Homeಮುಖಪುಟಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

ಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

- Advertisement -
- Advertisement -

ಟಿಎಂಸಿ ಸಂಸದೆಯಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಪ್ರಶ್ನೆಗಾಗಿ ನಗದು ಆರೋಪಕ್ಕೆ ಸಂಬಂಧಿಸಿ ನಿನ್ನೆ ಲೋಕಸಭೆ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಸಮಿತಿಯು ವರದಿಯಲ್ಲಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಕುರಿತು ಪರಿಶೀಲಿಸಲು ಸರ್ಕಾರ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಬಿಜೆಪಿ ಸಂಸದ ವಿನೋದ್ ಸೋಂಕರ್ ನೇತೃತ್ವದ ಲೋಕಸಭೆ ಸಮಿತಿಯು 502 ಪುಟಗಳ ವರದಿಯಲ್ಲಿ, ಮಹುವಾ ಅವರ ನಡವಳಿಕೆಯು ಅನೈತಿಕ ಮತ್ತು ಮಹುವಾ ಅವರ ಐಡಿ, ಪಾಸ್‌ವರ್ಡ್ ಸೇರಿದಂತೆ ಲೋಕಸಭೆಯ ಲಾಗಿನ್ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳೊಂದಿಗೆ  ಹಂಚಿಕೊಂಡಿರುವುದು ಸದನದ ನಿಯಮಗಳ ಉಲ್ಲಂಘನೆ. ಇದರಿಂದಾಗಿ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ. ಹಿರಾನಂದನಿ ಜೊತೆಗೆ ಈ ವಿಚಾರಗಳನ್ನು ಹಂಚಿಕೊಳ್ಳಲು ಮಹುವಾ ನಗದು ಸ್ವೀಕರಿಸಿದ್ದಾರೆ ಎಂದು ವರದಿಯು ಹೇಳಿದೆ.

ಮಹುವಾ ಮೊಯಿತ್ರಾ ಮತ್ತು ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಬಗ್ಗೆ ಭಾರತ ಸರ್ಕಾರವು ತನಿಖೆ ನಡೆಸಬೇಕು ಎಂದು ವರದಿ ಹೇಳಿದೆ. ಬಿಎಸ್‌ಪಿ ಸಂಸದ ಕುನಾವರ್ ಡ್ಯಾನಿಶ್ ಅಲಿ ಅವರು ಸೋಂಕರ್ ಅವರು ಮೊಯಿತ್ರಾಗೆ ಕೇಳಿದ ಪ್ರಶ್ನೆಗಳನ್ನು ಕುತಂತ್ರದಿಂದ ತಿರುಚಿದ್ದಾರೆ ಎಂದು ವರದಿಯು ಆರೋಪಿಸಿದೆ ಅವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದೆ.

​ತನ್ನ ಲಾಗಿನ್ ಮಾಹಿತಿಗಳನ್ನು ಹಂಚಿಕೊಂಡ ನಂತರ, ಮಹುವಾ ಐಫೋನ್‌ಗಳು, ವಜ್ರ ಮತ್ತು ಮೌಲ್ಯಯುತ ಐಷಾರಾಮಿ ವಸ್ತುಗಳು ಮತ್ತು ದುಬಾರಿ 35 ಜೋಡಿ ಶೂಗಳನ್ನು ಸ್ವೀಕರಿಸಿದ್ದಾರೆ. ಉಡುಗೊರೆಗಳಲ್ಲಿ ಹತ್ತಾರು ದುಬಾರಿ ಫ್ರೆಂಚ್ ಮತ್ತು ಇಟಾಲಿಯನ್ ವೈನ್‌ಗಳ ಬಾಟಲಿಗಳು, ದುಬೈನಿಂದ ಐಷಾರಾಮಿ ಸೌಂದರ್ಯವರ್ಧಕಗಳ ಗಿಫ್ಟ್‌ , ಬ್ಯಾಗ್‌ಗಳು ಮತ್ತು ಬರ್ಲುಟಿಯಿಂದ ಮೊಸಳೆ ಚರ್ಮದಿಂದ ನಿರ್ಮಿಸಿದ ಬ್ಯಾಗ್‌ಗಳು ಮತ್ತು ನಗದನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿರುವಂತೆ ವಿವಿಧ ಸಚಿವಾಲಯಗಳಿಂದ ಮಾಹಿತಿಗಳನ್ನು ಈ ಬಗ್ಗೆ ಸಂಗ್ರಹಿಸಿದೆ. ಹಿರಾನಂದನಿ ಅವರು ಮಹುವಾ ಅವರ ಖಾತೆಗೆ  ಜುಲೈ 8, 2019ರಿಂದ ಏಪ್ರಿಲ್ 4, 2023ರ ನಡುವೆ 61 ಬಾರಿ ಲಾಗಿನ್‌ ಆಗಿದ್ದಾರೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮಾಹಿತಿ ಉಲ್ಲೇಖಿಸಿದ್ದಾರೆ.

ಅನಧಿಕೃತ ವ್ಯಕ್ತಿಗಳಿಗೆ ಲೋಕಸಭೆಯ ಲಾಗಿನ್‌ ಮಾಹಿತಿ ನೀಡುವುದರಿಂದ ವಿದೇಶಿ ಘಟಕಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆಯ ಸಾಧ್ಯತೆ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಹಿರಾನಂದನಿ ಲಾಗಿನ್ ಮಾಡಿದ ಅವಧಿಯಲ್ಲಿ ಮಹುವಾ 4 ಬಾರಿ ದುಬೈಗೆ ಭೇಟಿ ನೀಡಿದ್ದರು ಎಂದು ಗೃಹ ಸಚಿವಾಲಯ  ಗಮನಿಸಿದೆ.

2023ರ ಅ.20ರಂದು  ಉರ್ಮಿಲ್ ಅಸಿವಾಲ್ ಅವರ ಸಮ್ಮುಖದಲ್ಲಿ ಹಿರನಂದಾನಿ ಅವರು ತಮ್ಮ ಅಫಿಡವಿಟ್‌ಗೆ ಸಹಿ ಹಾಕಿದ್ದಾರೆ ಮತ್ತು ಅಸಿವಾಲ್ ಅವರ ಸೀಲ್ ಮತ್ತು ಸಹಿ ಎರಡನ್ನೂ ಅಧಿಕೃತವೆಂದು ದೃಢಪಡಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ ಎಂದು ಲೋಕಸಬೆಯ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...