Homeಕರ್ನಾಟಕ‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಯುವಕ ಮೊಹಮ್ಮದ್ ಆಶಿಕ್

- Advertisement -
- Advertisement -

ಮುಂಬೈಯಲ್ಲಿ ಸೋನಿ ಲೈವ್ ಓಟಿಟಿ ಪ್ಲಾಟ್ ಫಾರ್ಮ್ ಆಯೋಜಿಸಿರುವ ‘ಮಾಸ್ಟರ್ ಶೆಫ್ ಇಂಡಿಯಾ-2023’ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಗೆದ್ದುಕೊಂಡಿದ್ದಾರೆ.

ಮಂಗಳೂರಿನ 24 ವರ್ಷದ ಯುವಕ ಮೊಹಮ್ಮದ್ ಆಶಿಕ್ ಅವರು ಮಾಸ್ಟರ್ ಚೆಫ್ ಇಂಡಿಯಾ 2023ರ ವಿಜೇತರಾಗಿ ಹೊರಹೊಮ್ಮಿದ್ದು, ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್ ರನ್ನರ್ ಅಪ್  ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮೊಹಮ್ಮದ್ ಆಶಿಕ್, ನಾನು ಮಾಸ್ಟರ್‌ಚೆಫ್ ಇಂಡಿಯಾದಲ್ಲಿ ಗೆಲುವಿಗೆ  ಕೃತಜ್ಞನಾಗಿದ್ದೇನೆ. ಎಲಿಮಿನೇಷನ್ ಎದುರಿಸುವುದರಿಂದ ಹಿಡಿದು ಟ್ರೋಫಿ ಹಿಡಿಯುವವರೆಗೆ ಪ್ರತಿ ಕ್ಷಣವೂ ಆಳವಾದ ಪಾಠವಾಗಿತ್ತು. ಈ ಅನುಭವವು ನನ್ನ ಜೀವನವನ್ನು ಸಂಪೂರ್ಣವಾಗಿ ಮರು ರೂಪಿಸಿದೆ. ನಾನು ಸಂಪೂರ್ಣವಾಗಿ ಪಾಕಶಾಲೆಗೆ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ನಾನು ತೀರ್ಪುಗಾರರಿಗೆ ಅಪಾರ ಕೃತಜ್ಞತೆ ಸಲ್ಲಿಸುತ್ತೇನೆ. ತೀರ್ಪುಗಾರರಾದ ವಿಕಾಸ್, ರಣವೀರ್ ಮತ್ತು ಪೂಜಾ, ಸಹ ಸ್ಪರ್ಧಿಗಳು, ಪ್ರೇಕ್ಷಕರು ಮತ್ತು ಅಡುಗೆಮನೆಯಲ್ಲಿ ಪ್ರತಿ ದಿನವೂ ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಳೆದ ವರ್ಷ ಮೊಹಮ್ಮದ್ ಆಶಿಕ್ ಮಾಸ್ಟರ್‌ಚೆಫ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿ ಸೋಲು ಕಂಡಿದ್ದರು. ಈ ಬಾರಿ ಸತತ ಪ್ರಯತ್ನದ ಮೂಲಕ ಮಾಸ್ಟರ್‌ಚೆಫ್ ಇಂಡಿಯಾ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಮಾಸ್ಟರ್ ಶೆಫ್ ಇಂಡಿಯಾ ಫೈನಲ್‌ಗೆ  ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಮತ್ತು ಮುಹಮ್ಮದ್ ಆಶಿಕ್ ಪ್ರವೇಶಿಸಿದ್ದರು.

ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಮಂಗಳೂರು ನಗರದ ಜೆಪ್ಪು ಸಮೀಪದ ಅಬ್ದುಲ್ ಖಾದರ್-ಸಾರಮ್ಮ ದಂಪತಿಯ ಪುತ್ರನಾಗಿರುವ ಮುಹಮ್ಮದ್ ಆಶಿಕ್‌ಗೆ ಅಡುಗೆ ತಯಾರಿಯೆಂದರೆ ಅಚ್ಚುಮೆಚ್ಚು. ಹೋಟೆಲ್ ಮ್ಯಾನೇಜ್ ಮೆಂಟ್ ಕಲಿಯಬೇಕೆಂಬ ಬಯಕೆಯಿತ್ತು. ಆದರೆ ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣ ನಿಲ್ಲಿಸಿದ್ದರು. ಪರಿಚಯಸ್ಥರು, ಸ್ನೇಹಿತರ ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ತನ್ನ ಮನೆಯಲ್ಲಿ ರುಚಿಯಾದ ಹೊಸ ಶೈಲಿಯ ಆಹಾರಗಳನ್ನು ತಯಾರಿಸಿ ಕೊಡುತ್ತಿದ್ದರು. ಇದಲ್ಲದೆ ನಗರದ ಕಾಲೇಜುಗಳಲ್ಲಿ ಕಾರ್ಯಕ್ರಮಗಳು ನಡೆಯುವಾಗ ಸ್ಟಾಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ಕುಲ್ಕಿ ಶರ್ಬತ್ ಸೇರಿ ಹಲವು ಬಗೆಯ ಪಾನೀಯಗಳನ್ನು ತಯಾರಿಸುತ್ತಿದ್ದರು.

ಮೊಹಮ್ಮದ್ ಆಶಿಕ್ ಅವರ ಪಾಕ ಕಲೆಯನ್ನು ಗುರುತಿಸಿದ ಅವರ ಸಂಬಂಧಿ ಮುಹಮ್ಮದ್ ಅಲಿ ಎಂಬವರು ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದ್ದರು. ಅದರಂತೆ ತನ್ನ 20ರ ಹರೆಯದಲ್ಲಿ ನಗರದ ಬಲ್ಮಠದಲ್ಲಿ ಮೊಹಮ್ಮದ್‌ ಆಶಿಕ್‌ ‘ಕುಲ್ಕಿ ಹಬ್’ ತೆರೆದಿದ್ದರು. ಪೂರ್ಣಪ್ರಮಾಣದಲ್ಲಿ ‘ ಶೆಫ್ ’ ಆಗಿದ್ದ ಮೊಹಮ್ಮದ್‌ ಆಶಿಕ್‌  ಹೈದರಾಬಾದ್, ಬೆಂಗಳೂರಿನಲ್ಲಿ ನಡೆದ ‘ ಶೆಫ್ ’ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

 

ಇದನ್ನು ಓದಿ: ಮುಂದಿನ 30 ವರ್ಷ ಸಂಸತ್ತಿನ ಒಳಗೆ- ಹೊರಗೆ ನಿಮ್ಮ ವಿರುದ್ಧ ಹೋರಾಡುತ್ತೇನೆ: ಮಹುವಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...