Homeಮುಖಪುಟತೆಲಂಗಾಣ: ಮೊದಲ ದಿನವೇ 6 ಗ್ಯಾರಂಟಿಗಳಿಗೆ ಅಂಕಿತ ಹಾಕಿದ ರೇವಂತ್ ರೆಡ್ಡಿ, ವಿಶೇಷ ಚೇತನ ಮಹಿಳೆಗೆ...

ತೆಲಂಗಾಣ: ಮೊದಲ ದಿನವೇ 6 ಗ್ಯಾರಂಟಿಗಳಿಗೆ ಅಂಕಿತ ಹಾಕಿದ ರೇವಂತ್ ರೆಡ್ಡಿ, ವಿಶೇಷ ಚೇತನ ಮಹಿಳೆಗೆ ಉದ್ಯೋಗ

- Advertisement -
- Advertisement -

ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರೇವಂತ್ ರೆಡ್ಡಿ ಎರಡು ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ. ಈ ಪೈಕಿ ಒಂದು ಚುನಾವಣಾ ಪೂರ್ವ ಘೋಷಿಸಿದ್ದ ಆರು ಗ್ಯಾರಂಟಿಗಳ ಅನುಷ್ಠಾನ ಖಡತ, ಮತ್ತೊಂದು ವಿಶೇಷ ಚೇತನ ಮಹಿಳೆಯೊಬ್ಬರಿಗೆ ಉದ್ಯೋಗ ಒದಗಿಸುವುದು ಎಂದು ವರದಿಗಳು ಹೇಳಿವೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ಮೊದಲ ದಿನವೇ ಆರು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ಚುನಾವಣಾ ಪ್ರಚಾರದ ವೇಳೆ ರೇವಂತ್ ರೆಡ್ಡಿ ಘೋಷಣೆ ಮಾಡಿದ್ದರು. ಅಲ್ಲದೆ, ವಾರ್ಷಿಕ ಉದ್ಯೋಗ ಕ್ಯಾಲೆಂಡರ್ ಪರಿಚಯಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ 6 ಗ್ಯಾರಂಟಿಗಳ ಜಾರಿ ಪ್ರಕ್ರಿಯೆಗೆ ಮೊದಲ ದಿನವೇ ಚಾಲನೆ ನೀಡಿದ್ದಾರೆ.

ವಿಶೇಷ ಚೇತನ ಮಹಿಳೆಗೆ ಉದ್ಯೋಗ :

ವಿಶೇಷ ಚೇತನ ಮಹಿಳೆ ರಜನಿ ಕಳೆದ ಅಕ್ಟೋಬರ್‌ನಲ್ಲಿ ಹೈದರಾಬಾದ್‌ನ ಗಾಂಧಿ ಭವನದಲ್ಲಿ ರೇವಂತ್ ರೆಡ್ಡಿಯವರನ್ನು ಭೇಟಿಯಾಗಿದ್ದರು. ಎಂಕಾಂ ಪದವಿ ಮುಗಿಸಿದ್ದರೂ ಖಾಸಗಿ ಅಥವಾ ಸರ್ಕಾರಿ ವಲಯದಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಸಂಕಷ್ಟವನ್ನು ವಿವರಿಸಿದ್ದರು. ರಜನಿ ಅವರ ಕಷ್ಟ ಆಲಿಸಿದ್ದ ರೇವಂತ್ ರೆಡ್ಡಿ ಅವರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡಿದ್ದರು. ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ದಿನವೇ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ರಜನಿ ಅವರಿಗೆ ರೇವಂತ್ ರೆಡ್ಡಿ ಕೆಲಸ ಕೊಟ್ಟಿದ್ದಾರೆ.

ತನ್ನ ಪ್ರಮಾಣ ವಚನ ಸಮಾರಂಭಕ್ಕೆ ಬರುವಂತೆ ರಜನಿ ಅವರಿಗೆ ರೇವಂತ್ ರೆಡ್ಡಿ ಆಹ್ವಾನ ನೀಡಿದ್ದರು. ಗುರುವಾರ ಪ್ರಮಾಣ ವಚನ ಸ್ವೀಕಾರದ ನಂತರ ರಜನಿ ಅವರನ್ನು ವೇದಿಕೆಗೆ ಆಹ್ವಾನಿಸಲಾಯಿತು. ಅಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ನೇಮಕಾತಿ ಪತ್ರದೊಂದಿಗೆ ಸಿದ್ಧರಾಗಿದ್ದರು. ಸಾವಿರಾರು ಜನರ ಮುಂದೆ ರೇವಂತ್ ರೆಡ್ಡಿ ವೇದಿಕೆಯಲ್ಲೇ ರಜನಿ ಅವರಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದರು.

ಆರು ಗ್ಯಾರಂಟಿ ನೀಡಿದ ಕಾಂಗ್ರೆಸ್ :

ಕರ್ನಾಟಕದಲ್ಲಿ ಐದು ಗ್ಯಾರಂಟಿ ಘೋಷಿಸಿದ್ದ ಕಾಂಗ್ರೆಸ್, ತೆಲಂಗಾಣದಲ್ಲಿ ಅರು ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಘೋಷಿಸಿತ್ತು. ಅವುಗಳು ಹೀಗಿವೆ..

