Homeಮುಖಪುಟಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

ಲಿವ್-ಇನ್ ಸಂಬಂಧ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ತನ್ನಿ: ಬಿಜೆಪಿ ಸಂಸದ ಆಗ್ರಹ

- Advertisement -
- Advertisement -

ಲಿವ್-ಇನ್ ಸಂಬಂಧಗಳು ‘ಅಪಾಯಕಾರಿ ಕಾಯಿಲೆ’ಯಾಗಿದೆ. ಇದರ ವಿರುದ್ಧ ಕಾನೂನು ರೂಪಿಸಬೇಕು. ಸಮಾಜದಿಂದ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹರಿಯಾಣದ ಬಿಜೆಪಿ ಸಂಸದ ಧರಂಬೀರ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಧರಂಬೀರ್ ಸಿಂಗ್, “ಪ್ರೇಮ ವಿವಾಹಗಳಲ್ಲಿ ವಿಚ್ಛೇದನದ ಪ್ರಮಾಣ ಹೆಚ್ಚಾಗುತ್ತಿದ್ದು, ವಧು-ವರರ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಾನು ಅತ್ಯಂತ ಗಂಭೀರವಾದ ವಿಷಯವನ್ನು ಸರ್ಕಾರ ಮತ್ತು ಸಂಸತ್ತಿನ ಗಮನಕ್ಕೆ ತರಲು ಬಯಸುತ್ತೇನೆ. ಭಾರತೀಯ ಸಂಸ್ಕೃತಿಯು ‘ವಸುಧೈವ ಕುಟುಂಬ’ಕಂ (ಜಗತ್ತು ಒಂದು ಕುಟುಂಬ) ಮತ್ತು ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರರಿಗಿಂತ ಭಿನ್ನವಾಗಿದೆ. ನಮ್ಮ ವೈವಿಧ್ಯತೆಯಲ್ಲಿ ಏಕತೆಗೆ ಇಡೀ ಜಗತ್ತು ಪ್ರಭಾವಿತವಾಗಿದೆ ಎಂದು” ಭಿವಾನಿ-ಮಹೇಂದ್ರಗಢದ ಸಂಸದ ಧರಂಬೀರ್ ಸಿಂಗ್ ಹೇಳಿದ್ದಾರೆ.

“ಭಾರತವು ಅರೇಂಜ್ಡ್ ಮ್ಯಾರೇಜ್‌ಗಳ ಸುದೀರ್ಘ ಸಂಪ್ರದಾಯವನ್ನು ಹೊಂದಿದೆ. ಸಮಾಜದ ದೊಡ್ಡ ವರ್ಗವು ಇಂದಿಗೂ ಪೋಷಕರು ಅಥವಾ ಸಂಬಂಧಿಕರು ನಿಶ್ವಯಿಸುವ ಮದುವೆಗಳಿಗೆ ಆದ್ಯತೆ ನೀಡುತ್ತಿವೆ. ಇದು ವಧು ಮತ್ತು ವರನ ಒಪ್ಪಿಗೆಯನ್ನು ಹೊಂದಿದೆ. ವಿವಾಹಗಳು ಸಾಮಾಜಿಕ, ವೈಯಕ್ತಿಕ ಮೌಲ್ಯಗಳು, ಇಷ್ಟಗಳು ಮತ್ತು ಕೌಟುಂಬಿಕ ಹಿನ್ನೆಲೆಗಳಂತಹ ಹಲವಾರು ಸಾಮಾನ್ಯ ಅಂಶಗಳ ಹೊಂದಾಣಿಕೆಯನ್ನು ಆಧರಿಸಿವೆ” ಎಂದು ಧರಂಬೀರ್ ಸಿಂಗ್ ಹೇಳಿದ್ದಾರೆ.

