೆಯಲಾಗುತ್ತದೆ. ಇದರ ಅಡಿಯಲ್ಲಿ ಇಬ್ಬರು ವ್ಯಕ್ತಿಗಳು, ಪುರುಷ ಅಥವಾ ಮಹಿಳೆ ವಿವಾಹವಾಗದೆ ಒಟ್ಟಿಗೆ ವಾಸಿಸುತ್ತಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಇಂತಹ ಸಂಬಂಧಗಳು ತುಂಬಾ ಸಾಮಾನ್ಯವಾಗಿದೆ. ನಮ್ಮ ಸಮಾಜದಲ್ಲಿ ಈ ರೋಗ ವೇಗವಾಗಿ ಹರಡುತ್ತಿದೆ. ಇದರ ಪರಿಣಾಮಗಳು ಭಯಾನಕವಾಗಿವೆ. ಇತ್ತೀಚೆಗೆ, ಶ್ರದ್ಧಾ ವಾಲ್ಕರ್ ಮತ್ತು ಅಫ್ತಾಬ್ ಪೂನಾವಾಲಾ ಪ್ರಕರಣವು ಬೆಳಕಿಗೆ ಬಂದಿತ್ತು. ಅವರಿಬ್ಬರು ಲೀವ್ ಇನ್‌ ನಲ್ಲಿ ಇದ್ದರು” ಎಂದು ಸಿಂಗ್ ಹೇಳಿದ್ದಾರೆ.

ಇದನ್ನು ಓದಿ : ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಟಿಎಂಸಿ ಸಂಸದೆಯರಿಂದ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...