1.ಮಹಾಲಕ್ಷ್ಮಿ: ಪ್ರತಿ ತಿಂಗಳು ಮನೆಯ ಯಜಮಾನಿಗೆ ₹2,500, ರೂ. ₹500ಕ್ಕೆ ಗ್ಯಾಸ್ ಸಿಲಿಂಡರ್, ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

2.ರೈತ ಭರೋಸಾ: ಪ್ರತಿ ವರ್ಷ ರೈತರಿಗೆ, ಗೇಣಿದಾರ ರೈತರಿಗೆ ಎಕರೆಗೆ ₹15,000, ಕೃಷಿ ಕಾರ್ಮಿಕರಿಗೆ ವರ್ಷಕ್ಕೆ ₹12,000,ಭತ್ತದ ಬೆಳೆಗೆ ವರ್ಷಕ್ಕೆ ₹500 ಬೋನಸ್

3.ಗೃಹ ಜ್ಯೋತಿ: ಈ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್

4. ಇಂದಿರಮ್ಮ ಇಂಡ್ಲು: ಎಲ್ಲಾ ತೆಲಂಗಾಣ ಚಳುವಳಿ ಹೋರಾಟಗಾರರಿಗೆ ವಸತಿ, ಸ್ವಂತ ಮನೆ ಇಲ್ಲದವರಿಗೆ ಮನೆ, ನಿವೇಶನ ಮತ್ತು ಬಡವರಿಗೆ ಮನೆ ನಿರ್ಮಾಣಕ್ಕೆ ₹5 ಲಕ್ಷ

5. ಯುವ ವಿಕಾಸಂ: ವಿದ್ಯಾರ್ಥಿಗಳಿಗೆ ₹5 ಲಕ್ಷ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್, ಪ್ರತಿ ಮಂಡಲದಲ್ಲಿ ತೆಲಂಗಾಣ ಅಂತಾರಾಷ್ಟ್ರೀಯ ಶಾಲೆಗಳನ್ನು ಸ್ಥಾಪಿಸುವುದು

6. ಚೇಯುತ: ಹಿರಿಯ ನಾಗರಿಕರಿಗೆ ₹4,000 ಮಾಸಿಕ ಪಿಂಚಣಿ, ರಾಜೀವ್ ಆರೋಗ್ಯಶ್ರೀ ವಿಮೆಯಡಿ ₹10 ಲಕ್ಷದ ವಿಮೆ

ಈ ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಸಿಎಂ ರೇವಂತ್ ರೆಡ್ಡಿ ಭರವಸೆ ನೀಡಿದ್ದಾರೆ.

ಪ್ರಗತಿ ಭವನದ ಬೇಲಿ ತೆರವು, ಹೆಸರು ಬದಲು

ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಹೈದರಾಬಾದ್‌ನ ‘ಪ್ರಗತಿ ಭವನದ (ತೆಲಂಗಾಣ ಮುಖ್ಯಮಂತ್ರಿಯ ಸರ್ಕಾರಿ ನಿವಾಸ) ಸುತ್ತ ಇರುವ ಕಬ್ಬಿಣದ ಬೇಲಿಯನ್ನು ತೆರವುಗೊಳಿಸಲಾಗಿದೆ. ರಾಜ್ಯದ ಏಳಿಗೆಯಲ್ಲಿ ಭಾಗಿಯಾಗಲು ಬಯಸುವ ಎಲ್ಲರನ್ನೂ ಅಲ್ಲಿ ಬರಮಾಡಿಕೊಳ್ಳಲಾಗುವುದು’ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಪ್ರಗತಿ ಭವನವನ್ನು ‘ಜ್ಯೋತಿರಾವ್ ಫುಲೆ ಪ್ರಜಾ ಭವನ’ ಎಂದು ಮರುನಾಮಕರಣ ಮಾಡಿರುವ ರೇವಂತ್ ರೆಡ್ಡಿ, ‘ಪ್ರತಿ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅಲ್ಲಿ ಪ್ರಜಾ ದರ್ಬಾರ್‌ ನಡೆಸಲಾಗುವುದು. ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಾಗುವುದು’ಎಂದು ಘೋಷಣೆ ಮಾಡಿದ್ದಾರೆ.

ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ನಿನ್ನೆ (ಡಿ.7) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ (ಎಲ್‌ಬಿ) ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು.

ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಇನ್ನುಳಿದಂತೆ ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ದಾಮೋದರ್ ರಾಜನರಸಿಂಹ, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾನ ಅನಸೂಯ, ತುಮ್ಮಲ ನಾಗೇಶ್ವರ್ ರಾವ್, ಕೊಂಡ ಸುರೇಖಾ ಮತ್ತು ಜೂಪಲ್ಲಿ ಕೃಷ್ಣ ರಾವ್ ಸಂಪುಟ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ : ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Good that Poor ppl are getting benefits and these scheme will make poor ppl still more poor and lasy in future and due to these free bees sure govt need to raise prices in all sectors to get fund for the same which effect poor as well as tax payers

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...