Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

- Advertisement -
- Advertisement -

‘ಪ್ರಶ್ನೆಗಾಗಿ ನಗದು’ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡಲಾಗಿದೆ.

ಮಹುವಾ ಮೊಯಿತ್ರಾ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಇಂದು ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಿದರು.

ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ ಉಂಟಾಯಿತು. ಹಾಗಾಗಿ ಸ್ಪೀಕರ್ ಕಲಾಪವನ್ನು ಅಪರಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದರು.

2 ಗಂಟೆಗೆ ಕಲಾಪ ಪುನರಾರಂಭವಾದ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ನೈತಿಕ ಸಮಿತಿಯ ವರದಿಯನ್ನು ಚರ್ಚಿಸಲು ಪ್ರಸ್ತಾವನೆಯನ್ನು ಮಂಡಿಸಿದರು. ಬಳಿಕ ನೈತಿಕ ಸಮಿತಿಯ ವರದಿಯನ್ನು ಸಂಸತ್‌ನಲ್ಲಿ ಅಂಗೀಕರಿಸಲಾಯಿತು.

ಸದನದ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಸರಿಯಾದುದಲ್ಲ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಂಡಿದೆ. ಹಾಗಾಗಿ, ಅವರು ಸಂಸದೆಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಹೇಳಿದರು. ಸಂಸತ್‌ ಕಲಾಪವನ್ನು ನವೆಂಬರ್‌ 11ವರೆಗೆ ಮುಂದೂಡಿಕೆ ಮಾಡಿದರು.

ಸಂಸತ್‌ನಿಂದ ಹೊರ ನಡೆದ ಪ್ರತಿಪಕ್ಷ ಸದಸ್ಯರು:

ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡುವ ನಿರ್ಧಾರವನ್ನು ಸ್ಪೀಕರ್ ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌, ಟಿಎಸಿಂ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸಂಸತ್‌ನಿಂದ ಹೊರ ನಡೆದರು. ಬಳಿಕ ಸಂಸತ್‌ ಭವನದ ಹೊರಗಿನ ಗಾಂಧಿ ಪ್ರತಿಮೆ ಬಳಿ ನಿಂತು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಿಯಮ ಉಲ್ಲಂಘಿಸಿ ಉಚ್ಚಾಟನೆ : ಮಹುವಾ ಆಕ್ರೋಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್‌ನಿಂದ ಉಚ್ಚಾಟನೆ ಮಾಡುವ ಘೋಷಣೆ ಮಾಡುತ್ತಿದ್ದಂತೆ ಪ್ರತಿಪಕ್ಷ ನಾಯಕರೊಂದಿಗೆ ಸಂಸತ್‌ನಿಂದ ಹೊರ ನಡೆದ ಮಹುವಾ ಮೊಯಿತ್ರಾ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನನ್ನನ್ನು ಉಚ್ಚಾಟನೆ ಮಾಡಲಾಗಿದೆ. ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ” ಎಂದರು.

ಮಹುವಾಗೆ ಮಾತನಾಡಲು ಅವಕಾಶ ನಿರಾಕರಣೆ :

ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಮಾತನಾಡಲು ಅವಕಾಶ ನೀಡುವಂತೆ ಮಹುವಾ ಮೊಯಿತ್ರಾ ಸ್ಪೀಕರ್‌ಗೆ ಮನವಿ ಮಾಡಿದರು. ಯಾವುದೇ ಆರೋಪದ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಳ್ಳುವುದು ಆರೋಪಿಯ ಮೂಲಭೂತ ಹಕ್ಕು ಎಂದರು. ಟಿಎಂಸಿ ಸಂಸದರಾದ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವರು ಮಹುವಾ ಬೆಂಬಲಕ್ಕೆ ನಿಂತು, ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್‌ಗೆ ಮನವಿ ಮಾಡಿದರು.

ಆದರೆ, ಮಹುವಾಗೆ ಮಾತನಾಡಲು ಅವಕಾಶ ನಿರಾಕರಿಸಿದ ಸ್ಪೀಕರ್, ಅದಕ್ಕೆ ಕಾರಣಗಳನ್ನು ಕೊಟ್ಟರು. ಈ ಹಿಂದಿನ ಸ್ಪೀಕರ್‌ಗಳು ಇಂತಹ ಪ್ರಕರಣಗಳಲ್ಲಿ ಅನುಸರಿಸಿದ ಸಾಂಪ್ರದಾಯಿಕ ನಿಯಮವನ್ನು ನಾನೂ ಅನುಸರಿಸುತ್ತೇನೆ. ಈ ಹಿಂದೆ ಮಾಜಿ ಸ್ಪೀಕರ್‌ಗಳಾದ ಸೋಮನಾಥ್ ಚಟರ್ಜಿ ಮತ್ತು ಪ್ರಣಬ್ ಮುಖರ್ಜಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದರು.

ಸರ್ಕಾರದ ಪರವಾಗಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, 2005 ರ ‘ಪ್ರಶ್ನೆಗಾಗಿ ನಗದು’ ಪ್ರಕರಣದಲ್ಲಿ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿಯವರ ನಡೆಯನ್ನುಉಲ್ಲೇಖಸಿದರು. ಬಿಜೆಪಿ ಆರು ಮತ್ತು ಕಾಂಗ್ರೆಸ್‌ನ ಒಬ್ಬರು ಸಂಸದರ ಮೇಲೆ ಮಹುವಾ ರೀತಿಯ ಆರೋಪ ಕೇಳಿ ಬಂದಾಗ ಅವರು ನೈತಿಕ ಸಮಿತಿಯ ಮುಂದೆ ಹೇಳಿಕೆ ದಾಖಲಿಸಿದ್ದರು. ಬಳಿಕ ಆರೋಪಿತ ಸಂಸದರಿಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ ಎಂದರು.

ಮಹುವಾ ಮೇಲಿನ ಆರೋಪವೇನು?

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...