Homeಕರ್ನಾಟಕತನ್ವೀರ್ ಹಾಶ್ಮಿ ಕುಟುಂಬದ ಜೊತೆ ಉದ್ಯಮ ಪಾಲುದಾರಿಕೆ ಆರೋಪ: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಯತ್ನಾಳ್

ತನ್ವೀರ್ ಹಾಶ್ಮಿ ಕುಟುಂಬದ ಜೊತೆ ಉದ್ಯಮ ಪಾಲುದಾರಿಕೆ ಆರೋಪ: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಯತ್ನಾಳ್

- Advertisement -
- Advertisement -

ಸುನ್ನೀ ಧಾರ್ಮಿಕ ಮುಖಂಡ ಸೈಯದ್ ತನ್ವೀರ್ ಹಾಶ್ಮಿ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಆರೋಪ ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ತಲುಪಿದೆ.

ನಿನ್ನೆ (ಡಿ.7) ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೆಪಿಸಿಸಿ ವಕ್ತಾರ ಎಸ್.ಎಂ ಪಾಟೀಲ ಗಣಿಹಾರ ನಗರದ ಗಾಂಧಿ ಚೌಕ ಬಳಿ ಇರುವ ಟೂರಿಸ್ಟ್‌ ಹೋಟೆಲ್‌ನಲ್ಲಿ ಶಾಸಕ ಯತ್ನಾಳ್ ಮತ್ತು ತನ್ವೀರ್ ಹಾಶ್ಮಿ ಪಾಲುದಾರರು. ಅಲ್ಲದೆ, ನಗರದ ಹೊರವಲಯದ ಮಹಲ್ ಐನಾಪುರ ಗ್ರಾಮದಲ್ಲಿ ಹಾದು ಹೋಗಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅವರಿಬ್ಬರ ಮನೆಗಳು, ವಾಣಿಜ್ಯ ಮಳಿಗೆಗಳು ಒಟ್ಟಿಗೆ ಇವೆ ಎಂದಿದ್ದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಸಿ ಮುಲ್ಲಾ ಮಾತನಾಡಿ, ತನ್ವೀರ್ ಹಾಶ್ಮಿ ಮತ್ತು ಯತ್ನಾಳ್ ನಡುವೆ ಒಳ್ಳೆಯ ಒಡನಾಟವಿತ್ತು. ಚುನಾವಣೆಯ ಸಂದರ್ಭದಲ್ಲಿ ಅವರಿಬ್ಬರನ್ನು ನನ್ನ ಮನೆಯಲ್ಲೇ ಭೇಟಿ ಮಾಡಿಸಿದ್ದೆ. ಒಟ್ಟಿಗೆ ಊಟ ಮಾಡಿದ್ದಾರೆ ಎಂದು ಹೇಳಿದ್ದರು.

ಈ ಕುರಿತ ಮಾಧ್ಯಮ ವರದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಹಲವರು, ತನ್ವೀರ್ ಹಾಶ್ಮಿಗೆ ಐಸಿಸ್ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕನಿಗೆ ಅವರ ಜೊತೆಯೇ ವ್ಯವಹಾರ ಸಂಬಂಧವಿದೆ ಎಂದಿದ್ದರು.

ಇದಕ್ಕೆ ಎಕ್ಸ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಶಾಸಕ ಯತ್ನಾಳ್, “ನೀವು ನಿಮ್ಮ ಮನೆ ಕೆಲಸವನ್ನು ಸರಿಯಾಗಿ ಮಾಡದಿದ್ದಾಗ ಇದು ಸಂಭವಿಸುತ್ತದೆ. ನನ್ನೊಂದಿಗೆ ಪಾಲುದಾರರಾಗಿರುವ ವ್ಯಕ್ತಿಯನ್ನು ಕರೆತರಲು ನಾನು ನಿಮಗೆ ಸವಾಲು ಹಾಕುತ್ತೇನೆ. ನನ್ನ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಮಾನನಷ್ಟ ಮೊಕದ್ದಮೆ ಹೂಡಲು ನನ್ನ ವಕೀಲರಿಗೆ ಸೂಚಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ತನ್ವೀರ್ ಹಾಶ್ಮಿಗೆ ಐಸಿಸ್ ಜೊತೆ ನಂಟಿದೆ ಎಂದು ಆರೋಪಿದ ಯತ್ನಾಳ್

ವಿಜಯಪುರವನ್ನು ಕೇಂದ್ರವಾಗಿ ಕಾರ್ಯಚರಿಸುತ್ತಿರುವ ಕರ್ನಾಟಕದ ಸುನ್ನೀ ಮುಸ್ಲಿಮರ ಆಧ್ಯಾತ್ಮಿಕ ನಾಯಕ ತನ್ವೀರ್ ಹಾಶ್ಮಿಯವರಿಗೆ ಐಸಿಸ್ ಜೊತೆ ನಂಟಿದೆ. ಅವರ ಜೊತೆ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮ ಗುರುಗಳ ಸಭೆಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ತನ್ವೀರ್ ಹಾಶ್ಮಿ, “ನನಗೆ ಭಯೋತ್ಪಾದಕರ ಜೊತೆ ನಂಟಿದೆ ಎಂಬುವುದು ಖಾತ್ರಿಯಾದರೆ ದೇಶ ತೊರೆಯುತ್ತೇನೆ. ನೀವು ಮಾಡಿರುವ ಆರೋಪ ಸುಳ್ಳು ಎಂಬುವುದು ಖಚಿತವಾದರೆ ದೇಶ ತೊರೆಯಲು ಸಿದ್ದರಿದ್ದೀರಾ?” ಎಂದು ಸವಾಲ್ ಹಾಕಿದ್ದರು.

ತನ್ವೀರ್ ಹಾಶ್ಮಿ ಮೇಲಿನ ಯತ್ನಾಳ್ ಆರೋಪ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ. ಮಾಧ್ಯಮಗಳ ಫ್ಯಾಕ್ಟ್ ಚೆಕ್ ಪ್ರಕಾರ, ಶಾಸಕ ಯತ್ನಾಳ್ ಆರೋಪ ಸುಳ್ಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ : CM ವಿರುದ್ದ BJP ಶಾಸಕ ಯತ್ನಾಳ್ ಮಾಡಿದ ಆರೋಪ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...