“ಮದುವೆಯು ಏಳು ತಲೆಮಾರುಗಳವರೆಗೆ ಮುಂದುವರಿಯುವ ಪವಿತ್ರ ಸಂಬಂಧವೆಂದು ಪರಿಗಣಿಸಲಾಗಿದೆ. ಅಮೆರಿಕಕ್ಕೆ ಹೋಲಿಸಿದರೆ ಭಾರತದಲ್ಲಿ ವಿಚ್ಛೇದನದ ಪ್ರಮಾಣವು ಸುಮಾರು 40 ಪ್ರತಿಶತದಷ್ಟಿದೆ. ಅರೇಂಜ್ಡ್ ಮ್ಯಾರೇಜ್‌ಗಳಲ್ಲಿ ವಿಚ್ಛೇದನದ ದರ ತೀರಾ ಕಡಿಮೆ ಇರುತ್ತದೆ. ಆದರೆ, ಇತ್ತೀಚೆಗೆ ವಿಚ್ಛೇದನದ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣ ಪ್ರೇಮ ವಿವಾಹಗಳು” ಎಂದು ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಪ್ರೇಮ ವಿವಾಹಗಳಲ್ಲಿ ವಧು-ವರರ ತಾಯಿ ಮತ್ತು ತಂದೆಯ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕೆಂದು ನನ್ನ ಸಲಹೆಯಾಗಿದೆ. ಏಕೆಂದರೆ ದೇಶದ ಹೆಚ್ಚಿನ ಭಾಗಗಳಲ್ಲಿ ಒಂದೇ ‘ಗೋತ್ರ’ದಲ್ಲಿ ವಿವಾಹಗಳು ನಡೆಯುವುದಿಲ್ಲ. ಪ್ರೇಮ ವಿವಾಹಗಳ ಕಾರಣದಿಂದಾಗಿ ಹಳ್ಳಿಗಳಲ್ಲಿ ಸಾಕಷ್ಟು ಸಂಘರ್ಷಗಳಿಂದ ಹಲವಾರು ಕುಟುಂಬಗಳು ನಾಶವಾಗುತ್ತಿವೆ. ಆದ್ದರಿಂದ, ಎರಡೂ ಕುಟುಂಬಗಳ ಒಪ್ಪಿಗೆ ಮುಖ್ಯವಾಗಿದೆ. ಈಗ ಹೊಸ ಕಾಯಿಲೆ ಶುರುವಾಗಿದೆ. ಈ ಸಾಮಾಜಿಕ ಅನಿಷ್ಟವನ್ನು “ಲಿವ್-ಇನ್ ಸಂಬಂಧ” ಎಂದು ಕರೆಯಲಾಗುತ್ತದೆ. ಇದರ ಅಡಿಯಲ್ಲಿ ಇಬ್ಬರು ವ್ಯಕ್ತಿಗಳು, ಪುರುಷ ಅಥವಾ ಮಹಿಳೆ ವಿವಾಹವಾಗದೆ ಒಟ್ಟಿಗೆ ವಾಸಿಸುತ್ತಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಇಂತಹ ಸಂಬಂಧಗಳು ತುಂಬಾ ಸಾಮಾನ್ಯವಾಗಿದೆ. ನಮ್ಮ ಸಮಾಜದಲ್ಲಿ ಈ ರೋಗ ವೇಗವಾಗಿ ಹರಡುತ್ತಿದೆ. ಇದರ ಪರಿಣಾಮಗಳು ಭಯಾನಕವಾಗಿವೆ. ಇತ್ತೀಚೆಗೆ, ಶ್ರದ್ಧಾ ವಾಲ್ಕರ್ ಮತ್ತು ಅಫ್ತಾಬ್ ಪೂನಾವಾಲಾ ಪ್ರಕರಣವು ಬೆಳಕಿಗೆ ಬಂದಿತ್ತು. ಅವರಿಬ್ಬರು ಲೀವ್ ಇನ್‌ ನಲ್ಲಿ ಇದ್ದರು” ಎಂದು ಸಿಂಗ್ ಹೇಳಿದ್ದಾರೆ.

ಇದನ್ನು ಓದಿ : ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಟಿಎಂಸಿ ಸಂಸದೆಯರಿಂದ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...