Homeಮುಖಪುಟಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

ಪೆಟ್ರೋಲ್ ಕಂಪನಿ ಮುಖಸ್ಥ ಹವಾಮಾನ ಶೃಂಗಸಭೆ ಉಸ್ತುವಾರಿ: ಗೊಂದಲಗಳ ನಡುವೆ COP28

- Advertisement -
- Advertisement -

ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ ನಗರದಲ್ಲಿ 28ನೇ ವಿಶ್ವ ಹವಾಮಾನ ಶೃಂಗಸಭೆ (COP28) ನಡೆಯುತ್ತಿದೆ. ನವೆಂಬರ್ 30ರಂದು ಪ್ರಾರಂಭಗೊಂಡ ಈ ಸಭೆ ಡಿಸೆಂಬರ್ 12ರವರೆಗೆ ಮುಂದುವರಿಯಲಿದೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP)ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಸರಳವಾಗಿ ಹೇಳುವುದಾದರೆ ಹವಾಮಾನ ಶೃಂಗಸಭೆ ಎಂಬುವುದು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಸಮಾವೇಶವಾಗಿದೆ. ಉದಾಹರಣೆಗೆ ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು, ದುರ್ಬಲ ಸಮುದಾಯಗಳಿಗೆ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಮತ್ತು 2050ರ ಹೊತ್ತಿಗೆ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವುದು.

ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ಕ್ಲೈಮೇಟ್ ಚೇಂಜ್ (UNFCCC)ಯ ಸದಸ್ಯ ರಾಷ್ಟ್ರಗಳು ಸೇರಿದಂತೆ 70,000 ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಬಾರಿಯ ಹವಾಮಾನ ಶೃಂಗಸಭೆ (COP28)ಗೆ ಹಾಜರಾಗುವ ನಿರೀಕ್ಷೆಯಿದೆ. ಉದ್ಯಮಿಗಳು, ಯುವಜನರು, ಹವಾಮಾನ ವಿಜ್ಞಾನಿಗಳು, ಸ್ಥಳೀಯ ಜನರು, ಪತ್ರಕರ್ತರು ಮತ್ತು ಇತರ ಹಲವಾರು ಕ್ಷೇತ್ರಗಳ ತಜ್ಞರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿವಾದಕ್ಕೆ ಕಾರಣವಾದ ದುಬೈ ಶೃಂಗಸಭೆ :

ದುಬೈನಲ್ಲಿ ನಡೆಯುತ್ತಿರುವ ಈ ಬಾರಿಯ ಹವಾಮಾನ ಶೃಂಗಸಭೆ ಆರಂಭಕ್ಕೂ ಮುನ್ನವೇ ವಿವಾದಕ್ಕೆ ಕಾರಣವಾಗಿತ್ತು ಎಂದು ಬಿಬಿಸಿ ವರದಿ ಹೇಳಿದೆ. ಏಕೆಂದರೆ, ಯುಎಇ ವಿಶ್ವದ ಅಗ್ರ 10 ತೈಲ ಉತ್ಪಾದಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ಇದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಸುಲ್ತಾನ್ ಅಲ್-ಜಾಬರ್, ಅವರನ್ನು ಹವಾಮಾನ ಶೃಂಗಸಭೆಯ ಉಸ್ತುವಾರಿಯಾಗಿ ನೇಮಿಸಿದೆ.

ತೈಲ- ಅನಿಲ ಮತ್ತು ಕಲ್ಲಿದ್ದಲು ಇವುಗಳು ಹವಾಮಾನ ಬದಲಾವಣೆಗೆ ಮುಖ್ಯ ಕಾರಣಗಳಾಗಿವೆ. ಇವುಗಳನ್ನು ಸುಟ್ಟಾಗ ಇಂಗಾಲದ ಡೈಆಕ್ಸೈಡ್‌ನಂತಹ ತಾಪಮಾನ ಹೆಚ್ಚಿಸುವ ಹಸಿರುಮನೆ ಅನಿಲಗಳನ್ನು ಬಿಡುಗಡೆ ಮಾಡುತ್ತವೆ. ಸುಲ್ತಾನ್ ಅಲ್-ಜಾಬರ್ ತೈಲ ಕಂಪನಿಯ ಮುಖ್ಯಸ್ಥರಾಗಿ ಅದನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. ಅಂತಹ ವ್ಯಕ್ತಿಯನ್ನು ಹವಾಮಾನ ಶೃಂಗಸಭೆಯ ಉಸ್ತುವಾರಿಯಾಗಿ ನೇಮಿಸಿದ್ದು ಕೆಲ ರಾಷ್ಟ್ರಗಳ ವಿರೋಧಕ್ಕೆ ಕಾರಣವಾಗಿದೆ.

