Homeಕರ್ನಾಟಕ‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

- Advertisement -
- Advertisement -

ಮುಂಬೈಯಲ್ಲಿ ಸೋನಿ ಲೈವ್ ಓಟಿಟಿ ಪ್ಲಾಟ್ ಫಾರ್ಮ್ ಆಯೋಜಿಸಿರುವ ‘ಮಾಸ್ಟರ್ ಶೆಫ್ ಇಂಡಿಯಾ-2023’ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಗೆದ್ದುಕೊಂಡಿದ್ದಾರೆ.

ಮಂಗಳೂರಿನ 24 ವರ್ಷದ ಯುವಕ ಮೊಹಮ್ಮದ್ ಆಶಿಕ್ ಅವರು ಮಾಸ್ಟರ್ ಚೆಫ್ ಇಂಡಿಯಾ 2023ರ ವಿಜೇತರಾಗಿ ಹೊರಹೊಮ್ಮಿದ್ದು, ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್ ರನ್ನರ್ ಅಪ್  ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮೊಹಮ್ಮದ್ ಆಶಿಕ್, ನಾನು ಮಾಸ್ಟರ್‌ಚೆಫ್ ಇಂಡಿಯಾದಲ್ಲಿ ಗೆಲುವಿಗೆ  ಕೃತಜ್ಞನಾಗಿದ್ದೇನೆ. ಎಲಿಮಿನೇಷನ್ ಎದುರಿಸುವುದರಿಂದ ಹಿಡಿದು ಟ್ರೋಫಿ ಹಿಡಿಯುವವರೆಗೆ ಪ್ರತಿ ಕ್ಷಣವೂ ಆಳವಾದ ಪಾಠವಾಗಿತ್ತು. ಈ ಅನುಭವವು ನನ್ನ ಜೀವನವನ್ನು ಸಂಪೂರ್ಣವಾಗಿ ಮರು ರೂಪಿಸಿದೆ. ನಾನು ಸಂಪೂರ್ಣವಾಗಿ ಪಾಕಶಾಲೆಗೆ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ನಾನು ತೀರ್ಪುಗಾರರಿಗೆ ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ. ತೀರ್ಪುಗಾರರಾದ ವಿಕಾಸ್, ರಣವೀರ್ ಮತ್ತು ಪೂಜಾ, ಸಹ ಸ್ಪರ್ಧಿಗಳು, ಪ್ರೇಕ್ಷಕರು ಮತ್ತು ಅಡುಗೆಮನೆಯಲ್ಲಿ ಪ್ರತಿ ದಿನವೂ ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಳೆದ ವರ್ಷ ಮೊಹಮ್ಮದ್ ಆಶಿಕ್ ಮಾಸ್ಟರ್‌ಚೆಫ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿ ಸೋಲು ಕಂಡಿದ್ದರು. ಈ ಬಾರಿ ಸತತ ಪ್ರಯತ್ನದ ಮೂಲಕ ಮಾಸ್ಟರ್‌ಚೆಫ್ ಇಂಡಿಯಾ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಮಾಸ್ಟರ್ ಶೆಫ್ ಇಂಡಿಯಾ ಫೈನಲ್‌ಗೆ  ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಮತ್ತು ಮುಹಮ್ಮದ್ ಆಶಿಕ್ ಪ್ರವೇಶಿಸಿದ್ದರು.

ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ನಗರದ ಜೆಪ್ಪು ಸಮೀಪದ ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರನಾಗಿರುವ ಮುಹಮ್ಮದ್ ಆಶಿಕ್‌ಗೆ ಅಡುಗೆ ತಯಾರಿಯೆಂದರೆ ಅಚ್ಚುಮೆಚ್ಚು. ಹೋಟೆಲ್ ಮ್ಯಾನೇಜ್ ಮೆಂಟ್ ಕಲಿಯಬೇಕೆಂಬ ಬಯಕೆಯಿತ್ತು. ಆದರೆ ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣ ನಿಲ್ಲಿಸಿದ್ದರು. ಪರಿಚಯಸ್ಥರು, ಸ್ನೇಹಿತರ ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ತನ್ನ ಮನೆಯಲ್ಲಿ ರುಚಿಯಾದ ಹೊಸ ಶೈಲಿಯ ಆಹಾರಗಳನ್ನು ತಯಾರಿಸಿ ಕೊಡುತ್ತಿದ್ದರು. ಇದಲ್ಲದೆ ನಗರದ ಕಾಲೇಜುಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸ್ಟಾಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ಕುಲ್ಕಿ ಶರ್ಬತ್ ಸೇರಿ ಹಲವು ಬಗೆಯ ಪಾನೀಯಗಳನ್ನು ತಯಾರಿಸುತ್ತಿದ್ದರು.

ಮೊಹಮ್ಮದ್ ಆಶಿಕ್ ಅವರ ಪಾಕ ಕಲೆಯನ್ನು ಗುರುತಿಸಿದ ಅವರ ಸಂಬಂಧಿ ಮುಹಮ್ಮದ್ ಅಲಿ ಎಂಬವರು ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ್ದರು. ಅದರಂತೆ ತನ್ನ 20ರ ಹರೆಯದಲ್ಲಿ ನಗರದ ಬಲ್ಮಠದಲ್ಲಿ ಮೊಹಮ್ಮದ್‌ ಆಶಿಕ್‌ ‘ಕುಲ್ಕಿ ಹಬ್’ ತೆರೆದಿದ್ದರು. ಪೂರ್ಣಪ್ರಮಾಣದಲ್ಲಿ ‘ ಶೆಫ್ ’ ಆಗಿದ್ದ ಮೊಹಮ್ಮದ್‌ ಆಶಿಕ್‌  ಹೈದರಾಬಾದ್, ಬೆಂಗಳೂರಿನಲ್ಲಿ ನಡೆದ ‘ ಶೆಫ್ ’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

ಇದನ್ನು ಓದಿ: ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...