Homeಮುಖಪುಟ'ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು' ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

‘ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು’ ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

- Advertisement -
- Advertisement -

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ದೂರಿನ ಕುರಿತು ಶುಕ್ರವಾರ ನಡೆದ ವಿಚಾರಣೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್, ಅಕ್ಟೋಬರ್ 18, 2023ರ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ವಿಚಾರದ ಮೇಲೆ ದಾಖಲಾಗಿರುವ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಮತ್ತು ಅವರ ಹಕ್ಕನ್ನು ರಕ್ಷಿಸಿಕೊಳ್ಳಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ನ್ಯಾಯಾಧೀಶರು ಇಂತ ಪ್ರಕರಣಗಳನ್ನು ನಿರ್ವಹಿಸುವಾಗ ಬೋಧನೆ ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು’ ಎಂದು ಶುಕ್ರವಾರ ಹೇಳಿದೆ.

ಇದು ಹೆಣ್ಣು ಮಕ್ಕಳ ಕುರಿತು ಅತ್ಯಂತ ಆಕ್ಷೇಪಾರ್ಹವಾಗಿದ್ದು, ಸಂಪೂರ್ಣವಾಗಿ ಅನಗತ್ಯ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಹಾಗೂ ಮದುವೆ ಮತ್ತು ಇತರ ಅಪರಾಧಗಳ ಉದ್ದೇಶಕ್ಕಾಗಿ ಮಕ್ಕಳ ಅಪಹರಣ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಸಲಹೆ ನೀಡಿತ್ತು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕಾಗಿ ಹೈಕೋರ್ಟ್ ತನ್ನ ಆದೇಶದಲ್ಲಿ ಯಾವುದೇ ಸೂಕ್ತ ಕಾರಣಗಳನ್ನು ನೀಡಿಲ್ಲ’ ಎಂದು ಹೇಳಿದೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ವಿಚಾರಣೆಯನ್ನು 01-01-24ಕ್ಕೆ ಮುಂದೂಡಿದೆ.

‘ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸುಸುವು ಆಕೆಯ ಕರ್ತವ್ಯ ಹಾಗೂ ಬಾಧ್ಯತೆಯಾಗಿದೆ; ಆಕೆಯ ಘನತೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿಕೊಂಡು ಲಿಂಗಾಧಾರಿತ ಅಡೆತಡೆಗಳನ್ನು ಮೀರಿದ ಸ್ವಯಂ ಅಭಿವೃದ್ಧಿ ಕಾಣಬೇಕು. ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಬೇಕು. ಕೇವಲ ಎರಡು ನಿಮಿಷಗಳ ಲೈಂಗಿಕ ಆನಂದಕ್ಕಾಗಿ ಆಕೆ ಅವಕಾಶ ನೀಡಿದಾಗ ಅವಳು ಕಳೆದುಕೊಳ್ಳುವುದೇ ಹೆಚ್ಚು. ಆದ್ದರಿಂದ ಅವಳ ದೇಹದ ಸ್ವಾಯತ್ತತೆ ಮತ್ತು ಗೌಪ್ಯತೆಯ ಹಕ್ಕನ್ನು ರಕ್ಷಿಸಬೇಕು’ ಎಂಬ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ನಿರ್ದಿಷ್ಟವಾಗಿ ಆಕ್ಷೇಪಣೆಗೆ ತೆಗೆದುಕೊಂಡಿತು.

‘ನ್ಯಾಯಾಧೀಶರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅಥವಾ ಬೋಧಿಸಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ. ನ್ಯಾಯಾಧೀಶರ ಈ ಹೇಳಿಕೆಗಳು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಹದಿಹರೆಯದವರ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತವೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪೋಕ್ಸೋ ಪ್ರಕರಣದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಹೈಕೋರ್ಟ್ ನೀಡಿರು ಖುಲಾಸೆಯ ಆದೇಶವು ‘ಯಾವುದೇ ತರ್ಕಗಳಿಲ್ಲದ’ ಕಾರಣಕ್ಕೆ, ಸದರಿ ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸುವ ಬಗ್ಗೆ ಯೋಚಿಸಬೇಕು ಎಂದು ನ್ಯಾಯಾಲಯವು ಪಶ್ಚಿಮ ಬಂಗಾಳದ ವಕೀಲೆ ಆಸ್ತಾ ಶರ್ಮಾ ಅವರಿಗೆ ಸಲಹೆ ನೀಡಿದೆ.

ಅ.18, 2023 ರಂದು, ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ‘ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಮತ್ತು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸಬೇಕು’ ಎಂದು ಹೇಳಿತ್ತು.

ನಂತರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಹೆಣ್ಣು ಮಗುವಿನ ತಂದೆಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯನ್ನು ರದ್ದುಗೊಳಿಸಿದ್ದಲ್ಲದೆ, ‘ಇದು ವಯಸ್ಸಿನ ದೃಷ್ಟಿಯಿಂದ ಒಪ್ಪದೇ ಇರುವುದಕ್ಕೆ ಸಾಧ್ಯವಿಲ್ಲ. ಆದರೆ, ಇಬ್ಬರು ಹದಿಹರೆಯದವರ ನಡುವಿನ ಒಪ್ಪಿಗೆಯ, ಶೋಷಣೆಯಿಲ್ಲದ ಸಮ್ಮತಿ ಲೈಂಗಿಕ ಸಂಬಂಧದ ಪ್ರಕರಣವಾಗಿದೆ. ಇದರಲ್ಲಿ ಬಲಿಪಶು ಎಂಬುದು ಅಪ್ರಸ್ತುತ’ ಎಂದು ಹೇಳಿದೆ.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...