ಇದಲ್ಲದೆ, ಶೃಂಗಸಭೆಯಲ್ಲಿ ಮಾತನಾಡಿದ್ದ ಸುಲ್ತಾನ್ ಅಲ್-ಜಾಬರ್, ಜಾಗತಿಕ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸಲು ಸಾಂಪ್ರದಾಯಿಕ ಇಂಧನ ಬಳಕೆ ತಡೆಗಟ್ಟಬೇಕು ಎನ್ನಲು ಯಾವುದೇ ವಿಜ್ಞಾನದ ಉಲ್ಲೇಖಗಳಿಲ್ಲ ಎಂದಿದ್ದರು. ಇದಕ್ಕೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಡಿಸೆಂಬರ್ 1ರಂದು ಪ್ರಧಾನಿ ನರೇಂದ್ರ ಮೋದಿ ಹವಾಮಾನ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಶೃಂಗಸಭೆಯ ‘ಟ್ರಾನ್ಸ್‌ಫಾರ್ಮಿಂಗ್ ಕ್ಲೈಮೆಟ್ ಫೈನಾನ್ಸ್’ ಕುರಿತ ಅಧಿವೇಶನದಲ್ಲಿ ಮಾತನಾಡಿದ ಮೋದಿ, ವಿಶ್ವದ ಅಭಿವೃದ್ದಿ ಹೊಂದಿದ ರಾಷ್ಟ್ರಗಳು 2050ಕ್ಕಿಂತ ಮೊದಲು ಇಂಗಾಲದ ಡೈ ಆಕ್ಸೈಡ್ ಹೊರ ಸೂಸುವಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಬಡ ರಾಷ್ಟ್ರಗಳಿಗೆ ಹವಾಮಾನ ಬದಲಾವಣೆ ತಡೆಗಟ್ಟುವ ಗುರಿಗಳನ್ನು ಸಾಧಿಸಲು ಆರ್ಥಿಕ ಸಹಾಯವನ್ನು ನೀಡಬೇಕು ಎಂದು ಹೇಳಿದ್ದಾರೆ.

ಹವಾಮಾನ ಶೃಂಗಸಭೆಯಲ್ಲಿ ನಡೆಯುವ ಚರ್ಚೆಗಳೇನು?

ಪ್ಯಾರಿಸ್ ಹವಾಮಾನ ಬದಲಾವಣೆ ಒಪ್ಪಂದದ ಪ್ರಮುಖ ಅಂಶಗಳ ಕುರಿತು ಕಳೆದ ಕೆಲವು ವರ್ಷಗಳಿಂದ ಮಾತುಕತೆ ನಡೆಯುತ್ತಿದೆ. ಈ ಬಾರಿಯ ಶೃಂಗಸಭೆಯಲ್ಲಿ ಒಪ್ಪಂದವನ್ನು ಕಾರ್ಯಗತಗೊಳಿಸುವ ಬಗ್ಗೆ ಮುಖ್ಯವಾಗಿ ಚರ್ಚೆ ನಡೆಯಲಿದೆ. ಹವಾಮಾನ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳುವ ಅತ್ಯಂತ ನಿರ್ಣಾಯಕ ಘಟ್ಟದಲ್ಲಿ ನಾವಿದ್ದೇವೆ ಎಂದು ವಿಶ್ವಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದೆ.

ಹವಾಮಾನ ಬದಲಾವಣೆಯ ವಿಶ್ವಸಂಸ್ಥೆಯ ಇಂಟರ್‌ಗವರ್ನಮೆಂಟಲ್ ಪ್ಯಾನೆಲ್‌ನ ಇತ್ತೀಚಿನ ಸಮೀಕ್ಷೆಯು 2019ಕ್ಕೆ ಹೋಲಿಸಿದರೆ 2030 ರ ವೇಳೆಗೆ ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು 43% ರಷ್ಟು ಕಡಿಮೆಯಾಗಲಿದೆ ಎಂದು ಹೇಳಿದೆ. ಈ ಶತಮಾನದ ಅಂತ್ಯದ ವೇಳೆಗೆ ತಾಪಮಾನ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಸೀಮಿತಗೊಳಿಸುವುದು ಮತ್ತು ಆಗಾಗ ಉಂಟಾಗುವ ತೀವ್ರ ಬರ, ಶಾಖದ ಅಲೆಗಳು ಮತ್ತು ಮಳೆ ಸೇರಿದಂತೆ ಹವಾಮಾನ ಬದಲಾವಣೆಯ ಕೆಟ್ಟ ಪರಿಣಾಮಗಳನ್ನು ತಪ್ಪಿಸುವ ಕುರಿತು ಶೃಂಗಸಭೆಯಲ್ಲಿ ಚರ್ಚೆ ನಡೆಯಲಿದೆ.

ಶೃಂಗಸಭೆಯಲ್ಲಿ ನಡೆಯುವ ಸಭೆಗಳು ಯಾವುವು?

ಹವಾಮಾನ ಶೃಂಗಸಭೆ ಪ್ಯಾರಿಸ್ ಒಪ್ಪಂದ ಮತ್ತು ಕ್ಯೋಟೋ ಶಿಷ್ಟಾಚಾರದ ನಿರ್ಧಾರ ತೆಗೆದುಕೊಳ್ಳುವ ಮೂರು ಸಂಸ್ಥೆಗಳ ವಾರ್ಷಿಕ ಸಭೆಗಳನ್ನು ಒಳಗೊಂಡಿದೆ. ಈ ಸಭೆಗಳಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಹವಾಮಾನ ಸಂಬಂಧಿತ ಕಾರ್ಯಸೂಚಿಯ ವಿಷಯಗಳನ್ನು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಇದಲ್ಲದೆ ಯುಎನ್‌ಎಫ್‌ಸಿಸಿಸಿ ಅಂಗ ಸಂಸ್ಥೆಗಳ ವಾರ್ಷಿಕ ಸಭೆಗಳೂ ನಡೆಯಲಿವೆ.

ಇದನ್ನೂ ಓದಿ : ಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...